ಇತ್ತ ಬಿಜೆಪಿ ಇಲ್ಲ, ಅತ್ತ ಜೆಡಿಎಸ್‌ ಇಲ್ಲವೇ ಇಲ್ಲ


Team Udayavani, May 9, 2018, 3:45 PM IST

m5-ittha.jpg

ನಂಜನಗೂಡು: ಹಳೆ ಮೈಸೂರು ಪ್ರಾಂತ್ಯದ 10 ಜಿಲ್ಲೆಗಳಲ್ಲಿ ಬಿಜೆಪಿ ಹೆಸರೇ ಇಲ್ಲ, ಉಳಿದ 18 ಕಡೆ ಜೆಡಿಎಸ್‌ ಇಲ್ಲವೇ ಇಲ್ಲಾ, ಪರಿಸ್ಥಿತಿ ಹೀಗಿರುವಾಗ ಅವರೆಲ್ಲಿಂದ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. 

ಇಲ್ಲಿನ ಕಾಂಗ್ರೆಸ್‌ ಪ್ರಚಾರ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಕಳಲೆ ಪರ ಮತಯಾಚಿಸಿ ಮಾತನಾಡಿದ ಅವರು, ಎರಡು ಪಕ್ಷಗಳದ್ದು ಹಗಲು ಕನಸು. ಇವರಿದ್ದಲ್ಲಿ ಅವರದ್ದು ಶೂನ್ಯ ಸಂಪಾದನೆ. ಅವರಿದ್ದಲ್ಲಿ ಇವರದೂ ಅದೇ ಸಾಧನೆ.

ಹಾಗಿದ್ದಾಗ ಎರಡು ಶೂನ್ಯಗಳ ನಡುವೆ ಒಳ-ಹೊರ ಒಪ್ಪಂದವಾದರೂ ನಮಗೇನು ಭಯವೇ ಇಲ್ಲಾ ಎನ್ನುತ್ತ  ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರ್ತೇವೆ, ನಾನೇ ಮುಖ್ಯಮಂತ್ರಿ. ನೀವು ಮಾತ್ರ ಕಳಲೆಯನ್ನು ಮತ್ತೆ ಚುನಾಯಿಸಿ ವಿಧಾನಸಭೆಗೆ ಕಳುಹಿಸಬೇಕು ಎಂದರು.

ಅಪ್ಪ-ಮಗ ಕಣ್ಣಲ್ಲಿ  ನೀರು ಸುರಿಸಿದರೆ ಜನತೆ ಮತ ನೀಡಲು ಸಾಧ್ಯವೇ ಎಂದ ಸಿದ್ದರಾಮಯ್ಯ, ಉಪ ಚುನಾವಣೆಯಲ್ಲಿ ನಮ್ಮಿಂದಲೇ ಇಲ್ಲಿ ಗೆಲುವು ಎಂದಿದ್ದ ಜೆಡಿಎಸ್‌, ಈಗ ಎಷ್ಟು ಮತ ಪಡೆಯುತ್ತೆ? ಅದರ ನಿಜ ಬಲವೇನು ಎನ್ನುವುದು 12ರಂದು ತೀರ್ಮಾನವಾಗುತ್ತೆ ಎಂದು ಆ ಪಕ್ಷದ ನಾಯಕರನ್ನು ಮಾರ್ಮಿಕವಾಗಿ ಚುಚ್ಚಿದರು. 

ಸೋತರೂ ಜಂಬ ಮಾತ್ರ ಹೋಗಿಲ್ಲ: ಉಪ ಚುನಾವಣೆಯಲ್ಲಿ ಹೀನಾಮಾನವಾಗಿ ಸೋತು ಮನೆ ಸೇರಿದರೂ ಇನ್ನೂ ಜಂಬ ಹೋಗಿಲ್ಲ. ಉಪ ಚುನಾವಣೆಯಲ್ಲ ಕಳಲೆ ತಮ್ಮ ಪ್ರತಿಸ್ಪರ್ಧಿ ಎಂದು ಒಪ್ಪಿಕೊಂಡಿದ್ದರೆ ಏನಾಗುತ್ತಿತ್ತು.

ಆದರೆ ಆ ಮಹಾನುಭಾವರು ಇದು ನನ್ನ ಸಿದ್ದರಾಮಯ್ಯ ನಡುವಿನ ಚುನಾವಣೆ ಎಂದರು. ಇದನ್ನು ಕೇಳಿದ ನೀವು ಸರಿಯಾಗಿ ಪಾಠ ಕಲಿಸಿದಿರಿ. ಅದಕ್ಕಾಗಿ ಕೃತಜ್ಞತೆ ಅರ್ಪಿಸುತ್ತೇನೆ. ಪಾಪ ಅವರೇ ಇಲ್ಲಿನ ಅಭಿವೃದ್ಧಿ ಮಾಡಬಹುದಿತ್ತು. ಅದು ಅವರಿಗೆ ಗೊತ್ತೆ ಇಲ್ಲ.

ಹಾಗಾಗಿ ಸಚವ ಮಹದೇವಪ್ಪಬಂದು ನಂಜನಗೂಡಿನ ಅಭಿವೃದ್ಧಿ ಮಾಡಬೇಕಾಯಿತು. ಕಳಲೆ ಕಾರ್ಯದಕ್ಷತೆ ಕಾಣಲು ಅವರನ್ನು ಪೂರ್ಣಾವಧಿ ಶಾಸಕರನ್ನಾಗಿಸಿ ಎಂದು ಮನವಿ ಮಾಡಿದರು. ಸಭೆಯಲ್ಲಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಸಂಸದ ಆರ್‌.ಧ್ರುವನಾರಾಯಣ, ಕಾಂಗ್ರೆಸ್‌ ಅಭ್ಯರ್ಥಿ ಕಳಲೆ  ಮಾತನಾಡಿದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.