ಅಂಗವಿಕಲರು ಮತಗಟ್ಟೆಗೆ ತೆರಳಲು ವಾಹನ ವ್ಯವಸ್ಥೆ


Team Udayavani, Apr 13, 2019, 3:00 AM IST

angavikal

ಮೈಸೂರು: ಸದೃಢ ಭಾರತಕ್ಕಾಗಿ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಿ ಎಂದು ವಿಶೇಷಚೇತನರು ಜಾಗೃತಿ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾ ನಗರಪಾಲಿಕೆ ಮತ್ತು ಜೆಎಸ್‌ಎಸ್‌ ಮಹಾ ವಿದ್ಯಾಪೀಠ, ಜೆಎಸ್‌ಎಸ್‌ ವಿಶೇಷಚೇತನರ ಪಾಲಿಟೆಕ್ನಿಕ್‌ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಚಾಲನೆ ನೀಡಿದರು.

ನಗರದ ಟಿ.ಕೆ.ಲೇಔಟ್‌ನ ಬಿಸಲು ಮಾರಮ್ಮ ದೇವಸ್ಥಾನ ಬಳಿಯಿಂದ 500ಕ್ಕೂ ಹೆಚ್ಚು ವಿಶೇಷಚೇತನರು ಎಸ್‌ಜೆಸಿಇ ಕ್ಯಾಂಪಸ್‌ನಲ್ಲಿರುವ 500ಕ್ಕೂ ಹೆಚ್ಚು ಎಲ್ಲಾ ವರ್ಗದ ವಿಶೇಷಚೇತನರು ಜಾಥಾ ನಡೆಸಿದರು.

ದೈಹಿಕ ವಿಶೇಷಚೇತನರು ತ್ರಿಚಕ್ರ ವಾಹನಗಳಲ್ಲಿ ರ್ಯಾಲಿ ನಡೆಸಿದರೆ, ದೃಷ್ಟಿ ವಿಶೇಷಚೇತನರು ವಾಕಥಾನ್‌ ನಡೆಸಿದರು. ಮೈಸೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ, ದೃಷ್ಟಿ ವಿಶೇಷಚೇತನ ಡಾ.ಕೃಷ್ಣ ಹೊಂಬಾಳ್‌ ಮಾತನಾಡಿ, ಮತದಾನ ಎಲ್ಲರ ಹಕ್ಕು, ಆದ್ದರಿಂದ ಯಾರೊಬ್ಬರೂ ಮತದಾನದಿಂದ ವಂಚಿತರಾಗಬಾರದು.

ಕಳೆದ ಚುನಾವಣೆಗಳಲ್ಲಿ ವಿಶೇಷ ಚೇತನರು ಮತದಾನ ಮಾಡುವುದು ಸ್ವಲ್ಪ ಕಷ್ಟವಿತ್ತು. ವಿಶೇಷಚೇತನರಿಗೆ ಮತದಾನಕ್ಕೆ ಅನುಕೂಲ ಕಲ್ಪಿಸುವ ಮೂಲಕ ಚುನಾವಣೆ ಆಯೋಗ ಸುಧಾರಣೆ ತಂದಿದೆ. ಈಗ ವಿಶೇಷಚೇತನರು ಸುಲಭವಾಗಿ ಮತದಾನ ಮಾಡಬಹುದಾಗಿದೆ ಎಂದರು.

ನ್ಯಾಷನಲ್‌ ಫೆಡರೇಷನ್‌ ಆಫ್ ಬ್ಲೆ„ಂಡ್‌ (ಎನ್‌ಎಬಿ), ಜಿಲ್ಲಾ ವಿಶೇಷಚೇತನರ ಒಕ್ಕೂಟ ಸೇರಿದಂತೆ ನಾನಾ ವಿಶೇಷಚೇತನ ಸಂಘ ಸಂಸ್ಥೆಗಳು ಜಾಥಾದಲ್ಲಿ ಭಾಗವಹಿಸಿ ಗಮನಸೆಳೆದರು.

ಜಾಥಾ ನಂತರ ಜೆಎಸ್‌ಎಸ್‌ ವಿಶೇಷಚೇತನರ ಪಾಲಿಟೆಕ್ನಿಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್‌ಎಬಿಯ ಉಪನ್ಯಾಸಕ ಕೆ.ಎಂ.ಪುಟ್ಟರಾಜು ಮಾತನಾಡಿ, ಹಿಂದಿನ ಚುನಾವಣೆಗಳಿಗಿಂತ ಈಗ ಮತ ಚಲಾವಣೆ ಸುಲಭ. ಚುನಾವಣೆ ಆಯೋಗ ಹೆಚ್ಚಿನ ಸೌಲಭ್ಯ ಕಲ್ಪಿಸಿದೆ ಎಂದರು.

ದೈಹಿಕ ವಿಶೇಷಚೇತನರಿಗೆ ಗಾಲಿಕುರ್ಚಿ ವ್ಯವಸ್ಥೆ ಕಲ್ಪಿಸಿದೆ. 1950 ಸಂಖ್ಯೆಗೆ ಕರೆ ಮಾಡಿದರೆ ಮತಗಟ್ಟೆಯಿಂದ ಆಟೋ ವ್ಯವಸ್ಥೆ ಒದಗಿಲಾಗುತ್ತದೆ. ಈ ಮೊದಲು ದೃಷ್ಟಿ ವಿಶೇಷಚೇತನರು ಮತ ಹಾಕುವಾಗ ನಮ್ಮ ಸಹಾಯಕರು ನಾವು ಹೇಳಿದ ಪಕ್ಷದ ಬದಲು ಅವರಿಗಿಷ್ಟವಾದ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತಿದ್ದರು.

ಇದರಿಂದಾಗಿ ನಮಗೆ ವಿಶ್ವಾಸವಿರುತ್ತಿರಲಿಲ್ಲ. ಆದರೆ, ಈ ಬಾರಿ ಮತಯಂತ್ರಗಳಲ್ಲಿ ಬ್ರೈಲ್‌ಲಿಪಿ ಅಳವಡಿಸಿರುವುದರಿಂದ ವಿಶ್ವಾಸದಿಂದ ಮತ ಚಲಾಯಿಸಬಹುದು ಎಂದು ವಿವರಿಸಿದರು.

ಜೆಎಸ್‌ಎಸ್‌ ಮಹಾ ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರ್‌ ಮಠ ಮಾತನಾಡಿ, ವಿಶೇಷಚೇತನರಿಗೆ ಮತದಾನದ ಮಹತ್ವ ತಿಳಿಸಬೇಕಿದ್ದು, ಈ ನಿಟ್ಟಿನಲ್ಲಿ ವಿಶೇಷಚೇತನರ ಮತ ಜಾಗೃತಿ ಜಾಥಾ ಸಹಕಾರಿಯಾಗಲಿದೆ ಎಂದು ಹೇಳಿದರು. ಪ್ರಾಂಶುಪಾಲ ಇಳಂಗೋವನ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.