ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹ
Team Udayavani, Feb 19, 2020, 3:00 AM IST
ಮೈಸೂರು: ಕಾವೇರಿ ಹಾಗೂ ಕಬಿನಿ ಅಚ್ಚುಕಟ್ಟು ನಾಲೆಗಳಿಂದ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು. ನಗರದ ಕಾಡಾ ಕಚೇರಿ ಬಳಿ ಜಮಾಯಿಸಿದ ನೂರಾರು ರೈತರು ನೀರಾವರಿ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಂತ್ರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿದರು.
ಅಲ್ಲದೆ ನಾಲೆಗೆ ನೀರು ಬಿಡುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು. ನಂತರ ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ರೈತರನ್ನು ತಡೆದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಈಗಾಗಲೇ ಬೇಸಿಗೆ ಆರಂಭವಾಗಿದ್ದು, ನೀರಿಲ್ಲದೇ ಭತ್ತ ಒಣಗುತ್ತಿದೆ. ಜನ, ಜಾನುವಾರುಗಳು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ.
ಕಬಿನಿ, ಕಾವೇರಿಯಲ್ಲಿ ನೀರಿದ್ದು, ನಾಲೆಗೆ ನೀರು ಬಿಡುವಂತೆ ಈಗಾಗಲೇ ಮೂರು ಬಾರಿ ನೀರಾವರಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಯಾವ ಪ್ರಯೋಜನವಾಗಲಿಲ್ಲ. ನೀರಾವರಿ ಅಧಿಕಾರಿಗಳು ನಾಲೆಗಳಿಗೆ ನೀರು ಬಿಡದೆ ಮೀನಮೇಷ ಎಣಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತರಿಗೆ ನೀರು ಕೊಟ್ಟರೆ ರೈತರು ಬದುಕಿಕೊಳ್ಳುತ್ತಾರೆ. ಇಲ್ಲದಿದ್ದರೆ ರೈತರು ಸಾವನ್ನಪ್ಪುತ್ತಾರೆ.
ಅಧಿಕಾರಿಗಳು ಸ್ಥಳಕ್ಕಾಗಮಿಸುವವರೆಗೂ ಪ್ರತಿಭಟನೆ ಕೈ ಬಿಡಲ್ಲ. ನಿರ್ಧಾರ ಕೈಗೊಂಡ ನಂತರ ನಾವು ಪ್ರತಿಭಟನೆ ಕೈ ಬಿಡುತ್ತೇವೆ ಎಂದು ಪಟ್ಟುಹಿಡಿದರು. ಬಳಿಕ ರೈತರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕಾಗಮಿಸಿದ ನೀರಾವರಿ ಅಧಿಕಾರಿಗಳು ಮಾತನಾಡಿ, ರೈತರು ಈಗಾಗಲೇ ನಾಲೆಗೆ ನೀರು ಬಿಡುವಂತೆ ಮನವಿ ಮಾಡಿದ್ದರು. ಆದ್ದರಿಂದ ಫೆ.25ರಿಂದ 15 ದಿನ ನೀರು ಬಿಡಲು ನಿರ್ಧರಿಸಲಾಗಿದೆ.
ನಂತರ 10 ದಿನ ನಿಲ್ಲಿಸಿ ನಂತರ 15 ದಿನ ನೀರು ಬಿಡಲು ನಿರ್ಧರಿಸಲಾಗಿದೆ. ಮತ್ತೆ 15 ದಿನ ಒಟ್ಟು ಮೂರು ಬಾರಿ ನೀರು ಬಿಡುವ ಭರವಸೆ ನೀಡಿದರು. ಅಧಿಕಾರಿಗಳು ನೀಡಿದ ಭರವಸೆ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಕೈ ಬಿಟ್ಟು ಸ್ಥಳದಿಂದ ತೆರಳಿದರು.ಅತ್ತಹಳ್ಳಿ ದೇವರಾಜು ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ