ಅಧಿಕಾರಿ, ವಾಚರ್‌ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ


Team Udayavani, Mar 1, 2021, 1:19 PM IST

ಅಧಿಕಾರಿ, ವಾಚರ್‌ ಮೇಲೆ ದಾಳಿ ನಡೆಸಿದ್ದ  ಹುಲಿ ಸೆರೆ

ಎಚ್‌.ಡಿ.ಕೋಟೆ: ಕೇರಳದಲ್ಲಿ ಅರಣ್ಯ ಇಲಾಖೆ ವಲಯ ಅಧಿಕಾರಿ ಹಾಗೂ ವಾಚರ್‌ ಮೇಲೆದಾಳಿ ನಡೆಸಿದ್ದ ಹೆಣ್ಣು ಹುಲಿ ತಾಲೂಕಿನ ಎನ್‌ ಬೇಗೂರು ಅರಣ್ಯ ವ್ಯಾಪ್ತಿಯ ಗುಂಡ್ರೆ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಶನಿವಾರ ರಾತ್ರಿ ಸೆರೆ ಸಿಕ್ಕಿದೆ.

ಶರೀರದಲ್ಲಿ ಗಾಯಗಳಾಗಿ ಬೇಟೆಯಾಡಲು ಅಶಕ್ತವಾಗಿವಾಗಿರುವ ಸುಮಾರು 7-8 ವರ್ಷದ ಹೆಣ್ಣು ಹುಲಿಯನ್ನು ಚಿಕಿತ್ಸೆಗಾಗಿ ಮೈಸೂರು ಮೃಗಾಲಯಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುವುದು. ಬಳಿಕ ಹುಲಿಯ ಆರೋಗ್ಯ ಸ್ಥಿತಿಗತಿ ಗಮನಿಸಿ ಹುಲಿಯನ್ನು ಕಾಡಿಗೆ ಬಿಡಬೇಕೆ ಎಂಬ ಕುರಿತು ನಿರ್ಧರಿಸುವುದಾಗಿ ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಒಂದೂವರೆ ತಿಂಗಳ ಹಿಂದೆ ಕೇರಳ ಕರ್ನಾಟಕ ಗಡಿಭಾಗದ ಚಾಮಾಪುರ ಎಂಬಲ್ಲಿ ಹುಲಿಯೊಂದು ಕೇರಳ ಅರಣ್ಯ ಇಲಾಖೆಯ ಇಬ್ಬರ ಮೇಲೆ ದಾಳಿಗೆ ಮುಂದಾಗಿತ್ತು. ಈ ಸಂದರ್ಭದಲ್ಲಿಅಲ್ಲಿಂದ ಕಣ್ಮರೆಯಾಗಿದ್ದ ಹುಲಿ ಕರ್ನಾಟಕ ಗಡಿ ಭಾಗದ ಎನ್‌.ಬೇಗೂರಿನ ಬಾಣೂರು ಆಸುಪಾಸಿನಲ್ಲಿ ಬೀಡು ಬಿಟ್ಟಿರುವ ಕುರಿತು ಶಂಕೆ ಇತ್ತು.  ಹುಲಿ ಸೆರೆ ಹಿಡಿಯುವಂತೆ ಕೇರಳ ಅರಣ್ಯ ಇಲಾಖೆಯು ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿತ್ತು. ಅರಣ್ಯಇಲಾಖೆ ಹಿರಿಯ ಅಧಿಕಾರಿಗಳ ಆದೇಶದಂತೆಸಾಕಾನೆಗಳ ಸಹಾಯದಿಂದ 15 ದಿನಗಳ ತನಕಹುಲಿ ಸೆರೆಗೆ ಕಾರ್ಯಾಚರಣೆ ನಡೆಸಿದರೂ ಸತತ ಒಂದು ತಿಂಗಳಿಂದ ಹುಲಿ ಪತ್ತೆಯಾಗಿರಲಿಲ್ಲ.ಹುಲಿ ಸೆರೆಗೆ ಸಿಸಿ ಕ್ಯಾಮರಾ ಕೂಡ ಅಳವಡಿಸಿತ್ತಾದರೂ ಕಳೆದ 3 ದಿನಗಳ ಹಿಂದಿನತನಕ ಹುಲಿ ಪತ್ತೆಯಾಗಿರಲಿಲ್ಲ. 3 ದಿನಗಳ ಹಿಂದೆ ಹುಲಿಯ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶನಿವಾರ ಮಧ್ಯಾಹ್ನ ಹುಲಿಪೊದೆಯೊಂದರಲ್ಲಿ ಅಶಕ್ತವಾಗಿ ಮಲಗಿದ್ದ ದೃಶ್ಯಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಗೋಚರಿಸಿದೆ.

ಕೂಡಲೇ ಹುಲಿ ಸೆರೆಗೆ ತಂತ್ರ ರೂಪಿಸಿದಅರಣ್ಯ ಶನಿವಾರ ಸಂಜೆ ವೇಳೆಗೆ ಗುಂಡ್ರೆ ಅರಣ್ಯಪ್ರದೇಶದ ಚಾಮಾಪುರ ಎಂಬಲ್ಲಿ ಬೋನ್‌ಅಳವಡಿಸಿ, ಅದರಲ್ಲಿ ಮೇಕೆ ಇರಿಸಲಾಯಿತು.ಬಳಿಕ ಹುಲಿ ತನಗರಿವಿಲ್ಲದಂತೆ ಬೋನಿನಲ್ಲಿ ಬಂಧಿಯಾಗಿದೆ.

ಸೆರೆಯಾದ ಹುಲಿಯನ್ನು ಸ್ಥಳಾಂತರಿಸಲುಕ್ರಮ ಕೈಗೊಂಡಿದ್ದು, ಕಾರ್ಯಾಚರಣೆಯಲ್ಲಿಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್‌, ಗುಂಡ್ರೆ ವಲಯದ ವಲಯಅರಣ್ಯಾಧಿಕಾರಿ ಶಶಿಧರ್‌, ಎನ್‌.ಬೇಗೂರುವಲಯ ಅರಣ್ಯಾಧಿಕಾರಿ ಸಚಿನ್‌ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.