Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

ಉಡುವೆಪುರದಲ್ಲಿ ಹುಲಿ ದಾಳಿಗೆ ಬಲಿಯಾದ ಗಣೇಶನ ಅಂತ್ಯಕ್ರಿಯೆ

Team Udayavani, Oct 3, 2023, 9:45 PM IST

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

ಹುಣಸೂರು:ನಾಗರಹೊಳೆ ಉದ್ಯಾನದ ಉದ್ದನಹಳ್ಳಿ ಬಫರ್‌ ಝೋನ್‌ನ ಕೆರೆ ಬಳಿ ಹುಲಿ ದಾಳಿಗೆ ಬಲಿಯಾಗಿದ್ದ ಉಡುವೆಪುರದ ರೈತ ಗಣೇಶನ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನಡೆಯಿತು.

ಹನಗೋಡು ಆಸ್ಪತ್ರೆ ವೈದ್ಯ ಡಾ.ಜೋಗೇಂದ್ರನಾಥ್‌ ಸೋಮವಾರ ರಾತ್ರಿ 10.30ರ ವೇಳೆ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಕಂಬನಿ ಮಿಡಿದರು:
ಕುಟುಂಬ, ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಕ್ಕಪಕ್ಕದ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ, ಸಾವಿಗೆ ಕಂಬನಿ ಮಿಡಿದರು.

ಮೆದುಳಿಗೆ ಪೆಟ್ಟಾಗಿತ್ತು:
ಹುಲಿಯು ಗಣೇಶನ ತಲೆ ಕಚ್ಚಿದ್ದು, ಮೆದುಳಿಗೆ ತೀವ್ರ ಪೆಟ್ಟಾಗಿತ್ತು. ಪಂಜದಲ್ಲಿ ಎಲ್ಲೆಡೆ ಪರಚಿದೆ. ಎರಡೂ ತೊಡೆಗಳನ್ನು ಕಚ್ಚಿದ್ದು, ಎಳೆದಾಡಿದ್ದರಿಂದ ಸಾವನ್ನಪ್ಪಿದ್ದಾನೆ.

ಹುಲಿ ಪತ್ತೆಗೆ 30-40 ಕ್ಯಾಮರಾ:
ಹುಲಿ ಸೆರೆಗೆ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ, ಆದರೆ, ಗಣೇಶನನ್ನು ಬಲಿ ಪಡೆದ ಹುಲಿ ಪತ್ತೆಗೆ ಈಗಾಗಲೆ 12 ಕಡೆ ಕ್ಯಾಮೆರಾ ಅಳವಡಿಸಿದ್ದು, ಹೆಜ್ಜೆ ಪತ್ತೆಯಾಗಿದೆ. ಹುಲಿ ಕುರುಹು ಪತ್ತೆಯಾಗಿಲ್ಲ. ಮತ್ತಷ್ಟು ಕ್ಯಾಮರಾ ಅಳವಡಿಸಲಾಗುವುದು.

ವಿಶೇಷ ಪ್ರಕರಣ ಪರಿಹಾರಕ್ಕೆ ಮನವಿ:
ಉದ್ಯಾನದೊಳಗೆ ಘಟನೆ ನಡೆದಿರುವುದರಿಂದ ಪರಿಹಾರ ಕೊಡಲು ಸಾಧ್ಯವಿಲ್ಲ. ಆದರೆ, ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಜಿ.ಡಿ.ಹರೀಶ್‌ಗೌಡರು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರೊಂದಿಗೆ ಚರ್ಚಿಸಿದ್ದು, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್‌ ಚಿಕ್ಕನರಗುಂದ “ಉದಯವಾಣಿ’ಗೆ ತಿಳಿಸಿದರು.

ಎಚ್ಚರಿಕೆ ನಡುವೆಯೂ ಅಕ್ರಮ ಪ್ರವೇಶ:
ಕಳೆದ ತಿಂಗಳಿನಿಂದೀಚೆಗೆ ಮುದ್ದನಹಳ್ಳಿ, ಉಡುವೆಪುರ ಸುತ್ತಮುತ್ತ ಜಾನುವಾರು ಸೇರಿ ಸಾಕು ಪ್ರಾಣಿಗಳನ್ನು ಹುಲಿ ಕೊಂದಿತ್ತು. 10 ದಿನಗಳ ಹಿಂದೆ ಮುದ್ದನಹಳ್ಳಿ ರಮೇಶ್‌ ಎಂಬಾತನ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಳಿಸಿದ ನಂತರ ಯಾರೂ ಉದ್ಯಾನವನ ಪ್ರವೇಶಿಸದಂತೆ ಅರಣ್ಯ ಸಿಬ್ಬಂದಿ ಮನವಿ ಮಾಡಿದ್ದಾರೆ. ಮೈಕ್‌ ಮೂಲಕ ಸಾರಲಾಗಿತ್ತು. ಸೋಮವಾರವೂ ಮೃತ ಗಣೇಶ ಅರಣ್ಯದಲ್ಲಿ ಜಾನುವಾರು ಮೇಯಿಸುವಾಗಲೇ ಸಿಬ್ಬಂದಿ ಎಚ್ಚರಿಕೆ ನೀಡಿರುವ ವಿಡಿಯೋ ಸಹ ಇದ್ದು, ಸಿಬ್ಬಂದಿ ಮಾತು ಕೇಳದ ಗಣೇಶ ಪ್ರಾಣ ಕಳೆದುಕೊಂಡಿರುವುದು ವಿಪರ್ಯಾಸವೇ ಸರಿ.

ಎಚ್ಚರಿಕೆ ಪಾಲಿಸಿ:
ಮುಂದಾದರೂ ಅರಣ್ಯದಂಚಿನ ಜಾನುವಾರು ಸಾಕಣೆದಾರರು, ರೈತರು ಜಾನುವಾರು, ಕುರಿಗಳನ್ನು ಅರಣ್ಯದೊಳಗೆ ಬಿಡಬೇಡಿ, ಅಕ್ರಮ ಪ್ರವೇಶ ಮಾಡದಂತೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್‌ ಚಿಕ್ಕನರಗುಂದ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.