ಮೈಸೂರಿನ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪಗೆ ಕೊಲೆ ಬೆದರಿಕೆ
Team Udayavani, Nov 29, 2022, 5:25 PM IST
ಮೈಸೂರು: ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರಿಗೆ ಕೊಲೆ ಬೆದರಿಕೆ ಒಡ್ಡಿರುವ ಕುರಿತಾಗಿ ಪೊಲೀಸರಿಗೆ ದೂರು ನೀಡಲಾಗಿದೆ.
ಈ ಕುರಿತು ಅಡ್ಡಂಡ ಕಾರ್ಯಪ್ಪ ಅವರು ಜಯಲಕ್ಷ್ಮಿಪುರಂ ಪೊಲೀಸರಿಗೆ ದೂರು ನೀಡಿ ಪೊಲೀಸ್ ರಕ್ಷಣೆ ಕೋರಿದ್ದಾರೆ.
ರಂಗಾಯಣದಿಂದ ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿ ಇದೀಗ ಪ್ರದರ್ಶನಗೊಳ್ಳುತ್ತಿದೆ. ಈ ಪ್ರದರ್ಶನ ಆರಂಭವಾದಂದಿನಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ದೂರು, ಇತ್ಯಾದಿ ಮಾಡುತ್ತಾ ಬಂದಿದ್ದಾರೆ. ಮೈಸೂರಿನ ಮಹೇಶ್ ಚಂದ್ರಗುರು ಎಂಬುವವರು ವೀಡಿಯೋ ಒಂದರಲ್ಲಿ ನನ್ನನ್ನು ‘ಮನೆಹಾಳ’ ಕಾರ್ಯಪ್ಪ ಇತ್ಯಾದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಸಾರ ಮಾಡುತ್ತಿದ್ದಾರೆ. ಇದರಿಂದ ಪ್ರಚೋದನೆಗೊಂಡ ಕೆಲವರು (ಹೆಸರು ಗೊತ್ತಿಲ್ಲ) ನಿಂದಿಸಲು ತೊಡಗಿದ್ದಾರೆ. ನವೆಂಬರ್ 28ರಂದು ಶಿವಮೊಗ್ಗ ಜಿಲ್ಲೆಯ ವಿಳಾಸದಿಂದ ಪತ್ರವೊಂದು ಬಂದಿದ್ದು, ಈ ಪತ್ರದಲ್ಲೂ ಅವಾಚ್ಯ ಶಬ್ದಗಳ ನಿಂದನೆಯಿದ್ದು, ‘ನಿನಗೀಗ ಸಾಯುವ ಕೊಲೆ ಆಗುವ ಹಂತ ತಲುಪಿದ್ದೀರ, ನಿನ್ನನ್ನು ನೀವು ನಂಬಿರುವ ದೇವರು ಸಹ ಉಳಿಸುವುದಿಲ್ಲ ಎಂದು ಜೀವ ಬೆದರಿಕೆಯನ್ನು ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗದಿಂದ ಪೋಸ್ಟ್ ಕಾರ್ಡಿನಲ್ಲಿ ಇನ್ನೊಂದು ಪತ್ರ ಬಂದಿದೆ. ‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನಕ್ಕೆ ಪೊಲೀಸ್ ಸೂಕ್ತ ಬಂದೋಬಸ್ತ್ ಮಾಡಿದ್ದು ಪ್ರದರ್ಶನ ನಡೆಯುತ್ತಿದೆ. ಆದರೆ ನಾನು ನನ್ನ ಕಚೇರಿಯ ಕೆಲಸಗಳು, ನಾಟಕದ ಸಂಘಟನಾತ್ಮಕ ಕೆಲಸಗಳಿಗಾಗಿ ನಾನು ಹೊರಗೆಲ್ಲಾ ಹೋಗಬೇಕಾಗುತ್ತದೆ. ಈ ರೀತಿಯ ಬೆದರಿಕೆ ಕರೆ ಒಡ್ಡುವವರು ನನಗೆ ಜೀವಹಾನಿ ಮಾಡಬಹುದು ಎಂಬ ಅನುಮಾನ ಇದೆ. ಅಲ್ಲದೇ ಮಹೇಶ್ ಚಂದ್ರಗುರು ಅಂಥವರು ಮತ್ತು ಇವರ ಸಹಚರರು ಇಂತವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದುದರಿಂದ ನನಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?