ಮಣ್ಣು ಉಳಿಸಿ ಅಭಿಯಾನಕ್ಕೆ ಸಂಭ್ರಮದ ತೆರೆ

ಮಣ್ಣು ಉಳಿಸಿ ಎಂದು ಜಗತ್ತಿನಾದ್ಯಂತ ಸಂಚಾರ ಮಾಡಿ ಜಾಗೃತಿ ಮೂಡಿಸಿದ್ದಾರೆ.

Team Udayavani, Jun 20, 2022, 6:05 PM IST

ಮಣ್ಣು ಉಳಿಸಿ ಅಭಿಯಾನಕ್ಕೆ ಸಂಭ್ರಮದ ತೆರೆ

ಮೈಸೂರು: ಜಗತ್ತಿನಾದ್ಯಂತ 100 ದಿನ, ಅಂದಾಜು 27 ಸಾವಿರ ಕಿ.ಮೀ ಕ್ರಮಿಸಿದ ಈಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದ “ಮಣ್ಣು ಉಳಿಸಿ’ ಅಭಿಯಾನ ಮೈಸೂರಿನಲ್ಲಿ ಭಾನುವಾರ ಸಂಪನ್ನಗೊಂಡಿತು.

ನಗರದ ಮಾನಸಗಂಗೋತ್ರಿಯ ಬಯಲುರಂಗಮಂದಿರದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯ ಸಮ್ಮುಖದಲ್ಲಿ “ಮಣ್ಣು ಉಳಿಸಿ’ ಅಭಿಯಾನ ಅದ್ಧೂರಿಯಾಗಿ ತೆರೆಕಂಡಿತು. 2022ರ ಮಾ.21ರಂದು ಸದ್ಗುರು ಜಗ್ಗಿ ವಾಸುದೇವ ಅವರು ಲಂಡನ್‌ನಲ್ಲಿ ಅಭಿಯಾನದ ಅಂಗವಾಗಿ ಬೈಕ್‌ನಲ್ಲಿ ಪ್ರವಾಸ ಆರಂಭಿಸಿದ್ದರು. 74 ರಾಷ್ಟ್ರಗಳು ಸಂಚರಿಸಿ ಮಣ್ಣು ಸಂರಕ್ಷಣೆ ಕುರಿತು ಅರಿವು ಮೂಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸದ್ಗುರು ಜಗ್ಗಿ ವಾಸುದೇವ್‌ ಅವರು, ಈ ಅಭಿಯಾನಕ್ಕೆ 74 ದೇಶಗಳ ಬೆಂಬಲ ಸಿಕ್ಕಿದೆ. ಅಷ್ಟೇ ಅಲ್ಲ, ಮಣ್ಣಿನ ಸಂರಕ್ಷಣೆ ಕುರಿತು ತಜ್ಞರು ಸಿದ್ಧರಪಡಿಸಿರುವ ವೈಜ್ಞಾನಿಕ ವರದಿಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ನೀಡಿದ್ದಾರೆ. ಈ ವರದಿಯನ್ನು ಜಾರಿ ಮಾಡಲು ಗಂಭೀರ ಚಿಂತನೆ ಮಾಡಿವೆ. ಜತೆಗೆ, ಅದಕ್ಕಾಗಿ ತಜ್ಞರ ಸಮಿತಿ ರಚನೆ ಮಾಡುವುದಾಗಿ ಆಶ್ವಾಸನೆ ನೀಡಿವೆ ಎಂದು ತಿಳಿಸಿದರು.

ಮಣ್ಣು ಸಾಮಾನ್ಯ ಸಂಗತಿ. ಅದು ಜೀವನ ಪ್ರಶ್ನೆ. ಒಂದು ವರ್ಷದಲ್ಲಿ 20 ಸಾವಿರ ವಿವಿಧ ಜೀವಚರಗಳು, ಜೀವ ಪ್ರಭೇದಗಳು ನಶಿಸುತ್ತಿವೆ. ಮುಂದಿನ 20-25 ವರ್ಷದಲ್ಲಿ ಜೀವಸಂಕುಲ ನಶ್ವರವಾಗುವ ಆತಂಕ ಎದುರಾಗಿದೆ. ಅದಕ್ಕಾಗಿ ಮಣ್ಣಿನ ಸಂರಕ್ಷಣೆಗಾಗಿ ನಾವು ಅಭಿಯಾನ ನಡೆಸಬೇಕಾಯಿತು. ವಿವಿಧ ದೇಶಗಳಿಗೆ ಸಂಚರಿಸಿ ಅಲ್ಲಿಯ ಕೃಷಿ ಸಚಿವರು, ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ಮಾಡಿ ಮನವರಿಕೆ ಮಾಡಿಕೊಡಲಾಗಿದೆ. ಈ ಕುರಿತು
ಸಕಾರಾತ್ಮಕ ಸ್ಪಂದನೆಯೂ ದೊರೆತಿದೆ ಎಂದರು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಭೂಮಿ, ಪ್ರಕೃತಿಯನ್ನು ದೇವರಂತೆ ಪೂಜಿಸುವ ಸಂಸ್ಕೃತಿ ಈ ಜಗತ್ತಿನಲ್ಲಿ ಇದ್ದರೆ ಅದು ಭಾರತೀಯ ಸಂಸ್ಕೃತಿ. ಒಬ್ಬ ರೈತ ಭೂಮಿಯನ್ನು ಉಳುಮೆ ಮಾಡುವ ಮೊದಲು ಭೂಮಿಗೆ ಪೂಜೆ ಮಾಡುತ್ತಾನೆ. ಬಿತ್ತನೆ ಮಾಡುವ ಮುನ್ನ, ಫ‌ಸಲು ತೆಗೆಯುವ ಮುನ್ನವೂ ಪೂಜಿಸುವುದು ನಮ್ಮ ಸಂಸ್ಕೃತಿ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಭೂಮಿ ಈಗಿರುವಷ್ಟೇ ಇರುತ್ತದೆ. ಅದನ್ನು ವಿಸ್ತರಣೆ ಮಾಡಲು ಸಾಧ್ಯವಿಲ್ಲ. ಈ ಅಂಶವನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ಭೂಮಿಗೆ ಬೇಡವಾದದ್ದನ್ನು ಸೇರಿಸದೇ ಇದ್ದರೆ ಅದು ಸ್ವತ್ಛವಾಗಿರುತ್ತದೆ. ಒಂದು ಎರೆಹುಳು ಮಾಡುವ ಕೆಲಸವನ್ನು ಮನುಷ್ಯ ತನ್ನ ಇಡೀ ಜೀವನದಲ್ಲಿ ಮಾಡಲಾರ. ಹಾಗಾಗಿ ಭೂ ಸವಕಳಿ, ಭೂಮಿಗೆ ರಾಸಾಯನಿಕ ಸೇರುವುದನ್ನು ತಪ್ಪಿಸಿ ಭೂಮಿಯನ್ನು ರಕ್ಷಿಸಿ ಎಂದು ಕರೆ ನೀಡಿದರು.

ಸದ್ಗುರು ಜಗ್ಗಿ ವಾಸುದೇವ್‌ ಅವರು ಪ್ರಕೃತಿ ಮತ್ತು ಭೂಮಿಯ ಬಗ್ಗೆ ಇಟ್ಟಿರುವ ಅಪಾರ ಪ್ರೇಮವೇ ಈ ಎಲ್ಲಾ ಕಾರ್ಯಕ್ರಮಗಳಿಗೆ ಪ್ರೇರಣೆ. 64ನೇ ವಯಸ್ಸಿನಲ್ಲೂ ಮೋಟರ್‌ ಸೈಕಲ್‌ ಏರಿ 27 ರಾಷ್ಟ್ರಗಳನ್ನು ಸುತ್ತಿ ಭೂಮಿ ಉಳಿಸುವಂತೆ ಜಾಗೃತಿ ಮೂಡಿಸಿದ್ದಾರೆ. ಇದಕ್ಕೂ ಮೊದಲು ರಿವರ್‌ ಫಾರ್‌ ರ್ಯಾಲಿ, ಕಾವೇರಿ ಕಾಲಿಂಗ್‌ ಎಂಬ ರ್ಯಾಲಿ ಮಾಡಿದ್ದರು. ಈಗ ಮಣ್ಣು ಉಳಿಸಿ ಎಂದು ಜಗತ್ತಿನಾದ್ಯಂತ ಸಂಚಾರ ಮಾಡಿ ಜಾಗೃತಿ ಮೂಡಿಸಿದ್ದಾರೆ. ಮುಂದಿನ ರ್ಯಾಲಿ
ಮಾನವೀತೆಗಾಗಿ ಆದರೆ ಒಳ್ಳೆಯದು ಎಂದು ಶುಭ ಹಾರೈಸಿದರು.

ಪ್ರಕೃತಿ ಮತ್ತು ಭೂಮಿಯ ರಕ್ಷಣೆ ಸಂಬಂಧ ನೃತ್ಯ ರೂಪಕವನ್ನು ಕಲಾವಿದರು ಪ್ರದರ್ಶಿಸಿದರು. ಈ ಸಂದರ್ಭ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿ ಭೂಮಿಯನ್ನು ಉಳಿಸುವ ಬಗ್ಗೆ ಪ್ರತಿಜ್ಞೆ ಮಾಡಿದರು. ವೇದಿಕೆಯಲ್ಲಿ ಸಂಸದ ಪ್ರತಾಪ್‌ ಸಿಂಹ ಇದ್ದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.