“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್
ತೋಟದ ಮನೆಯಲ್ಲಿ ಸಿಕ್ಕಿದ್ದೆಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ
Team Udayavani, May 7, 2024, 11:30 PM IST
ಮೈಸೂರು: ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಪ್ರಕರಣದ ಸಂತ್ರಸ್ತೆ ಹುಣಸೂರಿನ ತೋಟದ ಮನೆಯಲ್ಲಿ ಸಿಕ್ಕಿದ್ದಲ್ಲ. ಒಂದೊಮ್ಮೆ ತೋಟದ ಮನೆಯಲ್ಲಿ ಸಿಕ್ಕಿದ್ದೆಂದು ಸಾಬೀತು ಮಾಡಿದರೆ ನಾನು ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಹಾಗೂ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್ಡ್ರೈವ್ ಪ್ರಕರಣದಲ್ಲಿ ಆರೋಪ ಬಂದಿರುವ ವ್ಯಕ್ತಿ ಮೇಲೆ ಕ್ರಮ ಕೈಗೊಳ್ಳಲಿ. ಆದರೆ ಪ್ರಕರಣವನ್ನು ಎಸ್ಐಟಿಗೆ ವಹಿಸಿದ ಮೇಲೆ ಸಂತ್ರಸ್ತ ಮಹಿಳೆ ಅಪಹರಣವಾಗಿದ್ದಾರೆ ಎಂದು ದೂರು ದಾಖಲಾಗುತ್ತದೆ. ಇದರಲ್ಲಿ ರಾಜ್ಯ ಸರಕಾರದ ಅಣತಿಯಂತೆ ಎ1, ಎ2 ಆರೋಪಿಗ ಳನ್ನಾಗಿ ಮಾಡಲಾಗಿದೆ ಎಂದು ಆರೋಪಿಸಿದರು.
ಸಂತ್ರಸ್ತೆ ಹುಣಸೂರಿನ ರಾಜ ಗೋಪಾಲ್ ಅವರ ತೋಟದಲ್ಲಿ ಇರಲಿಲ್ಲ, ಆಕೆ ಹುಣಸೂರು ನಗರದ ಸಂಬಂಧಿಕರ ಮನೆಯಲ್ಲಿ ತಂಗಿದ್ದರು. ಮಹಿಳೆ ಅಪಹರಣದಲ್ಲಿ ಯಾರು ಭಾಗಿಯಾಗಿದ್ದಾರೆ? ಆಕೆಯ ಪುತ್ರನಿಗೆ ಎಷ್ಟು ಹಣ ಸಂದಾಯವಾಗಿದೆ? ದೂರು ಬರೆದುಕೊಟ್ಟವರು ಯಾರು? ಎಲ್ಲಿ ಬರೆದುಕೊಟ್ಟರು? ಇತ್ಯಾದಿ ಎಲ್ಲದರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಕೆ.ಆರ್. ನಗರ ಶಾಸಕರ ಕುಮ್ಮಕ್ಕಿ
ನಿಂದ ಎಚ್.ಡಿ.ರೇವಣ್ಣ ಮೇಲೆ ಪ್ರಕರಣ ದಾಖಲಾಗಿದೆ ಎಂಬ ಆರೋಪದ ಬಗೆಗಿನ ಪ್ರಶ್ನೆಗೆ ಪ್ರತಿಕ್ರಿಯಿಸಿ, 2018ರ ಚುನಾವಣೆಯಲ್ಲಿ ಭವಾನಿ ರೇವಣ್ಣ ಹಾಲಿ ಶಾಸಕರಿಗೆ ಸಹಾಯ ಮಾಡಿದ್ದರು. ಆ ಶಾಸಕರೇ ಈ ಆರೋಪಕ್ಕೆ ಉತ್ತರಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ
Hunsur; ಬೈಕ್ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ
Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ
Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್ನೋಟ್ ಪತ್ತೆ!
Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ