ಪ್ರಶ್ನಿಸುವ ಮನೋಭಾವ ಮಹಿಳೆಗೆ ಅಗತ್ಯ


Team Udayavani, Aug 20, 2018, 12:40 PM IST

m4-prashnisuva.jpg

ಮೈಸೂರು: ಮೌಡ್ಯ ವಿರೋಧಿ ಮನೋಭಾವ ಬೆಳೆಸಿಕೊಳ್ಳುವ ಜೊತೆಗೆ ಪ್ರಶ್ನೆ ಮಾಡುವ ಶಿಕ್ಷಣ ಹೆಣ್ಣಿಗೆ ದೊರಕಬೇಕಿದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್‌ ಪ್ರತಿಪಾದಿಸಿದರು. ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಏರ್ಪಡಿಸಿದ್ದ ಮಹಿಳೆ-ರಾಜಕಾರಣ-ಹೊಸದಿಕ್ಕು; ಚುನಾವಣೆ: ಒಳ ಹೊರಗೆ ವಿಷಯ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸುಳ್ಳಿನ ಪ್ರಪಂಚ: ಉತ್ತರ ಹುಡುಕಲು ಸಾಧ್ಯವಾಗುವ ಹಕ್ಕನ್ನು ಸಂವಿಧಾನ ನಮಗೆ ಕೊಟ್ಟಿದೆ. ಪ್ರತಿಯೊಂದು ವಿಷಯದಲ್ಲೂ ಮಹಿಳಾ ಚಳವಳಿ ಸಾಧ್ಯವಾಗಿರುವುದು ಸಂವಿಧಾನದಿಂದಲೇ ಎಂದ ಅವರು, ಹೆಣ್ಣು ಕೂಡ ಮನುಷ್ಯಳು ಎಂಬುದು ಅರಿವಾದಾಗ ಸಂವಿಧಾನ ಜಾರಿ ಸಾಧ್ಯ ಎಂದು ಹೇಳಿದರು.

ನಿರ್ಭಯಾ ಪ್ರಕರಣ ಸಾಂಕೇತಿಕ. ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಅನೇಕ ಪ್ರಕರಣಗಳು ಹೊರಬರದೇ ಮುಚ್ಚಿ ಹೋಗುತ್ತಿವೆ. ಜನತೆ ಕೂಡ ಸತ್ಯವನ್ನು ಒಪ್ಪಿಕೊಳ್ಳುವುದಿಲ್ಲ. ಬದಲಿಗೆ ಸುಳ್ಳನ್ನೇ ಸತ್ಯದ ಮುಖಕ್ಕೆ ಹೊಡೆದಂತೆ ಮಾತನಾಡಿದರೆ ಒಪ್ಪಿಕೊಳ್ಳುತ್ತಾರೆ ಎಂದು ಹೇಳಿದರು.

ಶುದ್ಧಿ: ಪ್ರಾಸ್ತಾವಿಕ ನುಡಿಗಳನ್ನಾಡಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಂ.ಉಮಾಪತಿ, ಚುನಾವಣಾ ಸುಧಾರಣೆಯಾದರೆ ಮಹಿಳಾ ಸಬಲೀಕರಣ ಸಾಧ್ಯ.
ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ಮೀಸಲಿನಿಂದಾಗಿ ಮಹಿಳೆಯರಿಗೆ ಅನುಕೂಲವಾಗಿದೆ. ಇದೇ ರೀತಿಯಲ್ಲಿ ಶಾಸನ ಸಭೆಗಳಲ್ಲೂ ಶೇ.50 ಮಹಿಳಾ ಮೀಸಲಾತಿ ಬರಬೇಕು.

ಈ ಬಗ್ಗೆ ಅಂತಾರಾಷ್ಟ್ರೀಯ ಒತ್ತಡವೂ ಇದೆ. ರಾಜಕೀಯ ಕುಲಗೆಟ್ಟು ಹೋಗಿರುವ ಈ ದಿನಗಳಲ್ಲಿ ಮಹಿಳೆಯರೇ ರಾಜಕಾರಣಕ್ಕೆ ಹೊಸದಿಕ್ಕು ತೋರಬೇಕು. ಹಣದ ಪ್ರಭಾವ ಇಳಿಸಿ ಚುನಾವಣೆ ಸುಧಾರಣೆ ಆಗಬೇಕಾದರೆ, ರಾಜಕೀಯ ಶುದ್ಧಿ ಆಗಬೇಕು. ಇದಕ್ಕೆ ಮಹಿಳಾ ಚಳವಳಿಗಳಾಗಬೇಕು ಎಂದರು.

ಮಹಿಳೆ ಬಂಧಿ: ಕೃಷಿ ಕ್ರಾಂತಿ, ಧರ್ಮಶಾಸ್ತ್ರಗಳ ನಿರ್ಬಂಧಗಳಿಂದಾಗಿ ಮಹಿಳೆ ಮನೆಯೊಳಗೆ ಬಂಧಿಯಾಗುವಂತಾಗಿದೆ. ಪುರುಷ ಪ್ರಧಾನ, ಪಿತೃ ಪ್ರಧಾನ ಸಮಾಜ, ಗೌಡಿಕೆಯಿಂದಾಗಿ ಮಹಿಳೆ ಗೊಂಬೆ, ಬಹುಮಾನದ ರೀತಿ ಆಗಿದ್ದಾಳೆ ಎಂದು ಹೇಳಿದರು.

ರೈತ ಮುಖಂಡರಾದ ನಂದಿನಿ ಜಯರಾಮ್‌ ಮಾತನಾಡಿ, ಮಹಿಳೆಯರು ಒಗ್ಗಟ್ಟಾದರೆ ರಾಜಕಾರಣ ಬದಲಾಗುತ್ತದೆ. ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರ್ಯಾರು ಎಂಬ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಚರ್ಚೆಗಳು ಗ್ರಾಮೀಣ ಪ್ರದೇಶಗಳಲ್ಲಿ ನಡೆಯಬೇಕು. ಜೊತೆಗೆ ಚರ್ಚೆ ಮಾಡುವವರು ಕಾರ್ಯಕ್ಷೇತ್ರಕ್ಕೆ ಇಳಿಯುವಂತಾಗಬೇಕು ಎಂದು ಹೇಳಿದರು.

ಜಿಪಂ ಮಾಜಿ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್‌, ಸಮತಾ ವೇದಿಕೆಯ ಡಾ.ರತಿರಾವ್‌, ಆರ್‌ಎಲ್‌ಎಚ್‌ಪಿ ಯ ಸರಸ್ವತಿ, ಮಾಲವಿಕಾ ಗುಬ್ಬಿವಾಣಿ, ಒಡನಾಡಿಯ ಸ್ಟಾನ್ಲಿ ಮೊದಲಾದರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.