ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಾಲಕ ಸಾವು
Team Udayavani, Aug 24, 2021, 7:40 PM IST
ಮೈಸೂರು: ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ.
ಹುಲ್ಲೇನಹಳ್ಳಿ ಗ್ರಾಮದ ಮಂಜುನಾಯಕ ಪುತ್ರ ಸುದೀಪ್ (14) ಸ್ಥಳದಲ್ಲಿಯೇ ಸಾವನ್ನಪ್ಪಿದ ಬಾಲಕ. ಮತ್ತೊಬ್ಬ ಸಹೋದರ ಪ್ರದೀಪ್ ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗ್ರಾಮದ ಕಾವೇರಿ ಗಾರ್ಡನ್ ಸಿಟಿ ಲೇಔಟ್ ನಲ್ಲಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತಿತ್ತು. ಟ್ಯಾಂಕ್ ಸಮೀಪ ಸುದೀಪ್, ಪ್ರದೀಪ್ ಸಹೋದರರು ಆಟವಾಡುತ್ತಿದ್ದರು. ಈ ವೇಳೆ ನೀರಿನ ಟ್ಯಾಂಕ್ ಏಕಾಏಕಿ ಕುಸಿದು ಬಿದ್ದಿದೆ.
ಈ ಕುರಿತು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.