ಜಲ ದಿಗ್ಬಂಧನಕ್ಕೆ ನಲುಗಿದ ಹನಗೋಡು ಜನತೆ


Team Udayavani, Aug 12, 2019, 3:00 AM IST

jala-digba

ಹುಣಸೂರು: ತಗ್ಗದ ಪ್ರವಾಹ, ತೆರವಾಗದ ಜಲ ದಿಗ್ಬಂಧನ, ವಿದ್ಯುತ್‌ ಕಡಿತ, ಕುಸಿಯುತ್ತಿರುವ ಮನೆಗಳು, ಆರಂಭವಾಗದ ಬಸ್‌ ಸಂಚಾರ, ಮುಂದುವರಿದ ಬೋಟ್‌ ಸಂಚಾರ, ಮೂರಾ ಬಟ್ಟೆಯಾದ ರೈತರ ಬದುಕು…. ಇವು ಜಲ ಸಂಕಷ್ಟಕ್ಕೆ ಸಿಲುಕಿರುವ ಹನಗೋಡು ಭಾಗದ ಜನತೆ ಅನುಭವಿಸುತ್ತಿರುವ ನರಕಯಾತನೆಯ ಬದುಕು. ಒಂದೆಡೆ ಜಲಸಂಕಟ, ಮತ್ತೂಂದೆಡೆ ಜನರ ಬದುಕಿನ ಜಂಜಾಟ. ಹೀಗೆ ಸಾಗುತ್ತಿದೆ ವಾರದಿಂದ ಈ ಭಾಗದ ಜನರ ವಿಧಿಯಾಟ.

ಯಥಾಸ್ಥಿತಿ ಮಳೆ: ಹನಗೋಡು ಅಣೆಕಟ್ಟೆ ಮೇಲೆ 40 ಸಾವಿರ ಕ್ಯೂಸೆಕ್‌ ನೀರು ಹರಿಯುತ್ತಿದೆ. ಸೇತುವೆಗಳು, ಮೋರಿಗಳು ಇನ್ನೂ ಜಲಾವೃತವಾಗಿದ್ದು, ಶನಿವಾರ-ಭಾನುವಾರವೂ ಬೆಳಗ್ಗೆ ಸೂರ್ಯ ಕಾಣಿಸಿಕೊಂಡನಾದರೂ ಮಧ್ಯಾಹ್ನದ ವೇಳೆಗೆ ವರುಣ ಮತ್ತೆ ಪ್ರತ್ಯಕ್ಷನಾಗಿ ತುಂತುರು ಮಳೆ ಸುರಿಸಿದ. ಹೀಗಾಗಿ ನದಿಯಲ್ಲಿ ನಾಲ್ಕು ಅಡಿಗಳಷ್ಟು ಪ್ರವಾಹ ಇಳಿಮುಖವಾಗಿದ್ದರೂ ಸೇತುವೆ ಮಟ್ಟದಲ್ಲಿ ನೀರು ಹರಿಯುತ್ತಿದೆ.

ಬದಲಿ ಮಾರ್ಗ: ಹಳೇ ಸೇತುವೆಯಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರೆ, ಹೊಸ ಸೇತುವೆಯಲ್ಲಿ ಓಡಾಡುವ ವಾಹನಗಳಿಗೆ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಭಾರೀ ವಾಹನ ಹಾಗೂ ಬಸ್‌ ಸಂಚಾರಕ್ಕೆ ಮೈಸೂರಿನಿಂದ ಕೊಡಗು ಭಾಗಕ್ಕೆ ತೆರಳುವ ಬಸ್‌ಗಳು ಕೆ.ಆರ್‌.ನಗರ ಮಾರ್ಗವಾಗಿ ಹಾಗೂ ಹುಣಸೂರಿನಿಂದ ಕೊಡಗಿಗೆ ತೆರಳುವ ಬಸ್‌ ಗಳಿಗೆ ಕಿರಿಜಾಜಿ-ಕಟ್ಟೆಮಳಲವಾಡಿ ಮಾರ್ಗವಾಗಿ ಸಂಚರಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಯಥಾಸ್ಥಿತಿ ಇದೆ.

ಇನ್ನೂ ಸಂಕಷ್ಟದಲ್ಲಿ ಗ್ರಾಮಗಳು: ಜಲಾವೃತಗೊಂಡಿರುವ ಕೋಣನಹೊಸಹಳ್ಳಿ, ಬಿಲ್ಲೇನಹೊಸಹಳ್ಳಿ, ಕೆ.ಜಿ.ಹಬ್ಬನಕುಪ್ಪೆ, ಶಿಂಡೇನಹಳ್ಳಿ, ದೊಡ್ಡಹೆಜೂjರು, ಅಬ್ಬೂರು, ಕಸಬಾ ಹೋಬಳಿಯ ಮರದೂರು, ರಾಮೇನಹಳ್ಳಿ, ಕಿರಿಜಾಜಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಮನೆಗಳಿಗೆ ನುಗ್ಗಿರುವ ನೀರು ಅಪಾಯ ತಂದೊಡ್ಡುತ್ತಿದೆ. ಹನಗೋಡು ಹೋಬಳಿಯ ಶೆಟ್ಟಹಳ್ಳಿ, ಕಾಮಗೌಡನಹಳ್ಳಿ, ಬಿಲ್ಲೇನಹೊಸಹಳ್ಳಿಗಳಲ್ಲಿ ತೆರೆದಿರುವ ಪುನರ್ವಸತಿ ಕೇಂದ್ರದಲ್ಲಿ ಸಂತ್ರಸ್ತ ಕುಟುಂಬಗಳು ಬೀಡು ಬಿಟ್ಟಿದೆ.

ಗರ್ಭಿಣಿ ಆಸ್ಪತ್ರೆಗೆ: ಹನಗೋಡಿಗೆ ಸಮೀಪದ ಕಾಮಗೌಡನಹಳ್ಳಿಯ ಪರಿಹಾರ ಕೇಂದ್ರದಲ್ಲಿದ್ದ ಗರ್ಭಿಣಿ ಮನು ಅವ‌ರನ್ನು ಮಾಜಿ ಶಾಸಕ ಮಂಜುನಾಥ್‌ ತಮ್ಮ ಕಾರಿನಲ್ಲೇ ಹನಗೋಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಅಬ್ಬೂರಿನಲ್ಲಿ ಮನೆಯೊಳಗೆ ನೀರು ತುಂಬಿ ಆಘಾತಕ್ಕೊಳಗಾಗಿ ಅಸ್ವಸ್ಥಗೊಂಡಿದ್ದ ಕುಮಾರಿ ಅವರನ್ನು ಹನಗೋಡು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ, ಮನೆಗೆ ಕಳುಹಿಸಲಾಗಿದೆ.

ವಿದ್ಯುತ್‌ ಇಲ್ಲದೇ ಪರದಾಟ: ಸತತ ಮಳೆಯಿಂದ ಮನೆಗಳು ಬೀಳುತ್ತಲೇ ಇವೆ. ಬಹುತೇಕ ಹಳ್ಳಿಗಳಲ್ಲಿ ಜೀವ ಕೈಯಲ್ಲಿ ಹಿಡಿದು ಬದುಕಬೇಕಿದೆ. ವಿದ್ಯುತ್‌ ಇಲ್ಲದೇ ರಾತ್ರಿ ವೇಳೆ ಹೆದರಿಕೆಯಿಂದಿರುವಂತಾಗಿದ್ದು, ಧಾನ್ಯಗಳ ಹಿಟ್ಟು ಮಾಡಿಸಲು, ಮೊಬೈಲ್‌ ಚಾರ್ಜ್‌ ಮಾಡಲು ಪರದಾಡುತ್ತಿದ್ದಾರೆ. ಒಟ್ಟಾರೆ ಕಳೆದ ಒಂದು ವಾರ ಸುರಿದ ಮಹಾಮಳೆಗೆ ಜನರು ಜರ್ಜರಿತರಾಗಿದ್ದಾರೆ.

ಬೋಟ್‌ನಲ್ಲೇ ಪ್ರಯಣ: ಹುಣಸೂರು ತಾಲೂಕಿನ ಹನಗೋಡು ಬಳಿಯ ಅಬ್ಬೂರು, ಶಿಂಡೇನಹಳ್ಳಿ ಗ್ರಾಮಸ್ಥರು ಬೋಟ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇನ್ನು ಕಿರಂಗೂರು ಗ್ರಾಮ ಜಲದಿಗ್ಬಂಧನಕ್ಕೊಳಗಾಗಿದೆ. ತಹಶೀಲ್ದಾರ್‌ ಬಸವರಾಜು, ತಾಪಂ ಇಒ ಗಿರೀಶ್‌, ಎಸ್‌ಐ ಶಿವಪ್ರಕಾಶ್‌ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಪಂ ಪಿಡಿಒಗಳು ಪರಿಹಾರ ಕಲ್ಪಿಸಲು ಶ್ರಮಿಸುತ್ತಿದ್ದಾರೆ. ತಡವಾಗಿಯಾದರೂ ರಾಜಕಾರಣಿಗಳು ಕೊನೆಗೂ ಹಳ್ಳಿಗಳಿಗೆ ಭೇಟಿ ನೀಡಿ ಸಂತ್ರಸ್ತರನ್ನು ಸಂತೈಸುತ್ತಿದ್ದಾರೆ.

* ಸಂಪತ್‌ಕುಮಾರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.