ಪಟ್ಟಣಕ್ಕೆ ಮೂಲಸೌಕರ್ಯ ಕಲ್ಪಿಸುವುದೇ ತಮ್ಮ ಉದ್ದೇಶ


Team Udayavani, Jan 21, 2018, 12:02 PM IST

m6-pattanna.jpg

ಹುಣಸೂರು: ನಗರ ವ್ಯಾಪ್ತಿಯಲ್ಲಿ ಮುಂದಿನ 25-30 ವರ್ಷಕ್ಕೆ ಬೇಕಾದ ಮೂಲಸೌಕರ್ಯಗಳನ್ನು ಕಲ್ಪಿಸುವುದು ತಮ್ಮ ಉದ್ದೇಶವಾಗಿದ್ದು, ಸುಗಮ ಸಂಚಾರ, ವ್ಯವಸ್ಥಿತ ರಸ್ತೆ ಚರಂಡಿ ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಶ್ರಮ ಹಾಕುತ್ತೇನೆ ಎಂದು ನೂತನ ಅಧ್ಯಕ್ಷ ಎಂ.ಶಿವಕುಮಾರ್‌ ಹೇಳಿದರು.

ನಗರಸಭೆಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರವನ್ನು ಸಮಗ್ರವಾಗಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ತಮ್ಮ ಗುರಿಯಾಗಿದ್ದು, ನಗರಸಭೆ ವ್ಯಾಪ್ತಿಯಲ್ಲಿ ಹೊಸ ಯೋಜನೆಗಳ ಜಾರಿಯ ಜೊತೆಗೆ ಸರ್ಕಾರದ ಯೋಜನೆಗಳ ಸಮರ್ಪಕ ಜಾರಿಗೆ ಆದ್ಯತೆ ನೀಡುತ್ತೇನೆ ಎಂದರು.

ನಗರೋತ್ಥಾನ ಯೋಜನೆಯಡಿ ಹುಣಸೂರು ನಗರಸಭೆಗೆ 20 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಈ ಪೈಕಿ 16.4 ಕೋಟಿ ರೂ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಪ್ರತಿ ವಾರ್ಡ್‌ಗೆ ಕನಿಷ್ಠ  40 ಲಕ್ಷ ರೂ.ಯಿಂದ 1 ಕೋಟಿ ರೂ.ವರೆಗೆ ಅಭಿವೃದ್ಧಿ ಕಾಮಗಾರಿಗಳು ಶೀಘ್ರ ಪ್ರಾರಂಭಗೊಳ್ಳಲಿದೆ. ಈಗಾಗಲೇ ಹುಣಸೂರು ನಗರಾಭಿವೃದ್ಧಿ ಪ್ರಾಧಿಕಾರ(ಹೂಡಾ) ಅಸ್ತಿತ್ವದಲ್ಲಿದ್ದು, ಶೀಘ್ರವೇ ಮೆಗಾ ಮಾಸ್ಟರ್‌ ಪ್ರಾಜೆಕ್ಟ್ ಯೋಜನೆ ಜಾರಿಗೊಳಿಸುವತ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಾರ್ವಜನಿಕರ ಹಿತದೃಷ್ಟಿಯಿಂದ ನ್ಯೂ ಮಾರುತಿಬಡಾವಣೆ, ಮಂಜುನಾಥಬಡಾವಣೆ, ಮತ್ತಿತರ ಲೇ ಔಟ್‌ಗಳಲ್ಲಿ ರಸ್ತೆ-ಚರಂಡಿಗೆ ಆದ್ಯತೆ ನೀಡುವ ಜೊತೆಗೆ ಒಳಚರಂಡಿ ವ್ಯವಸ್ಥೆಗೆ ಶೀಘ್ರ ಕ್ರಮವಹಿಸುತ್ತೇನೆ, ಕೆಲ ಬಡಾವಣೆ ನಿರ್ಮಿಸುವಾಗ ಕಾನೂನು ಉಲ್ಲಂಘನೆಯಾಗಿರುವ ಬಗ್ಗೆ ಸದಸ್ಯರೊಂದಿಗೆ ಚರ್ಚಿಸಿ ಕ್ರಮ ಕೆಗೊಳ್ಳಲಾಗುವುದು ಎಂದು ತಿಳಿಸಿದರು.

ಕಂದಾಯ ವಸೂಲಿಗೆ ಕ್ರಮ: ನಗರಸಭೆ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಕಂದಾಯಗಳನ್ನು ಬಾಕಿ ಉಳಿಸಿಕೊಂಡಿರುವ ಬಾಕಿದಾರರರಿಂದ ಕಂದಾಯ ವಸೂಲಾತಿಗೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು. ನಗರದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕ ನೀರು ಪೂರೈಸಲು ಹಾಲಿ ಇರುವ ಪಂಪ್‌ಹೌಸ್‌ನ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಈಗಿರುವ ಪಂಪ್‌ಹೌಸ್‌ ಬಳಿ ಸರ್ಕಾರಿ ಭೂಮಿ ಗುರುತಿಸಿ ಪಂಪ್‌ಹೌಸ್‌ನ್ನು ಉನ್ನತ ದರ್ಜೆಗೆ ಏರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಫ್ಲೆಕ್ಸ್‌ಗೆ ಕಡಿವಾಣ: ನಗರದ ಸುಂದರ ಪರಿಸರವನ್ನೇ ಹಾಳು ಮಾಡುವ ಫ್ಲೆಕ್ಸ್‌-ಕಟೌಟ್‌ಗಳನ್ನು ಎಲ್ಲೆಂದರಲ್ಲಿ ಅಳವಡಿಸುತ್ತಿದ್ದು, ಇನ್ನು ಮುಂದೆ ನಿಗದಿತ ಜಾಗದಲ್ಲೇ ಆಳವಡಿಸಬೇಕು ಹಾಗೂ ಅವಧಿಯೊಳಗೆ ಅಳವಡಿಸಿದವರೇ ತೆರವುಗೊಳಿಸಬೇಕು, ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೆಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸುಂದರ ನಗರ-ಸುಗಮ ಸಂಚಾರಕ್ಕೆ ಕ್ರಮ: ಇನ್ನು ಹೆಚ್ಚು ಜನ-ವಾಹನ ದಟ್ಟಣೆ ಇರುವ ಬೆಪಾಸ್‌ರಸ್ತೆ, ಕೋರ್ಟ್‌ ಸರ್ಕಲ್‌ ಮತ್ತು ಕಲ್ಕುಣಿಕೆ ವತ್ತದಲ್ಲಿ ಸಿಗ್ನಲ್‌ ಲೈಟ್‌ ಅಳವಡಿಕೆ ಹಾಗೂ ನಗರವ್ಯಾಪ್ತಿಯಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪತ್ರಬರೆಯಲಾಗುವುದು ಹಾಗೂ ಸುಸಜ್ಜಿತ ಖಾಸಗಿ ವಾಹನನಿಲ್ದಾಣ, ಕೈಗಾರಿಕಾ-ವಸತಿ ಪ್ರದೇಶ, ಫ‌ುಟ್‌ಪಾತ್‌ ವ್ಯಾಪಾರಸ್ಥರಿಗೆ ಸೂಕ್ತ ಸ್ಥಳಗಳನ್ನು ಗುರುತಿಸುವ ಕಾರ್ಯ ಮಾಸ್ಟರ್‌ ಪ್ರಾಜೆಕ್ಟ್ ಮೂಲಕವೇ ಆಗಬೇಕಿದ್ದು ಈ ಬಗ್ಗೆಯೂ ಗಮನ ಹರಿಸುತ್ತೇನೆ.

ಸಾರ್ವಜನಿಕ ಭೇಟಿಗೆ ಅವಕಾಶ: ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಧ್ಯಾಹ್ನ 3 ರಿಂದ ಸಂಜೆವರೆಗೆ ಕಚೇರಿಯಲ್ಲಿ ಭೇಟಿಯಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳ ಬಹುದಾಗಿದೆ ಎಂದು ತಿಳಿಸಿದರು. ಸದಸ್ಯರಾದ ಸುನಿತಾ, ಜಯರಾಮೇಗೌಡ, ಹಜರತ್‌ಜಾನ್‌, ಶಿವರಾಜ್‌, ಸತೀಶ್‌ಕುಮಾರ್‌, ಕೃಷ್ಣರಾಜ ಗುಪ್ತ, ಎಚ್‌.ವೈ.ಮಹದೇವ್‌, ಶರವಣ ಇತರರು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.