ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರ ‌ಕೊರತೆ ಇಲ್ಲ


Team Udayavani, Sep 29, 2020, 12:46 PM IST

Mysuru-tdy-2

ಸಾಂದರ್ಭಿಕ ಚಿತ್ರ

ಮೈಸೂರು: ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಬೆಳೆಗಳಿಗೆ ಅವಶ್ಯವಿರುವ ಯೂರಿಯಾ ರಸಗೊಬ್ಬರದ ದಾಸ್ತಾನು ಜಿಲ್ಲೆಯಲ್ಲಿ ಲಭ್ಯವಿದ್ದು ಯಾವುದೇ ಕೊರತೆ ಇರುವುದಿಲ್ಲ. ಆದರೆ, ಜಿಲ್ಲೆಯ ಯಾವುದೇ ರಸಗೊಬ್ಬರ ಮಾರಾಟಗಾರರು ಕೃತಕ ಅಭಾವ ಸೃಷ್ಟಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದರೆ ಲೈಸೆನ್ಸ್‌ ರದ್ದುಪಡಿಸಲಾಗುವುದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಮಾರಾಟ ಮಹಾ ಮಂಡಳಿಯಲ್ಲಿ 759 ಮೆ.ಟನ್‌ ಕಾಪು ದಾಸ್ತಾನು ಸೇರಿದಂತೆ ಒಟ್ಟಾರೆಯಾಗಿ 4396 ಮೆ.ಟನ್‌ ಯೂರಿಯಾ ರಸಗೊಬ್ಬರ ಲಭ್ಯವಿದೆ. ರಸಗೊಬ್ಬರ ಮಾರಾಟಗಾರರು ಕೃತಕ ಅಭಾವ ಸೃಷ್ಟಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ, ನಿಯಮಾನುಸಾರ ಕಾನೂನು ಕ್ರಮ ಜರುಗಿಸಿ ಲೈಸೆನ್ಸ್ ರದ್ದುಪಡಿಸಲುಕ್ರಮವಹಿಸಲಾಗುವುದು. ರಸಗೊಬ್ಬರ ಖರೀದಿಸುವ ರೈತರು ತಪ್ಪದೇ ತಮ್ಮ ಆಧಾರ್‌ ಕಾರ್ಡ್‌ ತೆಗೆದುಕೊಂಡು ಹೋಗುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ.

……………………………………………………………………………………………………………………………………………………………………..

ಇಂದಿನಿಂದ ಹೋಬಳಿವಾರು ಕೋವಿಡ್ ಟೆಸ್ಟ್ :

ಎಚ್‌.ಡಿ.ಕೋಟೆ: ಸರ್ಕಾರದ ಆದೇಶದಂತೆ ತಾಲೂಕಿನಲ್ಲಿ 10 ಕೋವಿಡ್ ಸೋಂಕು ತಪಾಸಣೆ ತಂಡಗಳು ಸಜ್ಜಾಗಿದ್ದು, ಮಂಗಳವಾರದಿಂದಲೇ ಹೋಬಳಿ ಮಟ್ಟದಲ್ಲಿ ತಪಾಸಣೆ ಕಾರ್ಯ ಶುರುವಾಗಲಿದೆ ಎಂದು ಎಂದು ತಾಲೂಕು ಅರೋಗ್ಯಾಧಿಕಾರಿ ಡಾ.ರವಿ ಕುಮಾರ್‌ ತಿಳಿಸಿದರು.

ತಾಪಂ ಸಭಾಂಗಣದಲ್ಲಿ ತರಬೇತಿ ಪಡೆದ ಗ್ರಾಪಂ ದತ್ತಾಂಶ ನಮೂದಕರು, ವಿವೇಕಾನಂದ ಸಂಸ್ಥೆಯ ಆರೋಗ್ಯ ಸ್ವಯಂ ಸೇವಕರು,ವಿವೇಕಾ ನಂದ ಸಂಸ್ಥೆಯ ಮುಖ್ಯಸ್ಥರು, ತಾಲೂಕಿನ ಕಂದಾಯ ಇಲಾಖೆ ನಿರೀಕ್ಷಕರು, ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು.

ಸೋಂಕಿನ ತಪಾಸಣೆಗೆ ಜನ ಭಯ ಭೀತರಾಗುವ ಸಾಧ್ಯತೆಗಳಿದ್ದು, ನಿಯೋಜಿತರು ಕಡ್ಡಾಯವಾಗಿ ಜನರ ಮನವೊಲಿಸಿ ಪ್ರತಿದಿನ 300 ಜನರ ತಪಾಸಣೆ ನಡೆಸಬೇಕು. ಸಂಗ್ರಹಿಸಿದ ಗಂಟಲು ದ್ರವ ಪರೀಕ್ಷೆ ಸ್ಥಳದಲ್ಲಿಯೇ 1 ತಾಸಿನ ಒಳಗೆ ಲಭ್ಯವಾಗಲಿದೆ. ತಾಲೂಕಿನ 39 ಗ್ರಾಮ ಪಂಚಾಯ್ತಿಗಳಲ್ಲೂ ತಪಾಸಣೆ ನಡೆಸಲಾಗುವುದು ಎಂದರು.

ಹೋಬಳಿವಾರು, ಗ್ರಾಮ ಪಂಚಾಯಿತಿವಾರು ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಬೇಕು ಎಂದು ತಹಶೀಲ್ದಾರ್‌ ಆರ್‌. ಮಂಜುನಾಥ್‌ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ತಾಪಂ ಇಒರಾಮಲಿಂಗಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ರೇವಣ್ಣ, ಸರಗೂರು ತಾಪಂ ಇಒ ಶ್ರೀನಿವಾಸ್‌, ವಿವೇಕಾನಂದ ಸಂಸ್ಥೆಯ ಸಿಬ್ಬಂದಿ, ಮತ್ತು ಗ್ರಾಪಂ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.