ಸೌಲಭ್ಯದ ಕೊರತೆಯಿಂದ ಓದುಗರ ಸಂಖ್ಯೆ ಇಳಿಮುಖ


Team Udayavani, Nov 18, 2018, 11:27 AM IST

m3-soulabh.jpg

ಹುಣಸೂರು: ಸರಕಾರ ಮತ್ತು ಜನಪ್ರತಿನಿಧಿಗಳು ಗ್ರಂಥಾಲಯಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಲು ವಿಫಲವಾಗಿರುವುದರಿಂದಲೇ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಎಲ್ಲಿ ಸೇವೆ ಸಿಗುತ್ತದೋ ಅಲ್ಲಿ ಜನ ದುಂಬಾಲು ಬೀಳುತ್ತಾರೆಂದು ನಗರದ ಮಹಿಳಾ ಕಾಲೇಜು ಗ್ರಂಥಾಧಿಕಾರಿ ಎನ್‌. ಕರುಣಾಕರ್‌ ಅಭಿಪ್ರಾಯಪಟ್ಟರು.

ನಗರದ ಸಾರ್ವಜನಿಕ ಗ್ರಂಥಾಲದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ ಅವರು ಅಮೇರಿಕಾದಂತಹ ಮುಂದುವರಿದ ದೇಶದಲ್ಲಿ ಗ್ರಂಥಾಲಯಗಳಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ,

ಆದರೆ ನಮ್ಮಲ್ಲಿ ಇನ್ನೂ ಸಹ ನಾಲ್ಕು ಕುರ್ಚಿ, ಒಂದು ಮೇಜು, ಹತ್ತಾರು ಪುಸ್ತಕ-ದಿನಪತ್ರಿಕೆ ಓದುವುದಕ್ಕಷ್ಟೆ ಸೀಮಿತವಾಗಿರುವ ದಿನದಲ್ಲಿ ಓದುಗರರನ್ನು ಇತ್ತ ಸೆಳೆಯಲು, ಹೊಸ ಓದುಗನನ್ನು ಸೃಷ್ಟಿಸಲು, ಮೂಲಭೂತ ಸೌಲಭ್ಯಗಳ ಕ್ರಿಯಾಯೋಜನೆ ರೂಪಿಸುವ ಸಲುವಾಗಿ ಎಲ್ಲೆಡೆ ಗ್ರಂಥಾಲಯ ಸಪ್ತಾಹ ಆಚರಿಸಲಾಗುತ್ತಿದೆ,

ಓದುಗರು ಗ್ರಂಥಾಲಯವನ್ನೇ ಆಸ್ತಿ ಎಂದುಕೊಂಡಲ್ಲಿ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ, ಇಲ್ಲಿನ ಉಪನಿರ್ದೇಶಕರ ಒತ್ತಾಸೆಯಿಂದಾಗಿ ಕುಡಿಯುವನೀರು, ಶೌಚಾಲಯ, ಸೋಲಾರ್‌ ಸೇರಿದಂತೆ ಸಾಕಷ್ಟು ಸೌಲಭ್ಯ ದೊರಕಿಸಿಕೊಟ್ಟಿದ್ದಾರೆ. ಕಂಪೂಟರ್‌ ಸೌಲಭ್ಯವನ್ನು ಕಲ್ಪಿಸಿ, ಇ-ಲೈಬ್ರಿರಿ ಆರಂಭಿಸಿ ಕಾಲೇಜು ವಿದ್ಯಾರ್ಥಿಗಳ ನೆರವಿಗೆ ಬರಬೇಕೆಂದರು.

ಕಾರ್ಯಕ್ರಮ ಉಧಾ^ಟಿಸಿದ ಜಿಲ್ಲಾಗ್ರಂಥಾಲಯ ಉಪನಿರ್ದೇಶಕ ಮಂಜುನಾಥ್‌ ಮಾತನಾಡಿ ಸಪ್ತಾಹದ ಅಂಗವಾಗಿ ಜಿಲ್ಲಾಧ್ಯಂತ ಎಲ್ಲ ಗ್ರಂಥಾಲಯಗಳಲ್ಲೂ ಕ್ರಿಯಾಯೋಜನೆ ರೂಪಿಸುವ, ಪುಸ್ತಕ ಪ್ರೇಮಿಗಳನ್ನು ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ, ಸ್ವತಃ ಲೇಖಕರಾಗಿದ್ದ ಮಾಜಿ ಪ್ರಧಾನಿ ಜವಹರಲಾಲ್‌ನೆಹರು ಜನ್ಮದಿನ,

ಜನಸಾಮಾನ್ಯರಿಗೆ ಪುಸ್ತಕಗಳು ಕೈಗೆಟಕುವಂತಾಗಬೇಕೆಂಬ ದೃಷ್ಟಿಯಿಂದ ನ್ಯಾಷನಲ್‌ ಬುಕ್‌ ಟ್ರಸ್ಟ್‌ ಆಫ್‌ ಇಂಡಿಯಾ ಹುಟ್ಟುಹಾಕಿದರು, ನ.14ರ ಅವರ ಜನ್ಮ ದಿನವನ್ನು ಮೊದಲು ಪುಸ್ತಕದಿನವನ್ನಾಗಿ ಆಚರಿಸಲಾಗುತ್ತಿತ್ತು, ನಂತರದಲ್ಲಿ ಪುಸ್ತಕ ಸಪ್ತಾಹ, ಗ್ರಂಥಾಲಯ ವಿಜ್ಞಾನ ಪ್ರವರ್ಧಮಾನಕ್ಕೆ ಬಂದನಂತರ ರಾಷ್ಟ್ರಾದ್ಯಂತ ನ.14 ರಿಂದ 21ರವರೆಗೆ ಗ್ರಂಥಾಲಯ ಸಪ್ತಾಹವನ್ನಾಗಿ ಆಚರಿಸಲಾಗುತ್ತದೆ ಎಂದರು.

ಇಲ್ಲಿನ ಗ್ರಂಥಾಲಯದಲ್ಲಿ 3300ಕ್ಕೂ ಹೆಚ್ಚು ಓದುಗರರು ನೊಂದಾಯಿಸಿಕೊಂಡಿದ್ದು, ನಗರೋತ್ಥಾನ ಯೋಜನೆಯಡಿ ಮೇಲತಸ್ಥಿನ ಕಟ್ಟಡಕ್ಕೆ 20 ಲಕ್ಷರೂ ಅನುದಾನ ದೊರೆತಿದ್ದು, ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದೆ. ಸಾರ್ವಜನಿಕರಿಂದ ಸುಮಾರು 29 ಲಕ್ಷರೂ ಗ್ರಂಥಾಲಯ ಕರ ವಸೂಲಿ ಮಾಡಲಾಗಿದೆ ಎಂದರು.

ಹೊಸದಾಗಿ ಸದಸ್ಯತ್ವ ಪಡೆದ ನಗರಸಭೆ ಅಧ್ಯಕ್ಷ ಎಚ್‌.ವೈ.ಮಹದೇವ್‌ ಕಾರ್ಯಕ್ರಮ ಉಧಾ^ಟಿಸಿ ಮಾತನಾಡಿ ಇಲ್ಲಿಗೆ ಸಾಕಷ್ಟು ಓದುಗರು ಬರುತ್ತಿರುವ ಬಗ್ಗೆ ಮಾಹಿತಿ ಇದ್ದು, ಕುಳಿತು ಓದಲು ವಿಶಾಲವಾದ ಕೊಠಡಿ ವ್ಯವಸ್ಥೆ ಆಗಬೇಕಿದೆ, ಹಾಲಿ ನಿರ್ಮಿಸಲುದ್ದೇಶಿಸಿರುವ ಮೇಲಂತಸ್ತಿನ ಕಟ್ಟಡವನ್ನು ಸಂಬಂಧಿಸಿದವರೊಂದಿಗೆ ಚರ್ಚಿಸಿ ಮಾರ್ಪಾಡುಗೊಳಿಸಿ ವಿಶಾಲ ಕೊಠಡಿ ನಿರ್ಮಿಸಿಕೊಡುವುದಾಗಿ ತಿಳಿಸಿ, ಗ್ರಂಥಾಲಯಕ್ಕೆ ನಗರ ಸಭೆವತಿಯಿಂದ ನೀಡಬೇಕಿರುವ ಶೇ.6 ಅನುದಾನ ಕೊಡಿಸುವ ಭರವಸೆ ನೀಡಿದರು.

ಈ ವೇಳೆ ಓದುಗರರಿಗೆ ಪುಸ್ತಕ ಬಹುಮಾನ ನೀಡಿ ಗೌರವಿಸಲಾಯಿತು, ಹೊಸ ಸದಸ್ಯತ್ವ ಪಡೆದವರಿಗೆ ಕಾರ್ಡ್‌ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಯೋಗಾನಂದ್‌ ಮಾತನಾಡಿದರು, ಜಿಲ್ಲಾ ಗ್ರಂಥಾಲಯದ ಚೈತ್ರಾ, ಗ್ರಂಥಪಾಲಕ ಎ.ಎಂ.ಸತೀಶ್‌, ಮುಖಂಡ ಕಣಗಾಲುರಾಮೇಗೌಡ, ಹಳೇಬೀಡುರಮೇಶ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.