ಬೆಳಗ್ಗೆಯೇ ಮುಗಿಯುತ್ತಿದ್ದ ಪಿಯು ತರಗತಿ ಇನ್ನೂ ಪೂರ್ಣಾವಧಿ


Team Udayavani, Aug 28, 2019, 3:00 AM IST

mornng

ಕೆ.ಆರ್‌.ನಗರ: ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ತರಗತಿಗಳು ಒಂದೇ ಕಟ್ಟಡದಲ್ಲಿ ನಡೆಯುತ್ತಿದ್ದು, ಕೊಠಡಿಗಳ ಕೊರತೆಯಿಂದ ಈವರೆಗೆ ಪಿಯುಸಿ ವಿದ್ಯಾರ್ಥಿನಿಯರ ತರಗತಿಗಳನ್ನು ಬೆಳಗ್ಗೆ 8ರಿಂದ 11.30ವರೆಗೆ ಮಾತ್ರ ನಡೆಸಲಾಗುತ್ತಿತ್ತು. ಇದೀಗ ಕೊಠಡಿಗಳನ್ನು ನಿರ್ಮಿಸಿದ್ದು, ಇನ್ನು ಮುಂದೆ ಪೂರ್ಣಾವಧಿ ತರಗತಿಗಳು ನಡೆಯಲಿವೆ ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇನ್ನು ಮುಂದೆ ಪದವಿ ಪೂರ್ವ ಶಿಕ್ಷಣಕ್ಕೆ ಬೇರೆ ಕಟ್ಟಡವಿರುವುದರಿಂದ ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30ರವರೆಗೆ ಕಾಲೇಜಿನ ತರಗತಿಗಳನ್ನು ನಡೆಸಬೇಕು. ಹಳೆಯ ಕಟ್ಟಡದಲ್ಲಿ ಪ್ರೌಢಶಾಲಾ ತರಗತಿಗಳನ್ನು ಮಾತ್ರ ನಡೆಸಬೇಕು ಎಂದು ಸೂಚಿಸಿದರು.

ಕೋಟಿ ವೆಚ್ಚದ ಕೊಠಡಿ: ಒಂದು ಕೋಟಿ ರೂ. ವೆಚ್ಚದಲ್ಲಿ ನೆಲ ಅಂತಸ್ತಿನಲ್ಲಿ 8 ಕೊಠಡಿಗಳು, ಮೊದಲ ಮೇಲಂತಸ್ತಿನಲ್ಲಿ 6 ಕೊಠಡಿಗಳು ಮತ್ತು ಶೌಚಾಲಯ ನಿರ್ಮಿಸಲಾಗಿದ್ದು, ಅವಶ್ಯಕತೆ ಇದ್ದರೆ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಅನುದಾನ ನೀಡಲಾಗುವುದು. ಉಪನ್ಯಾಸಕರು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.

ಮತ್ತಷ್ಟು ಕೋರ್ಸ್‌ ಆರಂಭ: ವಿದ್ಯಾರ್ಥಿಗಳು ಪದವಿ ಪೂರ್ವ, ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯಲು ಬೇರೆ ಕಾಲೇಜುಗಳಿಗೆ ದಾಖಲಾಗದೆ ತಾಲೂಕಿನವರಿಗೋಸ್ಕರ ಮಂಜೂರು ಮಾಡಿಸಿರುವ ಪಟ್ಟಣದ ಕಾಲೇಜುಗಳಲ್ಲಿಯೇ ವ್ಯಾಸಂಗ ಮಾಡಬೇಕು ಎಂದು ಮನವಿ ಮಾಡಿದ ಸಾ.ರಾ.ಮಹೇಶ್‌, ಮುಂದಿನ ದಿನಗಳಲ್ಲಿ ಮತ್ತಷ್ಟು ಕೋರ್ಸ್‌ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಧ್ಯಯನ, ಸಂಸ್ಕಾರ: ವಿದ್ಯಾರ್ಥಿಗಳು ಜ್ಯಾತ್ಯತೀತ ಮನೋಭಾವ ಬೆಳೆಸಿಕೊಳ್ಳುವುದರ ಜತೆಗೆ ಸ್ನೇಹಿತರು ಸೇರಿದಂತೆ ಯಾರ ನಂಬಿಕೆಗೂ ದ್ರೋಹ ಮಾಡದಂತೆ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಕಾಲೇಜು ವ್ಯಾಸಂಗದ ದಿನಗಳಲ್ಲಿ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಜೊತೆಗೆ ಉತ್ತಮ ಸಂಸ್ಕಾರ ಕಲಿಯಬೇಕು. ಇದರಿಂದ ದೇಶದ ಸಂಸ್ಕೃತಿ ಉಳಿದು ಅಭಿವೃದ್ಧಿª ಹೊಂದಲು ಸಹಕಾರಿಯಾಗಲಿದೆ ಎಂದು ಕಿವಿಮಾತು ಹೇಳಿದರು.

ಜೇಟ್ಲಿ ನಿಧನಕ್ಕೆ ಸಂತಾಪ: ಇದೇ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಅರುಣ್‌ಜೇಟ್ಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಕಾಲೇಜು ಪ್ರಾಂಶುಪಾಲ ಡಿ.ಜಿ.ಗೋಪಾಲ್‌, ಸಿಡಿಸಿ ಸದಸ್ಯರಾದ ಭಾನುಮತಿ ಹರೀಶ್‌, ಶ್ರೀನಿವಾಸ್‌, ಕೆ.ಸಿ.ಲೋಕೇಶ್‌, ಕೃಷ್ಣಶೆಟ್ಟಿ, ಎಂ.ಕೆ.ಮಹದೇವ್‌, ಪುರಸಭೆ ಸದಸ್ಯರಾದ ಸಂತೋಷ್‌ಗೌಡ, ಸಿ.ಉಮೇಶ್‌, ಮಾಜಿ ಸದಸ್ಯರಾದ ಜಯಕುಮಾರ್‌, ಸೈಯದ್‌ ಅಸ್ಲಾಂ, ಕೆ.ಬಿ.ಸುಬ್ರಹ್ಮಣ್ಯ, ತಾಪಂ ಮಾಜಿ ಸದಸ್ಯ ನಾಗಣ್ಣ, ಜಿಪಂ ಎಇಇ ಮಂಜುನಾಥ್‌, ಮುಖಂಡರಾದ ಎಚ್‌.ಆರ್‌.ಮಧುಚಂದ್ರ, ಕಾಂತರಾಜು, ಎಂ.ಎಸ್‌.ಕಿಶೋರ್‌, ಜಗದೀಶ್‌, ಕೇಬಲ್‌ವುಂಜು, ಕೆ.ಎಸ್‌.ಮಲ್ಲಪ್ಪ, ಸಿ.ಜೆ.ಆನಂದ್‌, ಎಚ್‌.ಪಿ.ಹರೀಶ್‌, ಕೆ.ಎಲ್‌.ಆದರ್ಶ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.