ಪ್ರಶ್ನಿಸುವ ಮನೋಭಾವ ಮಹಿಳೆಗೆ ಅಗತ್ಯ


Team Udayavani, Aug 20, 2018, 12:40 PM IST

m4-prashnisuva.jpg

ಮೈಸೂರು: ಮೌಡ್ಯ ವಿರೋಧಿ ಮನೋಭಾವ ಬೆಳೆಸಿಕೊಳ್ಳುವ ಜೊತೆಗೆ ಪ್ರಶ್ನೆ ಮಾಡುವ ಶಿಕ್ಷಣ ಹೆಣ್ಣಿಗೆ ದೊರಕಬೇಕಿದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್‌ ಪ್ರತಿಪಾದಿಸಿದರು. ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಏರ್ಪಡಿಸಿದ್ದ ಮಹಿಳೆ-ರಾಜಕಾರಣ-ಹೊಸದಿಕ್ಕು; ಚುನಾವಣೆ: ಒಳ ಹೊರಗೆ ವಿಷಯ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸುಳ್ಳಿನ ಪ್ರಪಂಚ: ಉತ್ತರ ಹುಡುಕಲು ಸಾಧ್ಯವಾಗುವ ಹಕ್ಕನ್ನು ಸಂವಿಧಾನ ನಮಗೆ ಕೊಟ್ಟಿದೆ. ಪ್ರತಿಯೊಂದು ವಿಷಯದಲ್ಲೂ ಮಹಿಳಾ ಚಳವಳಿ ಸಾಧ್ಯವಾಗಿರುವುದು ಸಂವಿಧಾನದಿಂದಲೇ ಎಂದ ಅವರು, ಹೆಣ್ಣು ಕೂಡ ಮನುಷ್ಯಳು ಎಂಬುದು ಅರಿವಾದಾಗ ಸಂವಿಧಾನ ಜಾರಿ ಸಾಧ್ಯ ಎಂದು ಹೇಳಿದರು.

ನಿರ್ಭಯಾ ಪ್ರಕರಣ ಸಾಂಕೇತಿಕ. ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಅನೇಕ ಪ್ರಕರಣಗಳು ಹೊರಬರದೇ ಮುಚ್ಚಿ ಹೋಗುತ್ತಿವೆ. ಜನತೆ ಕೂಡ ಸತ್ಯವನ್ನು ಒಪ್ಪಿಕೊಳ್ಳುವುದಿಲ್ಲ. ಬದಲಿಗೆ ಸುಳ್ಳನ್ನೇ ಸತ್ಯದ ಮುಖಕ್ಕೆ ಹೊಡೆದಂತೆ ಮಾತನಾಡಿದರೆ ಒಪ್ಪಿಕೊಳ್ಳುತ್ತಾರೆ ಎಂದು ಹೇಳಿದರು.

ಶುದ್ಧಿ: ಪ್ರಾಸ್ತಾವಿಕ ನುಡಿಗಳನ್ನಾಡಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಂ.ಉಮಾಪತಿ, ಚುನಾವಣಾ ಸುಧಾರಣೆಯಾದರೆ ಮಹಿಳಾ ಸಬಲೀಕರಣ ಸಾಧ್ಯ.
ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ಮೀಸಲಿನಿಂದಾಗಿ ಮಹಿಳೆಯರಿಗೆ ಅನುಕೂಲವಾಗಿದೆ. ಇದೇ ರೀತಿಯಲ್ಲಿ ಶಾಸನ ಸಭೆಗಳಲ್ಲೂ ಶೇ.50 ಮಹಿಳಾ ಮೀಸಲಾತಿ ಬರಬೇಕು.

ಈ ಬಗ್ಗೆ ಅಂತಾರಾಷ್ಟ್ರೀಯ ಒತ್ತಡವೂ ಇದೆ. ರಾಜಕೀಯ ಕುಲಗೆಟ್ಟು ಹೋಗಿರುವ ಈ ದಿನಗಳಲ್ಲಿ ಮಹಿಳೆಯರೇ ರಾಜಕಾರಣಕ್ಕೆ ಹೊಸದಿಕ್ಕು ತೋರಬೇಕು. ಹಣದ ಪ್ರಭಾವ ಇಳಿಸಿ ಚುನಾವಣೆ ಸುಧಾರಣೆ ಆಗಬೇಕಾದರೆ, ರಾಜಕೀಯ ಶುದ್ಧಿ ಆಗಬೇಕು. ಇದಕ್ಕೆ ಮಹಿಳಾ ಚಳವಳಿಗಳಾಗಬೇಕು ಎಂದರು.

ಮಹಿಳೆ ಬಂಧಿ: ಕೃಷಿ ಕ್ರಾಂತಿ, ಧರ್ಮಶಾಸ್ತ್ರಗಳ ನಿರ್ಬಂಧಗಳಿಂದಾಗಿ ಮಹಿಳೆ ಮನೆಯೊಳಗೆ ಬಂಧಿಯಾಗುವಂತಾಗಿದೆ. ಪುರುಷ ಪ್ರಧಾನ, ಪಿತೃ ಪ್ರಧಾನ ಸಮಾಜ, ಗೌಡಿಕೆಯಿಂದಾಗಿ ಮಹಿಳೆ ಗೊಂಬೆ, ಬಹುಮಾನದ ರೀತಿ ಆಗಿದ್ದಾಳೆ ಎಂದು ಹೇಳಿದರು.

ರೈತ ಮುಖಂಡರಾದ ನಂದಿನಿ ಜಯರಾಮ್‌ ಮಾತನಾಡಿ, ಮಹಿಳೆಯರು ಒಗ್ಗಟ್ಟಾದರೆ ರಾಜಕಾರಣ ಬದಲಾಗುತ್ತದೆ. ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರ್ಯಾರು ಎಂಬ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಚರ್ಚೆಗಳು ಗ್ರಾಮೀಣ ಪ್ರದೇಶಗಳಲ್ಲಿ ನಡೆಯಬೇಕು. ಜೊತೆಗೆ ಚರ್ಚೆ ಮಾಡುವವರು ಕಾರ್ಯಕ್ಷೇತ್ರಕ್ಕೆ ಇಳಿಯುವಂತಾಗಬೇಕು ಎಂದು ಹೇಳಿದರು.

ಜಿಪಂ ಮಾಜಿ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್‌, ಸಮತಾ ವೇದಿಕೆಯ ಡಾ.ರತಿರಾವ್‌, ಆರ್‌ಎಲ್‌ಎಚ್‌ಪಿ ಯ ಸರಸ್ವತಿ, ಮಾಲವಿಕಾ ಗುಬ್ಬಿವಾಣಿ, ಒಡನಾಡಿಯ ಸ್ಟಾನ್ಲಿ ಮೊದಲಾದರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.