ಸಹಕಾರ ಪಡೆದವರೇ ಚೂರಿ ಹಾಕಿದರು


Team Udayavani, May 21, 2018, 3:11 PM IST

m6-sahakara.jpg

ಹುಣಸೂರು: ನನ್ನಿಂದ ಅಧಿಕಾರ, ಸಹಕಾರ ಪಡೆದುಕೊಂಡವರೇ ಹೆಚ್ಚು ಬೆನ್ನಿಗೆ ಚೂರಿ ಹಾಕಿದ್ದಾರೆ. ನಾನು ಸೋತಿದ್ದರೂ ಜನರ ಮನಸ್ಸನ್ನು ಗೆದ್ದಿದ್ದೇನೆಂಬ ಆತ್ಮವಿಶ್ವಾಸವಿದೆ ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌ ತಿಳಿಸಿದರು.

ತಾಲೂಕು ಕಾಂಗ್ರೆಸ್‌ ಘಟಕದ ವತಿಯಿಂದ ನಗರದ ಸಲೀಂ ಪ್ಯಾಲೇಸ್‌ನಲ್ಲಿ ಆಯೋಜಿಸಿದ್ದ ಮತದಾರರಿಗೆ ಅಭಿನಂದನೆ ಹಾಗೂ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಜನಾಂಗದಲ್ಲಿ ಅಲ್ಪಸಂಖ್ಯಾತನಾದ ತಮಗೆ 83 ಸಾವಿರಕ್ಕೂ ಹೆಚ್ಚು ಮತದಾರರು ಮತ ನೀಡಿರುವುದು ಸಾಮಾನ್ಯವೇನಲ್ಲ. ಅವರೆಲ್ಲರಿಗೂ ಅಭಿನಂದಿಸುವೆ. ನಾನು ಸೋಲನ್ನು ನಿರೀಕ್ಷಿಸಿರಲಿಲ್ಲ.

ಆದರೆ ತಮ್ಮ ವಿರುದ್ಧ ಅಧಿಕಾರಿಗಳ ನಿರ್ಲಕ್ಷದಿಂದಾದ  ಹನುಮ ಜಯಂತಿಯ ಘಟನೆಯನ್ನು ತಮ್ಮ ಮೇಲೆ ಹೊರಿಸಿದ್ದು,  ತಾಲೂಕಿನ ಸ್ವಾಮೀಜಿಯೊಬ್ಬರ ದ್ವಂದ್ವ ನೀತಿ, ವೀರಶೈವ-ಲಿಂಗಾಯಿತ, ಟಿಪ್ಪು ಜಯಂತಿ, ದಲಿತ ಸಿಎಂ ವಿವಾದಗಳು. ಸರಕಾರದ ವಿರುದ್ಧ ವ್ಯವಸ್ಥಿತ ಅಪಪ್ರಚಾರ, ತಾಲೂಕಿನ ಜಾತಿ ಸಮೀಕರಣ ಹೀಗೆ ಹಲವು ಕಾರಣಗಳಿಂದಾಗಿ ಸೋತಿದ್ದೇನೆಂದು ತಿಳಿಸಿದರು.

ಒಂದೆಡೆ ದಳದ ಕಾರ್ಯಕರ್ತರು ಗೆಲ್ಲಬೇಕೆಂಬ ಜಿದ್ದಿನಲ್ಲಿದ್ದರೆ, ಕಾಂಗ್ರೆಸ್‌ ಕಾರ್ಯಕರ್ತರು ಗೆದ್ದೇ ಗೆಲ್ಲುತ್ತೇವೆಂದು ಮೈಮರೆತರು. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಅಪ ಪ್ರಚಾರವನ್ನು ತಡೆಯಲು ವಿಪಲರಾದರು. ಇನ್ನೂ ಜೆಡಿಎಸ್‌ ಪ್ರಣಾಳಿಕೆಯಲ್ಲಿ ಎಲ್ಲಾ ಸಾಲಮನ್ನಾ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಭರವಸೆ ಮೇರೆಗೆ ಅವರನ್ನು ಬೆಂಬಲಿಸಿದ್ದಾರೆ ಎಂದರು.

ಕ್ಷೇತ್ರದಲ್ಲಿ ಬಿಜೆಪಿ ಅವರು ಪರೋಕ್ಷವಾಗಿ ಜೆಡಿಎಸ್‌ ಬೆಂಬಲಿಸಿದರು. ಇನ್ನು ಚಿಕ್ಕಮಾದು ಕುಟುಂಬವನ್ನು ಕಾಂಗ್ರೆಸ್‌ಗೆ ಕರೆತಂದು ಆಶ್ರಯ ಕಲ್ಪಿಸಿದರೂ ತಾಲೂಕಿನಲ್ಲಿ ಆ ಜನಾಂಗದ ವಿಶ್ವಾಸಗಳಿಸುವಲ್ಲಿ ಸಾಧ್ಯವಾಗಿಲ್ಲ. ಅಭಿವೃದ್ಧಿ ಕೆಲಸ ಮಾಡಿರುವ ಕಡೆಗಳಲ್ಲಿ ಎರಡನೇ ಸ್ಥಾನದಲ್ಲಿದ್ದೇನೆ. ಮುಂದೆ ಎಲ್ಲರೂ ಸೇರಿ ಪಕ್ಷ ಸಂಘಟನೆ ಮಾಡೋಣ ಎಂದು ತಿಳಿಸಿದರು.

ಕೆಲಸ ಮಾಡುವವನನ್ನೇ ಕಳೆದುಕೊಂಡ್ರಿ: ಕ್ಷೇತ್ರದ ಅಭಿವೃದ್ಧಿಯೇ ನನ್ನ ಕನಸೆಂದರಿತು ಕೆಲಸ ಮಾಡಿದೆ. ನೂರಾರು ಬಡಕುಟುಂಬಗಳಿಗೆ ಆಸರೆಯಾಗಿದ್ದೆ. ಸಾವು-ನೋವು, ಮದುವೆ ಹೀಗೆ ಅನೇಕ ಸಮಸ್ಯೆ-ಸಂಭ್ರಮಗಳಿಗೆ ಸ್ಪಂದಿಸುತ್ತಿದ್ದೆ. ನೀವೀಗ ನಿಮ್ಮ ಮನೆಯ ಮಗನನ್ನು ಕಳೆದುಕೊಂಡಿದ್ದೀರಾ, ಮತ್ತೂಬ್ಬ ಮಂಜುನಾಥ್‌ ನಿಮಗೆ ಸಿಗಲ್ಲವೆಂದು ಭಾವನಾತ್ಮಕ ನುಡಿಗಳನ್ನಾಡಿದರು.

ಕುಮಾರಸ್ವಾಮಿ ಸಿಎಂ ಆಗಲಿ: ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದು, ಸಿದ್ದರಾಮಯ್ಯರ ಆಶೀರ್ವಾದದಿಂದ ಕುಮಾರಸ್ವಾಮಿ ಸಿಎಂ ಆಗಲಿ ಎಂದು ಚಾಮುಂಡೇಶ್ವರಿಯಲ್ಲಿ ಕಾರ್ಯಕರ್ತರ ಪರವಾಗಿ ಬೇಡಿಕೊಂಡಿದ್ದೇನೆ. ಕ್ಷೇತ್ರದ ನೂತನ ಶಾಸಕ ವಿಶ್ವನಾಥರನ್ನು ಅಭಿನಂದಿಸಿ, ಅವರ ಎಲ್ಲ ಅಭಿವೃದ್ಧಿ ಕೆಲಸಗಳಿಗೆ ಸಹಕರಿಸುವೆ. ಅವರೂ ಸಚಿವರಾಗುವ ಜೊತೆಗೆ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಲೆಂದು ಹಾರೈಸಿದರು.

ಸಭೆಯಲ್ಲಿ ಎಪಿಎಂಸಿ ಸದಸ್ಯ ಮಂಜುನಾಥ್‌, ಮುಖಂಡರಾದ ಎ.ಪಿ.ಸ್ವಾಮಿ, ಬಿ.ಎನ್‌.ಜಯರಾಂ, ಡೇವಿಡ್‌, ತಮ್ಮಡಹಳ್ಳಿ ಮಹದೇವ್‌, ಹುಲ್ಯಾಳು ದೇವರಾಜ್‌ ಸೇರಿದಂತೆ ಅನೇಕರು ಮಾತನಾಡಿದರು. ಜಿಪಂ ಸದಸ್ಯರಾದ ಸಾವಿತ್ರಿ ಮಂಜು, ಡಾ.ಪುಷ್ಪ ಅಮರ್‌ನಾಥ್‌, ಮಾಜಿ ಸದಸ್ಯ ಸಿ.ಟಿ.ರಾಜಣ್ಣ, ತಾಪಂ ಅಧ್ಯಕ್ಷೆ ಪದ್ಮಮ್ಮ, ಕಾಂಗ್ರೆಸ್‌ ಅಧ್ಯಕ್ಷರಾದ ನಾರಾಯಣ್‌, ಬಸವರಾಜೇಗೌಡ, ಶಿವಯ್ಯ, ಯುವ ಅಧ್ಯಕ್ಷ ಸ್ವಾಮಿ, ಕಾರ್ಯಾಧ್ಯಕ್ಷ ರಾಘು, ಹಂದನಹಳ್ಳಿ ಸೋಮಶೇಖರ್‌, ಚಿನ್ನವೀರಯ್ಯ, ಪುಟ್ಟಮಾದಯ್ಯ ಮತ್ತು ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.