ಹುಣಸೂರು: ಇಂದಿನಿಂದ ನಾಗರಹೊಳೆಯಲ್ಲಿ ಹುಲಿ ಗಣತಿ ಕಾರ್ಯ ಆರಂಭ


Team Udayavani, Jan 27, 2023, 10:26 AM IST

2–hunsur

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜ.27 ರಿಂದ ಫೆ.6 ರವರೆಗೆ ಎಂಟು ದಿನಗಳ ಕಾಲ ಹುಲಿಗಣತಿ ಕಾರ್ಯ ನಡೆಯಲಿದೆ.

ಈ ಸಂಬಂಧ ಜ.26 ಗುರುವಾರದಂದು ವೀರನಹೊಸಹಳ್ಳಿ ವಲಯ ಕಚೇರಿಯಲ್ಲಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಾಗರಹೊಳೆ ಹುಲಿಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದರ ನೇತೃತ್ವದಲ್ಲಿ ಬೆಂಗಳೂರಿನ ಟೈಗರ್‌ಸೆಲ್‌ನ ವಿನಯ್ ಹಾಗೂ ಡಿಆರ್‌ಎಫ್‌ಓ ನಂದನ್ ತರಬೇತಿ ನೀಡಿದರು.

ಈ ವೇಳೆ ಮಾಹಿತಿ ನೀಡಿದ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್‌ ಚಿಕ್ಕನರಗುಂದರವರು ಮೊದಲ ಮೂರು ದಿನ ಮಾಂಸಹಾರಿ ಹಾಗೂ ದೊಡ್ಡ ಪ್ರಾಣಿಗಳ ಸಮೀಕ್ಷೆ ನಡೆಸಿ ಎಕಾಲಾಜಿಕಲ್ ಆ್ಯಪ್‌ನಲ್ಲಿ ದಾಖಲಿಸಬೇಕು.

ನಂತರ ಮೂರು ದಿನ ಲೈನ್ ಟ್ರಾಂಜ್ಯಾಕ್ಟ್ ಮೂಲಕ ಪ್ರತಿ ಬೀಟ್‌ನಲ್ಲಿ ಸುಮಾರು 1-2 ಕಿ.ಮೀ ವರೆಗೆ ಸಸ್ಯಹಾರಿ ಪ್ರಾಣಿಗಳ ಸರ್ವೆ, ಮರಗಿಡ, ಗಿಡಮೂಲಿಕೆ ಸಸ್ಯ ಪ್ರಬೇಧಗಳ ಮಾಹಿತಿ ಸಂಗ್ರಹಣೆ, ಸಸ್ಯಹಾರಿ ಪ್ರಾಣಿಗಳ ಹಿಕ್ಕೆಗಳ ಪರಿವೀಕ್ಷಣೆ ನಡೆಸಲಾಗುವುದು.

ಏಳನೇ ದಿನ ರಣಹದ್ದುಗಳ ಸಮೀಕ್ಷೆ ನಡೆಸಲಾಗುವುದು. ಕೊನೆಯ ದಿನ ಸಮಗ್ರ ಮಾಹಿತಿಯನ್ನು ಕ್ರೋಡೀಕರಿಸಿ ಇಲಾಖೆಗೆ ಸಲ್ಲಿಸುವಂತೆ ಸೂಚಿಸಿದರು.

ಉದ್ಯಾನದ 8 ವಲಯಗಳ 91 ಬೀಟ್‌ನಲ್ಲಿ ಗಣತಿ ಕಾರ್ಯ ನಡೆಯಲಿದ್ದು, ಗಣತಿ ಕಾರ್ಯದಲ್ಲಿ ಸಂಪೂರ್ಣ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ತೊಡಗಿಸಿಕೊಳ್ಳಲಿದ್ದಾರೆ. ಯಾವುದೇ ಸ್ವಯಂ ಸೇವಕರನ್ನು ಈ ಕಾರ್ಯಕ್ಕೆ ಬಳಸಿಕೊಂಡಿಲ್ಲವೆಂದು ಡಿಸಿಎಫ್ ಮಾಹಿತಿ ನೀಡಿದರು.

ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕಳೆದ ಬಾರಿ ನಡೆಸಿದ್ದ ಹುಲಿ ಗಣತಿ ಕಾರ್ಯದ ಅಂಕಿ ಅಂಶ ಈವರೆಗೂ ಬಿಡುಗಡೆಯಾಗದಿರುವುದು, ಮತ್ತೆ ಈಗ ಗಣತಿ ಕಾರ್ಯಾರಂಭವಾಗಿರುವುದು ಇದೀಗ ಚರ್ಚಾ ಗ್ರಾಸವಾಗಿದೆ.

ಟಾಪ್ ನ್ಯೂಸ್

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

ವರುಣಾ- ಕೋಲಾರ.. ಕ್ಷೇತ್ರ ಯಾವುದಯ್ಯಾ? ಮತ್ತಷ್ಟು ಗೊಂದಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ

hd-kumarswamy

26ರಂದು ಪಂಚರತ್ನ ಸಮಾರೋಪ ಸಮಾವೇಶ: ಎಚ್.ಡಿ.ಕುಮಾರಸ್ವಾಮಿ

tdy-10

ನರಸಿಂಹರಾಜ ಕ್ಷೇತ್ರಕ್ಕೆ ಯಾರಾಗಲಿದ್ದಾರೆ ಅಧಿಪತಿ

tdy-17

ತಂಬಾಕುನಾಡಲ್ಲಿ ಹಾಲಿ, ಮಾಜಿ ಶಾಸಕರ ಫೈಟ್‌

4-hunsur-congress

ಹುಣಸೂರು: ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.