2 ಲಕ್ಷ ಬೀಜದ ಚೆಂಡಿನಿಂದ ಬರಡು ಭೂಮಿ ಹಸಿರಾಗಿಸುವ ಕಾರ್ಯ


Team Udayavani, Jun 12, 2019, 3:00 AM IST

2lakh-bija

ಮೈಸೂರು: ನಾನು ಕೆರೆ ಕಟ್ಟಿರುವುದು ನನಗಲ್ಲ ನಿಮ್ಮಂತ ವಿದ್ಯಾರ್ಥಿಗಳಿಗೆ, ಯುವಕರಿಗಾಗಿ. ನಾನು ಸತ್ತ ನಂತರ ಕೆರೆಗಳನ್ನು ನೀವೆಲ್ಲ ಉಳಿಸಿ ಬೆಳಿಸಬೇಕು. ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೆರೆ ಕಟ್ಟುವಂತೆ ನಿಮ್ಮ ಅಪ್ಪ ಅವ್ವನಿಗೆ ಒತ್ತಾಯಿಸಿ ಎಂದು ಕೆರೆಗಳ ನಿರ್ಮಾತೃ ಕಾಮೇಗೌಡ ಮಕ್ಕಳೊಂದಿಗೆ ಭಾವನತ್ಮಾಕವಾಗಿ ಮಾತನಾಡಿದರು.

ಜನ ಚೇತನ್‌ ಟ್ರಸ್ಟ್‌, ಸ್ವದೇಶಿ ಜಾಗರಣ ಮಂಚ್‌ ಸಹಯೋಗದಲ್ಲಿ ನಂಜುಮಳಿಗೆ ಸಮೀಪದ ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “2 ಲಕ್ಷ ಚಮತ್ಕಾರಿ ಬೀಜದ ಚೆಂಡಿನಿಂದ ಬರಡು ಭೂಮಿಯನ್ನು ಹಸಿರು ಮಾಡುವ’ ಕಾರ್ಯಾಗಾರ ಹಾಗೂ ಬೀಜದುಂಡೆ ತಯಾರಿಕೆಗೆ ಚಾಲನೆ ನೀಡಿ ಮಾತನಾಡಿದರು.

ಶಿವನಿಗಿಂತ ವೃಕ್ಷ ದೊಡ್ಡದ್ದು, ವೃಕ್ಷಕ್ಕಿಂತ ಗಂಗಮ್ಮ ದೊಡ್ಡವಳು. ವೃಕ್ಷ-ಗಂಗಮ್ಮನನ್ನು ಉಳಿಸಿಕೊಳ್ಳಬೇಕು. ಇತ್ತೀಚಿಗೆ ಸರಿಯಾಗಿ ಮೋಡ ಕಟ್ಟುತ್ತಿಲ್ಲ. ಮಳೆ ಬೀಳುತ್ತಿಲ್ಲ. ಕೆರೆ ಕಟ್ಟೆಗಳು ಬತ್ತಿ ಹೋಗುತ್ತಿವೆ. ಹೀಗಾಗಿ ಮರ ಗಿಡಗಳನ್ನು ನೆಟ್ಟು ಪೋಷಿಸಬೇಕಿದೆ. ಈ ಮೂಲಕ ಮಳೆಯಾಗುವಂತೆ ಮಾಡಬೇಕು.

ಅದಕ್ಕಾಗಿ ಕೆರೆ, ಕಟ್ಟೆಗಳನ್ನು ಕಟ್ಟಿ ಮರ ಗಿಡಗಳನ್ನು ಬೆಳಸಬೇಕು. ಈ ಜವಾಬ್ದರಿಯನ್ನು ಯುವ ಪಿಳಿಗೆಯೇ ಹೊರಬೇಕು. ಮಕ್ಕಳು ಹಠ ಮಾಡಿ, ಉಪವಾಸ ಮಾಡಿ ಪೋಷಕರು ಕೆರೆ ಕಟ್ಟುವಂತೆ ಪ್ರೇರೇಪಿಸಬೇಕು. ಇಲ್ಲವಾದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡುವಂತೆ ಒತ್ತಾಯಿಸಿ ಎಂದು ಮಕ್ಕಳಿಗೆ ಕರೆಕೊಟ್ಟರು.

ನಾನೊಬ್ಬ ಕೆರೆ ಕಟ್ಟಿದರೆ ಪ್ರಯೋಜನವಿಲ್ಲ. ನೀವೆಲ್ಲ ಒಂದಾಗಬೇಕು. ನಿಮಗೆ ಸ್ಥಳ ಕೊಟ್ಟು ಮುಂದಕ್ಕೆ ಹೋಗುವಷ್ಟು ವಯಸ್ಸಾಗಿದೆ ನನಗೆ. ಆದ್ದರಿಂದ ನೀವೆಲ್ಲಾ ಕೆರೆ-ಕಟ್ಟೆ ಉಳಿವಿಗಾಗಿ ಪಣ ತೊಡಬೇಕು. ಸುಧಾರಣೆಗೆ ರಾಜಕಾರಣಿಗಳನ್ನು ನಂಬಿ ಕೂತರೆ ಪ್ರಯೋಜನವಿಲ್ಲ. ನಮ್ಮಂತೆ ಪ್ರಾಣಿ-ಪಕ್ಷಿಗಳಿಗೂ ನೀರು, ನೆರಳು ಬೇಕು. ಅದಿಲ್ಲದಿದ್ದರೆ ಪಾಪ ಅವು ತಾನೆ ಎಲ್ಲಿಗೆ ಹೋದಾವು ಎಂದರು.

ಜನಚೇತನ ಟ್ರಸ್ಟ್‌ ಅಧ್ಯಕ್ಷ ಪ್ರಸನ್ನ ಎನ್‌.ಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಿರುಗಾವಲಿ, ಕಾಲುವೆಗಳು ಮುಚ್ಚಿ ಹೋಗುತ್ತಿರುವ ಕಾರಣಕ್ಕೆ ನದಿಗಳು ಬತ್ತಿ ಹೋಗುತ್ತಿವೆ. ಇದಕ್ಕೆ ಹುಣಸೂರಿನ ಲಕ್ಷ್ಮಣ ತೀರ್ಥ ನದಿ ತಾಜಾ ಉದಾಹರಣೆ.

ಕಿರುಗಾವಲಿ, ಕಾವಲಿಗಳನ್ನು ಉಳಿಸಿಕೊಳ್ಳುವ ಮೂಲಕ ಉಪ ನದಿಗಳನ್ನು ಕಾಪಾಡಿಕೊಳ್ಳಬೇಕು. ಈ ಮೂಲಕ ನದಿಗಳನ್ನು ರಕ್ಷಣೆ ಮಾಡುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ಕಾವೇರಿ ನದಿ ಉಳಿಸಿಕೊಳ್ಳಲು ಅನಿವಾರ್ಯ ಕ್ರಮ ತೆಗದುಕೊಳ್ಳಬೇಕಿದೆ ಎಂದು ತಿಳಿಸಿದರು. ಸ್ವದೇ ಜಾಗರಣ ಮಂಚ್‌ನ ರಾಜ್ಯ ಸಂಯೋಜಕ ಎನ್‌.ಆರ್‌.ಮಂಜುನಾಥ್‌ ಸೇರಿದಂತೆ ಮತ್ತಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.