ನದಿಗಳಿಲ್ಲದೇ ನೀರಿಲ್ಲ, ನೀರಿಲ್ಲದೆ ನಾವಿಲ್ಲ


Team Udayavani, Feb 20, 2019, 7:30 AM IST

m3-nadi.jpg

ಮೈಸೂರು: ಮೈಯಲ್ಲಿನ ಮಲಿನವನ್ನು ತೊಳೆಯಲು ಗಂಗಾಸ್ನಾನ ಮಾಡುವುದು ಮುಖ್ಯವಲ್ಲ. ಅಂತರಂಗದ ಜ್ಞಾನಗಂಗೆಯ ಸ್ನಾನ ಮುಖ್ಯ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಶ್ರೀಕ್ಷೇತ್ರ ತಿರುಮಕೂಡಲಿನಲ್ಲಿ ನಡೆದ 11ನೇ ಮಹಾ ಕುಂಭಮೇಳದ ಧರ್ಮಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಎಲ್ಲಾ ನಾಗರಿಕತೆಗಳೂ ನದಿಗಳ ಅಕ್ಕಪಕ್ಕದಲ್ಲೇ ಬೆಳೆದು ಬಂದಿದೆ. ನದಿಗಳಿಲ್ಲದೇ ನೀರಿಲ್ಲ, ನೀರಿಲ್ಲದೆ ನಾವಿಲ್ಲ. ಜಗತ್ತಿನ ಸೃಷ್ಟಿ ಹಾಗೂ ಜಗತ್ತಿನ ವಿನಾಶಕ್ಕೂ ನೀರೆ ಕಾರಣ ಎಂದರು.

ನದಿ ಕೊಳೆಯಾದರೆ ಹೃದಯಾಘಾತ: ನೀರನ್ನು ಸರಿಯಾಗಿ ಬಳಸಿಕೊಂಡರೆ ಸೃಷ್ಟಿಯಾಗುತ್ತದೆ. ಅನಗತ್ಯವಾಗಿ ಬಳಸಿದರೆ ವಿನಾಶಕ್ಕೆ ಕಾರಣವಾಗುತ್ತದೆ. ಸ್ನಾನ ಮಾಡುವುದರಿಂದ ಮೈಯಲ್ಲಿನ ಮಲಿನ ತೊಳೆಯಬಹುದು. ಮನದ ಮಲಿನ ತೊಳೆಯಬೇಕಾದರೆ ಉಪಾಸನೆ ಅವಶ್ಯ. ನದಿಗಳು ದೇಹದ ಆರ್ಟರಿಸ್‌ಗಳಿದ್ದಂತೆ ಆರ್ಟರಿಸ್‌ಗಳನ್ನು ಚೆನ್ನಾಗಿಟ್ಟುಕೊಂಡರೆ ದೇಹ ಚೆನ್ನಾಗಿರುತ್ತೆ.

ಅದೇ ರೀತಿ ನದಿಗಳನ್ನು ಸ್ವತ್ಛವಾಗಿರಿಸಿಕೊಂಡರೆ ದೇಶ ಚೆನ್ನಾಗಿರುತ್ತೆ. ನದಿಗಳು ಕೊಳೆಯಾದರೆ ಹೃದಯಾಘಾತವಾಗುತ್ತದೆ ಎಂದರು. ಈ ಬಾರಿ ಅತ್ಯದ್ಭುತವಾಗಿ ಕುಂಭಮೇಳ ನಡೆದಿದೆ. ಲಕ್ಷಾಂತರ ಮಂದಿ ತ್ರಿವೇಣಿ ಸಂಗಮದಲ್ಲಿ ಮಿಂದಿದ್ದಾರೆ. ಹೀಗೆ ನದಿಯಲ್ಲಿ ಮಿಂದವರು ನಾಸ್ತಿಕ ಭಾವ ಬಿಟ್ಟು, ಆಸ್ತಿಕ ಭಾವದಿಂದ ಹೋಗೋಣ ಎಂದು ಹೇಳಿದರು.

ವಾಟಾಳು ಸೂರ್ಯ ಸಿಂಹಾಸನ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ತಿರುಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ಆಯೋಜಿಸುವ ತೀರ್ಮಾನ ಮಾಡಿದ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಬಾಲಗಂಗಾಧರನಾಥ ಸ್ವಾಮೀಜಿಯವರು ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಹಾಗೂ ನಮಗೆ ಸಿದ್ಧತೆಯ ಉಸ್ತುವಾರಿ ನೋಡಿಕೊಳ್ಳುವಂತೆ ಸೂಚಿಸಿದ್ದರು. ಹಿಂದೆಲ್ಲಾ ಸರ್ಕಾರದಿಂದ ನೆರವು ಇಲ್ಲದಿದ್ದರಿಂದ ಬಹಳ ಕಷ್ಟಪಟ್ಟು ಸಿದ್ಧತೆ ಮಾಡಬೇಕಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ನೆರವು ಸಿಗುತ್ತಿರುವುರಿಂದ ಕುಂಭಮೇಳ ಯಶಸ್ವಿಯಾಗಿದೆ ಎಂದರು.

ಮೈಮನ ಶುದ್ಧವಿರಲಿ: ಕಾಗಿನೆಲೆ ಕನಕಗುರುಪೀಠ, ಮೈಸೂರು ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ ಮಾತನಾಡಿ, ಸ್ನಾನ ಮಾಡುವುದರಲ್ಲಿ ಎರಡು ವಿಧಗಳಿವೆ. ಒಂದು ಮೈ ತೊಳೆವ ಸ್ನಾನ. ಮತ್ತೂಂದು ಮನಸ್ಸು ತೊಳೆವ ಸ್ನಾನ. ನಾವು ಮನಸ್ಸು ತೊಳೆವ ಸ್ನಾನ ಮಾಡಬೇಕಿದೆ.

ಸ್ನಾನ ಮಾಡುವುದರಿಂದ ನಮ್ಮ ಮೈ-ಮನಸ್ಸು ಶುದ್ಧವಾದಂತೆ, ನಮ್ಮ ಸುತ್ತಲಿನ ಪರಿಸರವನ್ನೂ ಶುದ್ಧವಾಗಿರಿಸಿಕೊಳ್ಳಬೇಕು. ಅನ್ಯಾಯ, ಅನೀತಿಗಳನ್ನು ತ್ಯಾಗ ಮಾಡಿದರೆ ಭಗವಂತನ ಒಲುವೆಯಾಗುತ್ತದೆ. ಸಂಗಮ ಸ್ನಾನ ಎಲ್ಲರ ಮನಸ್ಸನ್ನೂ ಶುಚಿಗೊಳಿಸಲು ಎಂದು ಹಾರೈಸಿದರು.

ಸದಾಕಾಲ ದೈವದ, ಆಧ್ಯಾತ್ಮಿಕ ಚಿಂತನೆಯಲ್ಲಿ ಮುಳುಗಿರುವ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವುದು ನಾಡಿನ ಸೌಭಾಗ್ಯ.
-ನಿರ್ಮಲಾನಂದನಾಥ ಸ್ವಾಮೀಜಿ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.