ಈ ಬಾರಿ ದಾಖಲೆಯ ಗೆಲುವು: ಧ್ರುವ
Team Udayavani, Apr 8, 2019, 3:00 AM IST
ನಂಜನಗೂಡು: ಚಾಮರಾಜನಗರ ಕ್ಷೇತ್ರದಾದ್ಯಂತ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ತಮ್ಮ ಗೆಲುವು ಶತಸಿದ್ಧ ಎಂದು ಕಾಂಗ್ರೆಸ್ ಅಭ್ಯರ್ಥಿ, ಸಂಸದ ಆರ್. ಧ್ರುವನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಯತೀಂದ್ರ ಸಿದ್ದರಾಮಯ್ಯ ಜೊತೆ ವರುಣಾ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿ ತಮಗೆ ಮತದಾರರು ಹೆಚ್ಚಿನ ಬೆಂಬಲ ತೋರುತ್ತಿದ್ದಾರೆ. ಅವರ ಕಷ್ಟಗಳಿಗೆ ತಾವು ಸದಾ ಸ್ಪಂದಿಸಿದ್ದು, ದಾಖಲೆಗಳ ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ತಿಳಿಸಿದರು.
ಮೈತ್ರಿ ಅಭ್ಯರ್ಥಿಯಾಗಿರುವ ತಮ್ಮ ಗೆಲುವಿಗಾಗಿ ಜನತಾದಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅವಿರಿತವಾಗಿ ದುಡಿಯುತ್ತಿದ್ದಾರೆ. ಕ್ಷೇತ್ರದಲ್ಲಿ ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಗ್ಗಟ್ಟು ಪ್ರದರ್ಶಿಸಿ ಜಂಟಿಯಾಗಿ ಪ್ರಚಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಭರವಸೆಗಳು ಹುಸಿಯಾಗಿವೆ. ಮತದಾರರು ಬೇಸತ್ತಿದ್ದು, ಈ ಬಾರಿ ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು,
-ಕೆಪಿಸಿಸಿ ಕಾರ್ಯದರ್ಶಿ ಗುರುಪಾದಸ್ವಾಮಿ, ಎಸ್.ಸಿ.ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಸಿದ್ದರಾಜು, ಶಿವನಾಗಪ್ಪ, ಗುರುಮಲ್ಲಪ್ಪ, ಜಿಪಂ ಮಾಜಿ ಸದಸ್ಯ ಎಚ್.ಎನ್. ನಂಜಪ್ಪ, ಹೊಸಕೋಟೆ ಬಸವರಾಜು,
-ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ಕಿರುಗುಂದ ಶಿವನಾಗ, ಕೆ.ಎಸ್.ಹುಂಡಿ ಯೋಗೇಶ, ನಂಜಯ್ಯ, ಚಿನ್ನಂಬಳ್ಳಿ ಸಿ.ಆರ್.ಮಹದೇವು, ರಾಯನಹುಂಡಿ ಮಾದಪ್ಪ, ಹೆಬ್ಯಾ ರಾಜು, ಸೇರಿದಂತೆ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ