ತಂಬಾಕು ಬೆಳೆ ಮುಕ್ತ ಹುಣಸೂರು ಗುರಿ


Team Udayavani, Jan 28, 2019, 7:21 AM IST

m2-tambaku.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನ ಹಾಗೂ ಕೊಡಗಿನ ಹೆಬ್ಟಾಗಿಲಾಗಿರುವ ಹುಣಸೂರು ತಾಲೂ ಕನ್ನು ತಂಬಾಕು ಮುಕ್ತವಾಗಿಸಲು ರೈತರಿಗೆ ಅರಿವು ಮೂಡಿಸಲು ರೋಟರಿಯೊಂದಿಗೆ ಕೈಜೋಡಿಸುವುದಾಗಿ ಬೆಂಗಳೂರಿನ ವೈದ್ಯಕೀಯ ಸಂಶೋಧನಾ ಕೇಂದ್ರದ ಮಕ್ಕಳ ಹೃದ್ರೋಗ ವಿಭಾಗದ ಪ್ರಾಧ್ಯಾಪಕಿ ಡಾ. ವಿಜಯಲಕ್ಷ್ಮೀ ಬಾಳೆಕುಂದ್ರಿ ತಿಳಿಸಿದರು.

ನಗರದ ರೋಟರಿ ವಿದ್ಯಾಸಂಸ್ಥೆಯ 25ನೇ ವರ್ಷದ ಅಂಗವಾಗಿ ಕಾಫಿ ವರ್ಕ್ಸ್ ಆವರಣದಲ್ಲಿ ಆಯೋಜಿಸಿದ್ದ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, ಅರಣ್ಯ ಹೊಂದಿರುವ ಪುಣ್ಯಭೂಮಿ ಇದಾಗಿದ್ದು, ಇಂತಹ ಸ್ಥಳದಲ್ಲಿ ತಂಬಾಕು ಬೆಳೆಯುತ್ತಿರುವುದು ದುರಂತ. ಪ್ರತಿ ಒಂದು ಕೆ.ಜಿ. ತಂಬಾಕು ಹದಗೊಳಿಸಲು ಪ್ರತಿಯಾಗಿ 118 ಗಿಡಗಳನ್ನು ನೆಟ್ಟು ಬೆಳೆಸಬೇಕಿದೆ. ರೋಟರಿ ಸಂಸ್ಥೆ ಹುಣಸೂರಿನಲ್ಲಿ ರೈತರಿಗೆ ಪರ್ಯಾಯ ಬೆಳೆಗಳ ಅಗತ್ಯತೆ ಕುರಿತು ಅರಿವು ಮೂಡಿಸುವ ಕಾರ್ಯ ಕೈಗೊಂಡಲ್ಲಿ ತಾವು ಕೂಡ ಅದರಲ್ಲಿ ಭಾಗಿಯಾಗುವುದಾಗಿ ಭರವಸೆ ನೀಡಿದರು.

ಈ ನೆಲದಲ್ಲಿ ಆಂಗ್ಲಭಾಷೆ ವ್ಯಾಮೋಹಕ್ಕೆ ಸಿಲುಕಬೇಡಿ. ಕನ್ನಡ ನಿಮ್ಮ ಆದ್ಯತೆಯಾಗಲಿ. ಆಂಗ್ಲಭಾಷೆ ಕೂಡ ಬೇಕು. ಪ್ರಾಮುಖ್ಯತೆ ಕನ್ನಡವಾಗಲಿ ಎಂದರು. ಎಂಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ ಸಂಸ್ಥೆಯ ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಿ ಮಾತನಾಡಿ, ಹುಣಸೂರು ರೋಟರಿ ವಿದ್ಯಾಸಂಸ್ಥೆ ಪ್ರತಿವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ ಮಾಡಿತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್‌ ಮೇಜರ್‌ ಡೋನರ್‌ ಪಿ.ರೋಹಿನಾಥ್‌, ನಗರಸಭಾಧ್ಯಕ್ಷ ಎಚ್.ವೈ.ಮಹದೇವ್‌, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಶಿವಕುಮಾರ್‌ ವಿ.ರಾವ್‌, ವಿದ್ಯಾಸಂಸ್ಥೆ ಅಧ್ಯಕ್ಷ ಅನಂತರಾಜೇಅರಸ್‌, ರೋಟರಿ ಕ್ಲಬ್‌ ಅಧ್ಯಕ್ಷ ನರಹರಿ, ಕಾರ್ಯದರ್ಶಿ ಸುನೀತಾ ಇತರರಿದ್ದರು.

ಸಾಂಸ್ಕೃತಿಕ ಸೌರಭ: 25ನೇ ವರ್ಷದ ಸವಿ ನೆನಪಿಗಾಗಿ ವಿದ್ಯಾರ್ಥಿಗಳು ಕೇರಳ ನಾಡಿನ ತೈಯ್ಯಂ ನೃತ್ಯದ ಮೂಲಕ ಹಿರಣ್ಯ ಕಶಿಪುವಿನ ಸಂಹಾರ, ಕೇಳರದ ಮೋಹಿನಿ ಯಾಟ್ಟಂ ನೃತ್ಯ, ದಿ ವಿಲನ್‌ ಚಲನಚಿತ್ರದ ರಾವಣ ಸಂಹಾರ ನೃತ್ಯ, ಜಪಾನಿ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.