Hunsur; 3.5 ಲಕ್ಷ ರೂನ ಆಭರಣವಿದ್ದ ಬ್ಯಾಗ್ ಮಾಲಕರಿಗೊಪ್ಪಿಸಿದ ಪೊಲೀಸರು

ಆಟೋದಲ್ಲಿ ಬಿಟ್ಟು ಹೋಗಿದ್ದ ಬ್ಯಾಗ್

Team Udayavani, Apr 24, 2023, 10:29 PM IST

1-sdsads

ಹುಣಸೂರು: ಅಪರಿಚಿತ ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗನ್ನು ಪತ್ತೆಮಾಡಿ 3.5 ಲಕ್ಷರೂ ಬೆಲೆಬಾಳುವ ಆಭರಣವನ್ನು ಕಳೆದುಕೊಂಡಿದ್ದ ಮಾಲಿಕರಿಗೆ ನಗರ ಠಾಣೆ ಪೊಲೀಸರು ಒಪ್ಪಿಸಿದ್ದಾರೆ.

ಹುಣಸೂರು ನಗರದ ಶಬ್ಬೀರ್‌ನಗರದ ಸಫೀರ್ ಅಹಮದ್, ರಜಿಯಾ ಬೇಗಂ ಚಿನ್ನಾಭರಣದ ಬ್ಯಾಗ್ ಕಳೆದುಕೊಂಡಿದ್ದವರು.

ಶಬ್ಬೀರ್‌ನಗರದ ಸಫೀರ್ ಅಹಮದ್ ಮತ್ತವರ ಪತ್ನಿ ರಜಿಯಾಬೇಗಂ ತಮ್ಮ ಮನೆಯ ಬಳಿಯಿಂದ ಶನಿವಾರ ಸಂಜೆ 6 ಗಂಟೆ ವೇಳೆಯಲ್ಲಿ ಆಟೋ ಹತ್ತಿ ನಗರದ ಬಸ್ ನಿಲ್ದಾಣಕ್ಕೆ ಬಂದು ಕೆ.ಆರ್.ನಗರ ಕಡೆಗೆ ತೆರಳುವ ಬಸ್ ಹತ್ತಿ ಹಾಸನದತ್ತ ಪ್ರಯಾಣ ಬೆಳೆಸಿದ್ದರು, ಹಾಸನಕ್ಕೆ ಹೋಗುವ ವೇಳೆ ಚಿನ್ನಾಭರಣವಿದ್ದ ಬ್ಯಾಕ್ ಕಾಣೆಯಾಗಿರುವುದು ಪತ್ತೆಯಾಗಿದೆ. ತಕ್ಷಣವೇ ವಾಪಸ್ ಮರಳಿ ಮನೆಯಲ್ಲಿ ಹುಡುಕಾಡಿ ನಂತರ ರಾತ್ರಿ ಠಾಣೆಗೆ ಬಂದು ರಾತ್ರಿ 10 ರ ವೇಳೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಟೋ ಪತ್ತೆಗೆ ಕ್ರಮ
ದೂರು ದಾಖಲಾಗುತ್ತಿದ್ದಂತೆ ಕಾರ್ಯ ಪ್ರವೃತ್ತರಾದ ಇನ್ಸ್ಪೆಕ್ಟರ್ ದೇವೇಂದ್ರರ ನೇತೃತ್ವದಲ್ಲಿ ಎ.ಎಸ್.ಐ.ರವಿ ಹಾಗೂ ಸಿಬ್ಬಂದಿಗಳು ನಗರದ ವಿವಿಧ ಆಟೋ ನಿಲ್ದಾಣ ಮತ್ತಿತರ ಕಡೆಗಳಲ್ಲಿ ಹುಡುಕಾಟ ನಡೆಸಿ, ಬಸ್ ನಿಲ್ದಾಣದ ರಸ್ತೆ ಬದಿಯ ಅಂಗಡಿಗಳ ಸಿ.ಸಿ.ಕ್ಯಾಮರಾದಲ್ಲಿ ದಾಖಲಾಗಿದ್ದ ಆಟೋವನ್ನು ಕೊನೆಗೂ ಲಾಲ್‌ಬಂದ್ ಬೀದಿಯ ಮನೆ ಬಳಿಯಲ್ಲಿ ನಿಂತಿರುವುದು ಪತ್ತೆಯಾಯಿತು. ಆಟೋ ಚಾಲಕ ಮಹಮದ್ ಇಲಿಯಾಸ್ ಚಿನ್ನಾಭರಣವಿದ್ದ ಬ್ಯಾಂಗ್‌ನ್ನು ಗಮನಿಸದೆ ತನ್ನ ಆಟೋವನ್ನು ಮನೆ ಮುಂದೆ ನಿಲ್ಲಿಸಿದ್ದರು. ಆಟೋದಲ್ಲಿ ಹುಡುಕಾಟ ನಡೆಸಿದ ವೇಳೆ ಚಿನ್ನಾಭರಣ ಇದ್ದ ಬ್ಯಾಗ್ ಸೀಟಿನ ಹಿಂಬದಿಯಲ್ಲಿ ಪತ್ತೆಯಾಯಿತು.

ಆಟೋಸೀಟಿನ ಹಿಂಬದಿಯಲ್ಲಿ ಇಟ್ಟು ಪ್ರಯಾಣಿಕ ಸಫೀರ್ ಅಹಮದ್ ಇಳಿದು ಬಸ್ ಹತ್ತಿದ್ದರು. ಚಾಲಕ ಸಹ ಗಮನಿಸದೆ ಮನೆಗೆ ತೆರಳಿದ್ದರು. ಇನ್ಸ್ಪೆಕ್ಟರ್ ದೇವೇಂದ್ರರವರು ಚಿನ್ನಾಭರಣವಿದ್ದ ಬ್ಯಾಗನ್ನು ಮಾಲಿಕ ಸಫೀರ್ ಅಹಮದ್‌ರಿಗೆ ಒಪ್ಪಿಸಿದರು. ಕಳೆದು ಹೋಗಿದ್ದ ೬೫ ಗ್ರಾಂ.ಚಿನ್ನಾಭರಣ ಸಿಕ್ಕ ಸಂಭ್ರಮದಲ್ಲಿ ಸಫೀರ್ ಅಹಮದ್ ಪೊಲೀಸರು ಹಾಗೂ ಆಟೋ ಚಾಲಕನಿಗೆ ಧನ್ಯವಾದ ಹೇಳಿ ಮನೆಯತ್ತ ತೆರಳಿದರೆ, ಮಾಲಿಕರಿಗೆ ಆಭರಣವನ್ನು ಮರಳಿಸಿದ ಸಂತಸದಲ್ಲಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.