ಅರಮನೆಯಲ್ಲಿ 22ರಿಂದ ಫ‌ಲಪುಷ್ಪ ಪ್ರದರ್ಶನ


Team Udayavani, Dec 20, 2018, 11:43 AM IST

m1-aramane.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷಾಂತ್ಯದ ಸಂಭ್ರಮ ಹಾಗೂ ಹೊಸ ವರ್ಷದ ಸ್ವಾಗತಕ್ಕೆ ಮೈಸೂರು ಜಿಲ್ಲಾಡಳಿತ, ಮಾಗಿ ಉತ್ಸವ ಮತ್ತು ಫ‌ಲಪುಷ್ಪ ಪ್ರದರ್ಶನ ಆಯೋಜಿಸಿದೆ. ಮಾಗಿ ಉತ್ಸವದಲ್ಲಿ ಡಿ.22 ರಿಂದ 31ರವರೆಗೆ ನಗರದಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾದರಿ ವಿನ್ಯಾಸ: ಮೈಸೂರು ಅರಮನೆ ಆವರಣದಲ್ಲಿ ನಾಲ್ಕನೇ ವರ್ಷದ ಫ‌ಲಪುಷ್ಪ ಪ್ರದರ್ಶನ ಆಯೋಜಿಸಿದ್ದು, ಫ‌ಲಪುಷ್ಪ ಪ್ರದರ್ಶನ ವೀಕ್ಷಿಸಲು ಮೈಸೂರು ಅರಮನೆ ಮಂಡಳಿವತಿಯಿಂದ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಸುಮಾರು 20 ಸಾವಿರ ವಿಭಿನ್ನ ರೀತಿಯ ಅಲಂಕಾರಿಕ ಹೂ ಕುಂಡಗಳು, ಬೋನ್ಸಾಯ್‌ ಗಿಡಗಳು, ಅಂದಾಜು 4 ಲಕ್ಷ ಅಲಂಕಾರಿಕ ಹೂವುಗಳಿಂದ ಹಾಗೂ ಊಟಿ ಕಟ್‌ ಫ್ಲವರ್‌ಗಳಿಂದ ಅಲಂಕರಿಸಲಾಗುತ್ತಿದೆ.

ಲಲಿತಮಹಲ್‌ ಅರಮನೆ ಮಾದರಿಯ ವಿನ್ಯಾಸವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗುತ್ತಿದೆ. ಶ್ರೀ ಜಯಚಾಮರಾಜೇಂದ್ರ ಒಡೆಯರ್‌ ರವರ 100ನೇ ವರ್ಷದ ಜಯಂತ್ಯುತ್ಸವದ ಅಂಗವಾಗಿ ಸ್ಟಾಂಡ್‌ ಸೇರಿ 17 ಅಡಿ ಎತ್ತರದ ಮಹಾರಾಜರ ಆಕೃತಿಯನ್ನು ಹೂವುಗಳಿಂದ ಅಲಂಕರಿಸಲಾಗುತ್ತಿದೆ.

ದಸರಾ ಗಜಪಡೆ ಮಾದರಿ: ದಸರಾ ಮಹೋತ್ಸವಕ್ಕೆ ಬರುವ ಗಜಪಡೆಯ ಮಾದರಿಯನ್ನು 9 ಅಡಿ ಎತ್ತರದಲ್ಲಿ ಪಿಂಗ್‌ ಪಾಂಗ್‌ ಹೂವುಗಳಿಂದ ಅಲಂಕರಿಸಲಾಗುತ್ತಿದೆ. ಜಟ್ಟಿ ಕಾಳಗ ಮತ್ತು ತೀರ್ಪುಗಾರರ ಮಾದರಿ, ಶಿವಲಿಂಗಕ್ಕೆ ನಮಸ್ಕರಿಸುತ್ತಿರುವ ಆನೆ ಮತ್ತು ನಂದಿ ಮಾದರಿಗಳನ್ನು ಹೂವು ಮತ್ತು ಪಿಂಗ್‌ ಪಾಂಗ್‌ ಹೂವುಗಳಿಂದ ಅಲಂಕರಿಸಲಾಗುತ್ತಿದೆ. 

ಮಕ್ಕಳ ಆಕರ್ಷಣೆಗಾಗಿ ಕೀಲು ಕುದುರೆ ಅಲಂಕಾರ, 6 ಅಡಿ ಎತ್ತರದ ಸೈಕಲ್‌ ತುಳಿಯುತ್ತಿರುವ ಅಳಿಲು ಚಿತ್ರದ ಮಾದರಿ, ಮಿ.ಬೀನ್‌ ವ್ಯಕ್ತಿ ಚಿತ್ರದ ಮಾದರಿ, ಬಾಹುಬಲಿ ಭಾಗ-2ರ ಚಿತ್ರದ ಮಾದರಿ ಹಡಗು, ವಿಂಟೇಜ್‌ ಕಾರು, ಕುಳಿತ ಭಂಗಿಯಲ್ಲಿರುವ ಎರಡು ನವಿಲುಗಳನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗುತ್ತಿದೆ. 

ತಾಜಾ ಹಣ್ಣು, ತರಕಾರಿ ಬಳಕೆ: ಪ್ರಾಣಿ ಸಂಗ್ರಹಾಲಯವನ್ನು ಹೋಲುವ ರೀತಿ ನವಿಲು, ಅನಕೊಂಡ, ಜಿಂಕೆ, ಹುಲಿ, ಮರಿ ಆನೆ, ಜೀಬ್ರಾ ಸೇರಿದಂತೆ ವಿವಿಧ ಪ್ರಾಣಿಗಳನ್ನು ಹೂವು-ತರಕರಿಗಳಿಂದ ಅಲಂಕರಿಸಲಾಗುವುದು. ವರಹಾ ಸ್ವಾಮಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ವರ್ಟಿಕಲ್‌ ಗಾರ್ಡನ್‌ನಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ರವರ ಮಾದರಿ ಚಿತ್ರವನ್ನು ಅಲಂಕಾರಿಕ ಹೂವು,

ಎಲೆ ಜಾತಿಯ ಗಿಡಗಳಿಂದ ಅಲಂಕರಿಸಲಾಗುವುದು. ಫ‌ಲಪುಷ್ಪ ಪ್ರದರ್ಶನದಲ್ಲಿನ ಮಾದರಿ ಚಿತ್ರಗಳ ತಾಜಾತನ ಕಾಪಾಡಲು ಒಂದು ಬಾರಿ ಹೂವು ಮತ್ತು ತರಕಾರಿಗಳನ್ನು ಬದಲಾಯಿಸಲಾಗುವುದು. ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್‌.ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಜನಾರ್ದನ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಆರ್‌.ರಾಜು ಸುದ್ದಿಗೋಷ್ಠಿಯಲ್ಲಿದ್ದರು.

ಅರಮನೆ ದೀಪಾಲಂಕಾರ: ಫ‌ಲಪುಷ್ಪ ಪ್ರದರ್ಶನದ ಸೊಬಗನ್ನು ಮತ್ತಷ್ಟು ಹೆಚ್ಚಿಸಲು ಅರಮನೆಯ ವಿದ್ಯುತ್‌ ದೀಪಾಲಂಕಾರವನ್ನು ಸಂಜೆ 7 ರಿಂದ 9ಗಂಟೆವರೆಗೆ ಮಾಡಲಾಗುತ್ತದೆ. ಫ‌ಲ ಪುಷ್ಪ ಪ್ರದರ್ಶನ ವೀಕ್ಷಿಸಲು ಬರುವ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಕಾರ್ಯಕ್ರಮದ ಕೊನೆಯ ಭಾಗದಲ್ಲಿ ಔಷಧಯುಕ್ತ ಸಸ್ಯಗಳಾದ ಆಲೋವೇರ, ತುಳಸಿ, ವೀಳ್ಯದೆಲೆಗಳನ್ನು ವಿತರಿಸಲಾಗುವುದು.

ಫ‌ಲ ಪುಷ್ಪ ಪ್ರದರ್ಶನ ವೀಕ್ಷಿಸುವ ವೇಳೆ ಜಯ ಚಾಮರಾಜೇಂದ್ರ ಒಡೆಯರ್‌ರವರು ರಚಿಸಿರುವ ಕೀರ್ತನೆಗಳು ಮತ್ತು ಶಾಸ್ತ್ರೀಯ ಸಂಗೀತವನ್ನು ಅಲಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಛಾಯಾಚಿತ್ರ ಮತ್ತು ವಿಡಿಯೋ ಪ್ರದರ್ಶನ, ಬೊಂಬೆಗಳ ಪ್ರದರ್ಶನವು ನಡೆಯಲಿದೆ.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ: 28 ರಿಂದ 30ರವರೆಗೆ ಅರಮನೆ ಆವರಣದಲ್ಲಿ ಸಂಜೆ 7 ರಿಂದ 9ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 28ರಂದು ಚಲನಚಿತ್ರ ಹಿನ್ನೆಲೆ ಗಾಯಕ ಅಜಯ್‌ ವಾರಿಯರ್‌ ತಂಡದಿಂದ ಸಂಗೀತ ಸಂಭ್ರಮ ಕಾರ್ಯಕ್ರಮ. 29ರಂದು ಪ್ರವೀಣ್‌ ಗೋಡ್ಖಿಂಡಿ ಮತ್ತು ತಂಡದವರಿಂದ ಫ್ಯೂಷನ್‌ ಕಾರ್ಯಕ್ರಮ. 30ರಂದು ಹಿನ್ನೆಲೆ ಗಾಯಕ ವಿಜಯ ಪ್ರಕಾಶ್‌ ಮತ್ತು ತಂಡದವರಿಂದ ಸುಮಧುರ ಕನ್ನಡ ಗೀತೆಗಳ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಿದೆ. 

ಪೊಲೀಸ್‌ ಬ್ಯಾಂಡ್‌, ಪಟಾಕಿ ಸಿಡಿತ: 31ರಂದು ರಾತ್ರಿ 11 ರಿಂದ 12ಗಂಟೆವರೆಗೆ ಪೊಲೀಸ್‌ ಇಲಾಖೆವತಿಯಿಂದ ಕರ್ನಾಟಕ ಮತ್ತು ಆಂಗ್ಲ ಪೊಲೀಸ್‌ ಬ್ಯಾಂಡ್‌ ಕಾರ್ಯಕ್ರಮ. ಹೊಸ ವರ್ಷಾಚರಣೆ ಪ್ರಯುಕ್ತ 12 ರಿಂದ 12.15ಗಂಟೆವರೆಗೆ ಬಣ್ಣಗಳ ಚಿತ್ತಾರಗಳಿಂದ ಕೂಡಿದ ಪಟಾಕಿ ಸಿಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ. 

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.