19ರಿಂದ ಇನ್ನೂ ಮೂರು ವಿಮಾನ ಹಾರಾಟ


Team Udayavani, Jul 11, 2019, 3:00 AM IST

19rinda

ಮೈಸೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಉಡಾನ್‌-3ಯಡಿ ಜುಲೈ 19ರಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಕೊಚ್ಚಿ, ಗೋವಾ ಹಾಗೂ ಹೈದರಾಬಾದ್‌ಗೆ ವಿಮಾನಯಾನ ಆರಂಭವಾಗಲಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಬುಧವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಮಂಜುನಾಥ್‌, ಏರ್‌ ಇಂಡಿಯಾದ ಅಲಯನ್ಸ್‌ ಏರ್‌ ಸಂಸ್ಥೆ ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಈ ನಗರಗಳಿಗೆ ವಿಮಾನಯಾನ ಸೇವೆ ಒದಗಿಸಲಿದೆ.

ಎಟಿಆರ್‌ 72 ಆಸನ ಗಳ ವಿಮಾನ ಕಾರ್ಯಾಚರಣೆ ನಡೆಸಲಿದ್ದು, ಇದರಿಂದಾಗಿ ಮೈಸೂರಿನಿಂದ ಕೊಚ್ಚಿ, ಹೈದರಾಬಾದ್‌ ಹಾಗೂ ಗೋವಾಗೆ ಹೋಗಿ ಅದೇ ದಿನ ಮೈಸೂರಿಗೆ ವಾಪಸ್ಸಾಗಬಹುದಾಗಿದೆ ಎಂದು ತಿಳಿಸಿದರು.

ಸಮಯ ವಿವರ: ರಾತ್ರಿ 7.20ಕ್ಕೆ ಮೈಸೂರಿನಿಂದ ಹೊರಡುವ ವಿಮಾನ ರಾತ್ರಿ 9.05ಕ್ಕೆ ಹೈದರಾಬಾದ್‌ ತಲುಪಲಿದೆ. ಬೆಳಗ್ಗೆ 6.05ಕ್ಕೆ ಹೈದರಾಬಾದ್‌ನಿಂದ ಹೊರಡುವ ವಿಮಾನ ಬೆಳಗ್ಗೆ 7.50ಕ್ಕೆ ಮೈಸೂರು ತಲುಪಲಿದೆ. ಬೆಳಗ್ಗೆ 8.15ಕ್ಕೆ ಮೈಸೂರಿನಿಂದ ಹೊರಡುವ ವಿಮಾನ ಬೆಳಗ್ಗೆ 9.45ಕ್ಕೆ ಕೊಚ್ಚಿ ತಲುಪಲಿದೆ. ಬೆಳಗ್ಗೆ 10.10ಗಂಟೆಗೆ ಕೊಚ್ಚಿಯಿಂದ ಹೊರಟು ಬೆಳಗ್ಗೆ 11.40ಕ್ಕೆ ಮೈಸೂರು ತಲುಪಲಿದೆ.

ಮಧ್ಯಾಹ್ನ 3.20ಕ್ಕೆ ಮೈಸೂರಿನಿಂದ ಹೊರಡುವ ವಿಮಾನ ಸಂಜೆ 4.50ಕ್ಕೆ ಗೋವಾ ತಲುಪಲಿದೆ. ಸಂಜೆ 5.20ಕ್ಕೆ ಗೋವಾ ದಿಂದ ಹೊರಡುವ ವಿಮಾನ ಸಂಜೆ 6.50ಕ್ಕೆ ಮೈಸೂರು ತಲುಪಲಿದೆ.
ಪ್ರಾದೇಶಿಕ ಸಂಪರ್ಕ ವ್ಯವಸ್ಥೆಯಡಿ ಈ ಸೇವೆ ಒದಗಿಸಲು ನಾಗರಿಕ ವಿಮಾನಯಾನ ಸಚಿವಾಲಯ ಜನವರಿಯಲ್ಲಿ ಒಪ್ಪಿಗೆ ನೀಡಿತ್ತು.

ಸಂಸದ ಪ್ರತಾಪಸಿಂಹ ಅವರ ಮನವಿ ಮೇರೆಗೆ ನಾಗರಿಕ ವಿಮಾನ ಯಾನ ಸಚಿವರು ವಿವಿಧ ವಿಮಾನಯಾನ ಕಂಪನಿಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ, ಮೈಸೂರಿನಿಂದ ವಿಮಾನಯಾನ ಆರಂಭಿಸಲು ಒಪ್ಪಿಸಿದ್ದರು.

ಉಡಾನ್‌ ಯೋಜನೆ: ಸಾಮಾನ್ಯರಿಗೆ ಕಡಿಮೆ ದರದಲ್ಲಿ ವಿಮಾನಯಾನ ಸೌಲಭ್ಯ ಕಲ್ಪಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್‌ ಯೋಜನೆಯಡಿ ಈಗಾಗಲೇ 72 ಆಸನಗಳ ಟ್ರೂಜೆಟ್‌ ವಿಮಾನ ಚೆನ್ನೈ- ಮೈಸೂರು ನಡುವೆ ಹಾರಾಟ ನಡೆಸುತ್ತಿದೆ.

ರಾತ್ರಿ 8.35ಕ್ಕೆ ಮೈಸೂರಿನಿಂದ ಹೊರಟು ರಾತ್ರಿ 9.50ಕ್ಕೆ ಚೆನ್ನೈ ತಲುಪಲಿದೆ. ರಾತ್ರಿ 7ಗಂಟೆಗೆ ಚೆನ್ನೈ ನಿಂದ ಹೊರಡುವ ವಿಮಾನ ರಾತ್ರಿ 8.15ಕ್ಕೆ ಮೈಸೂರು ತಲುಪುತ್ತಿದೆ. ಈ ಸೇವೆಗೆ ಉತ್ತಮ ಸ್ಪಂದನೆ ದೊರೆತಿರುವುದರಿಂದ ಮೈಸೂರು-ಚೆನ್ನೈ ಹಗಲು ಸೇವೆ ಒದಗಿಸಲು ಟ್ರೂಜೆಟ್‌ ಸಂಸ್ಥೆ ಉತ್ಸುಕತೆ ತೋರಿದೆ ಎಂದರು.

ಮೈಸೂರು-ಶಿರಡಿ ಸಂಚಾರ: ಮೈಸೂರು-ಶಿರಡಿ ನಡುವೆ ವಿಮಾನಯಾನ ಸೇವೆ ಒದಗಿಸಲು ಸ್ಪೈಸ್‌ ಜೆಟ್‌ ಉತ್ಸುಕತೆ ತೋರಿದೆ. ಮೈಸೂರು-ಬೆಳಗಾವಿ ನಡುವೆ ವಿಮಾನಯಾನ ಸೇವೆ ಒದಗಿಸಲು ಟ್ರೂಜೆಟ್‌ ಸಂಸ್ಥೆ ಮುಂದೆ ಬಂದಿದ್ದು, ಈ ನಗರಗಳಿಗೆ ಶೀಘ್ರ ವಿಮಾನಯಾನ ಆರಂಭವಾಗಲಿದೆ ಎಂದು ತಿಳಿಸಿದರು.

ಅಭಿವೃದ್ಧಿ ಸಾಧ್ಯ: ವಿಮಾನ ಯಾನ ಉಳ್ಳವರಿಗೆ ಮಾತ್ರ ಎಂಬ ಕಲ್ಪನೆಯೇ ಸರಿಯಲ್ಲ. ಒಂದು ಪ್ರದೇಶದ ಸಾಮಾಜಿಕ, ಔದ್ಯಮಿಕ ಹಾಗೂ ಆರ್ಥಿಕ ಬೆಳವಣಿಗೆ ದೃಷ್ಟಿಯಿಂದ ವಿಮಾನ ನಿಲ್ದಾಣಗಳ ಅವಶ್ಯಕತೆ ಇದೆ.

ಭಾರತದ ಅತ್ಯುತ್ತಮ ಪ್ರವಾಸಿ ತಾಣವಾಗಿರುವ ಮೈಸೂರಿನ ಬೆಳವಣಿಗೆಗೆ ವಿಮಾನ ನಿಲ್ದಾಣದ ಅವಶ್ಯಕತೆ ತುಂಬಾ ಇದೆ. ವಿಮಾನ ನಿಲ್ದಾಣವಾಗುವುದರಿಂದ ಇಲ್ಲಿನ ಪ್ರವಾಸೋದ್ಯಮ ಮಾತ್ರವಲ್ಲ ಪ್ರತಿಯೊಂದು ಕ್ಷೇತ್ರಗಳ ಆರ್ಥಿಕ ಚಟುವಟಿಕೆಗಳೂ ಅಭಿವೃದ್ಧಿಯಾಗಲಿದೆ ಎಂದು ಅವರು ತಿಳಿಸಿದರು.

ಯೋಗ ಕೇಂದ್ರಗಳಿಗೆ ವಿದೇಶಿಯರು: ಮೈಸೂರಿನ ಯೋಗ ಕೇಂದ್ರಗಳಿಗೆ ನಿತ್ಯ 250 ರಿಂದ 300 ಜನ ವಿದೇಶಿಯರು ಬಂದು ಹೋಗುತ್ತಾರೆ. ಆದರೆ, ಅವರಿಗೆ ಮೈಸೂರಿನಲ್ಲಿ ವಿಮಾನಯಾನ ಸೌಲಭ್ಯ ಇರುವುದು ತಿಳಿದಿಲ್ಲ. ಹೀಗಾಗಿ ಅವರನ್ನು ಸಂಪರ್ಕಿಸಲಾಗುತ್ತಿದೆ. ಕೆಆರ್‌ಎಸ್‌ಗೆ ಅಂತರಾಷ್ಟ್ರೀಯ ಮಟ್ಟದ ಸಂಪರ್ಕ ಒದಗಿಸಿದಾಗ ಪ್ರವಾಸಿಗರ ಸಂಖ್ಯೆ ಇನ್ನೂ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟರು.

700 ಕೋಟಿ ರೂ.: ಮೈಸೂರಿನ ಮಂಡಕಳ್ಳಿಯಲ್ಲಿರುವ ವಿಮಾನ ನಿಲ್ದಾಣವನ್ನು 700 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಾಥಮಿಕ ಹಂತದಲ್ಲಿ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಯನ್ನು ಮಾಡಲಾಗುತ್ತದೆ. ಈ ಸಂಬಂಧ ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.

ಕೃಷಿ ಉತ್ಪನ್ನ ಸಾಗಿಸಲು ಸಹಕಾರಿ: ಕೃಷಿ ಉತ್ಪನ್ನಗಳನ್ನು ಅತ್ಯಂತ ಕಡಿಮೆ ಸಮಯದಲ್ಲಿ ಮಹಾ ನಗರಗಳ ಮಾರುಕಟ್ಟೆಗೆ ಕೊಂಡೊಯ್ಯಲು ವಿಮಾನ ಯಾನ ಸಹಕಾರಿ ಯಾಗಲಿದೆ. ತಿರುಚ್ಚಿ ವಿಮಾನ ನಿಲ್ದಾಣದಿಂದ ಅಲ್ಲಿನ ಹೂ ಬೆಳೆಗಾರರಿಗೆ ಬಹಳ ಅನುಕೂಲವಾಗಿದೆ. ಅದೇ ರೀತಿಯಲ್ಲಿ ಮೈಸೂರಿನಿಂದ ಯಾವ ಕೃಷಿ ಉತ್ಪನ್ನಗಳನ್ನು ಕಳುಹಿಸುತ್ತಾರೆ ಎಂಬುದು ಗೊತ್ತಾದರೆ ಅದಕ್ಕೆ ಕಾರ್ಗೋ ವಿಮಾನದ ವ್ಯವಸ್ಥೆ ಮಾಡಲಾಗುವುದು.

ಈ ಸಂಬಂಧ ಮೈಸೂರು ಛೇಂಬರ್‌ ಆಫ್ ಕಾಮರ್ಸ್‌ ಜತೆಗೆ ಮಾತುಕತೆ ನಡೆಸಿದ್ದು, ಎಪಿಎಂಸಿ ಜೊತೆಗೂ ಮಾತುಕತೆ ನಡೆಸಲಾಗುವುದು. ಮೈಸೂರಿನಿಂದ ಕೇರಳಕ್ಕೆ ನಿತ್ಯ ಲೋಡ್‌ಗಟ್ಟಲೇ ದಿನಸಿ ಪದಾರ್ಥ ಹಾಗೂ ತರಕಾರಿಯನ್ನು ಕೊಂಡೊಯ್ಯಲಾಗುತ್ತೆ. ಇದಕ್ಕಾಗಿ ಏರ್‌ ಕಾರ್ಗೋ ಬಳಸಿಕೊಳ್ಳಬಹುದು ಎಂದು ವಿಮಾನ ನಿಲ್ದಾಣದ ನಿರ್ದೇಶಕ ಮಂಜುನಾಥ್‌ ಹೇಳಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.