ಎಸ್ಟೇಟ್ನಲ್ಲಿ ಹುಲಿ ಪ್ರತ್ಯಕ್ಷ: ಆತಂಕ
Team Udayavani, Aug 20, 2018, 12:40 PM IST
ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಣಸೂರು ವಲಯದ ಪಕ್ಕದಲ್ಲಿನ ತರಗನ್ ಎಸ್ಟೇಟ್ನಲ್ಲಿ ಕಳೆದೊಂದು ವಾರದಿಂದ ಹುಲಿ ಕಾಣಿಸಿಕೊಂಡಿರುವುದಲ್ಲದೆ, ಈಗಾಗಲೆ ಎರಡು ಜಾನುವಾರುಗಳನ್ನು ತಿಂದು ಹಾಕಿದ್ದು, ಮತ್ತೆರಡು ಜಾನುವಾರುಗಳನ್ನು ಗಾಯಗೊಳಿಸಿ ಆತಂಕ ಮೂಡಿಸಿತ್ತು.
ಅಲ್ಲದೆ ಹಸುವೊಂದರ ಮೇಲೆ ದಾಳಿ ಮಾಡುತ್ತಿದ್ದ ಹುಲಿಯನ್ನು ಕಂಡಿರುವ ಗ್ರಾಮಸ್ಥರೊಬ್ಬರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಆರ್.ರವಿಶಂಕರ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಮತ್ತಿಗೋಡು ವಲಯದ ಕಂಠಾಪುರ ಶಿಬಿರದ ಸಾಕಾನೆಗಳಾದ ಅಭಿಮನ್ಯು, ಬಲರಾಮ, ಭೀಮ, ಗಣೇಶ, ದ್ರೋಣ ಆನೆಗಳ ಸಹಾಯದಿಂದ ಪ್ರತ್ಯೇಕ ತಂಡ ರಚಿಸಿಕೊಂಡು 400 ಎಕರೆಗೂ ಹೆಚ್ಚು ಪ್ರದೇಶದ ತರಗನ್ ಎಸ್ಟೇಟ್ನಲ್ಲಿ ಹುಲಿ ಪತ್ತೆಗೆ ಕೂಂಬಿಂಗ್ ನಡೆಯುತ್ತಿದೆ.
ಹುಲಿಯಿಂದಾಗಿ ಕಚುವಿನಹಳ್ಳಿ, ನೇರಳೇಗುಪ್ಪೆ, ಕೆ.ಜಿ. ಹಬ್ಬನಕುಪ್ಪೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನತೆ ಆತಂಕಗೊಂಡಿದ್ದಾರೆ. ಸ್ಥಳದಲ್ಲಿ ಸಿ.ಎಫ್.ರವಿಶಂಕರ್, ವೈಲ್ಡ್ ಲೈಫ್ ವಾರ್ಡನ್ ಕೃತಿಕ ಸೇರಿದಂತೆ ತಂಡ ಕಾರ್ಯಾಚರಣೆಗೆ ಮುಂದಾಗಿದೆ. ಕೆ.ಜಿ.ಹಬ್ಬನಕುಪ್ಪೆ ಎಸ್ಟೇಟ್ನಲ್ಲಿ ಕಾಣಿಸಿಕೊಂಡಿರುವ ಹುಲಿಯು ಎಸ್ಟೇಟ್ನ ಸುತ್ತಮುತ್ತ ಅಡ್ಡಾಡುತ್ತಿರುವ ಮಾಹಿತಿ ಸಿಕ್ಕಿದೆ.
ಅಗತ್ಯ ವಿರುವೆಡೆ ಸಿ.ಸಿ.ಕ್ಯಾಮೆರಾ ಅಳವಡಿಸಲಾಗಿದೆ. ಈಗಾಗಲೆ ಹುಲಿಯನ್ನು ಉದ್ಯಾನದೊಳಗೆ ಸೇರಿಸಲು ಪ್ರಯತ್ನ ನಡೆದಿದೆ. ಪರಿಸ್ಥಿತಿಯನ್ನು ನೋಡಿಕೊಂಡು ಬಗ್ಗೆ ಹಿರಿಯ ಅ ಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದೆಂದು ನಾಗರಹೊಳೆ ಉದ್ಯಾನವನದ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಆರ್.ರವಿಶಂಕರ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ