ಕೆರೆಯ ಕಟ್ಟೆ ಒಡೆದು ಕೊಚ್ಚಿ ಹೋದ ರಸ್ತೆ


Team Udayavani, Aug 14, 2019, 3:00 AM IST

kee-katte

ಹುಣಸೂರು: ನಾಗರಹೊಳೆ ಉದ್ಯಾನದೊಳಗಿನ ಕಲ್ಲಹಳ್ಳ ಕೆರೆಯ ಹೆಚ್ಚುವರಿ ನೀರು ಹರಿಯುವ ದೊಡ್ಡ ಮೋರಿ ಬಳಿಯ ರಸ್ತೆ ಕೊಚ್ಚಿ ಹೋಗಿದ್ದು, ಹುಣಸೂರು-ನಾಗರಹೊಳೆ-ಕೊಡಗಿನ ಕುಟ್ಟ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಉದ್ಯಾನದಲ್ಲಿ ಕಳೆದ 15 ದಿನಗಳಿಂದ ಬೀಳುತ್ತಿದ್ದ ಭಾರೀ ಮಳೆಯಿಂದ ಕಲ್ಲಹಳ್ಳ ಕೆರೆಗೆ ಅಪಾರ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಕೆರೆಗೆ ನಿರ್ಮಿಸಿದ್ದ ಔಟ್‌ಲೆಟ್‌(ಹೆಚ್ಚುವರಿ ನೀರು ಹರಿಯಲು ನಿರ್ಮಿಸಿದ್ದ ಕಟ್ಟೆ) 10 ಮೀಟರ್‌ ನಷ್ಟು ಒಡೆದು ರಭಸವಾಗಿ ಹರಿದ ನೀರು ಅರ್ಧ ರಸ್ತೆಯನ್ನೇ ಹೊತ್ತೂಯ್ದಿದೆ.

ಕಲ್ಲಹಳ್ಳ ವಲಯದ ರಸ್ತೆ ಬದಿಯಲ್ಲೇ ಇರುವ ಕಲ್ಲಹಳ್ಳ ದೊಡ್ಡಕೆರೆಯಲ್ಲಿ ನೀರು ಸಂಗ್ರಹಗೊಂಡು ವನ್ಯಜೀವಿಗಳಿಗೆ ವರ್ಷವಿಡೀ ನೀರಿನ ದಾಹ ಇಂಗಿಸುವ ಸಂಜೀವಿನಿ ಕೆರೆಯಾಗಿತ್ತು. ಆದರೆ, ಸತತ ಮಳೆಯಿಂದ ಎಲ್ಲಾ ಹಳ್ಳ-ಕೊಳ್ಳ, ತೋಡುಗಳಿಂದ ನೀರು ಒಮ್ಮೆಲೆ ಹರಿದು ಬಂದಿದ್ದರಿಂದ ಚಿಕ್ಕದಾಗಿರುವ ಮೋರಿಯ ಒಂದು ಪಾರ್ಶದ ರಸ್ತೆಯನ್ನು ಕೊರೆದು ಮುನ್ನುಗ್ಗಿದೆ. ಅಲ್ಲದೇ ಈ ಬಾರಿಯ ಮಹಾಮಳೆಯು ನಾಗರಹೊಳೆ ಉದ್ಯಾನದ ಎಲ್ಲಾ ವಲಯಗಳಲ್ಲೂ ಅಲ್ಲಲ್ಲಿ ಚೆಕ್‌ ಡ್ಯಾಂ, ಕೆರೆಏರಿ, ರಸ್ತೆಗಳಿಗೆ ಹಾನಿಯಾಗಿರುವ ಬಗ್ಗೆಯೂ ವರದಿಯಾಗಿದೆ. ಇದು ವಿರಾಜಪೇಟೆ ತಾಲೂಕು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರಲಿದೆ.

ಸಂಚಾರ ಸ್ಥಗಿತ: ರಸ್ತೆ ಹಾಳಾಗಿರುವುದರಿಂದ ಮೈಸೂರು, ಹುಣಸೂರು, ಎಚ್‌.ಡಿ.ಕೋಟೆ ತಾಲೂಕುಗಳಿಂದ ಕೊಡಗಿನ ಕುಟ್ಟ, ಬಿರುನಾಣಿ, ಬಾಳೆಲೆ, ಕಾರ್ಮಾಡು, ಕಾನೂರು ಮತ್ತಿತರ ಕಡೆಗೆ ತೆರಳುತ್ತಿದ್ದ ಈ ಮಾರ್ಗದ ಎಲ್ಲಾ ಬಸ್‌ ಸಂಚಾರ ಸ್ಥಗಿತಗೊಂಡಿದೆ. ಹುಣಸೂರು ತಾಲೂಕಿನಿಂದ ನಿತ್ಯ ಕೊಡಗಿನ ಎಸ್ಟೇಟ್‌ಗಳಿಗೆ ಸಹಸ್ರಾರು ಮಂದಿ ಕೂಲಿ ಕೆಲಸಕ್ಕೆ ತೆರಳುವವರಿಗೂ ತೊಂದರೆಯಾಗಿದ್ದು, ಶೀಘ್ರವೇ ರಸ್ತೆ ದುರಸ್ತಿ ಕಾರ್ಯ ನಡೆಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಾಗರಹೊಳೆ ಹುಲಿ ಯೋಜನೆ ಸಿಎಫ್ ನಾರಾಯಣಸ್ವಾಮಿ, ನಾಗರಹೊಳೆ ಉದ್ಯಾನದೊಳಗಿನ ಈ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಲಿದ್ದು, ರಸ್ತೆ ಹಾಳಾಗಿರುವ ಬಗ್ಗೆ ಮಾಹಿತಿ ನೀಡಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಕೋರಲಾಗಿದೆ ಎಂದರು.

ಹುಣಸೂರು-ನಾಗರಹೊಳೆ-ಕೊಡಗಿನ ಕುಟ್ಟ ಮುಖ್ಯ ರಸ್ತೆ ಹಾನಿಯಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಇಂದೇ (ಮಂಗಳವಾರ) ಸ್ಥಳಕ್ಕೆ ಎಂಜಿನಿಯರ್‌ಗಳನ್ನು ಕಳುಹಿಸಿ ವರದಿ ಪಡೆದು ಶೀಘ್ರ ದುರಸ್ತಿಕಾರ್ಯ ಕೈಗೆತ್ತಿಕೊಳ್ಳಲಾಗುವುದು.
-ಸುರೇಶ್‌, ವಿರಾಜಪೇಟೆ ತಾ.ಲೋಕೋಪಯೋಗಿ ಇಲಾಖೆ ಎಇಇ

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.