ಇಂದು ಶನೈಶ್ಚರಸ್ವಾಮಿ ಜಾತ್ರಾ ಮಹೋತ್ಸವ
Team Udayavani, Apr 20, 2019, 3:00 AM IST
ಹುಣಸೂರು: ಕೆ.ಆರ್.ನಗರ ಮುಖ್ಯರಸ್ತೆಯ ಕಲ್ಕುಣಿಕೆ ರಂಗನಾಥ ಬಡಾವಣೆ ಶನೈಶ್ಚರಸ್ವಾಮಿ ದೇವಾಲಯದ ನಾಲ್ಕನೇ ವಾರ್ಷಿಕೋತ್ಸವ ಹಾಗೂ ಜಾತ್ರಾ ಮಹೋತ್ಸವವು ಶನಿವಾರ ನಡೆಯಲಿದೆ.
ನಾಲ್ಕು ವರ್ಷಗಳ ಹಿಂದೆ ಭಕ್ತರ ನೆರವಿನೊಂದಿಗೆ ಭವ್ಯವಾಗಿ ನಿರ್ಮಾಣಗೊಂಡಿರುವ ಶನೈಶ್ಚರಸ್ವಾಮಿ, ಮಹಾಗಣಪತಿ, ದುರ್ಗಾಪರಮೇಶ್ವರಿ ಅಮ್ಮನವರ ಹಾಗೂ ನವಗ್ರಹ ಹಾಗೂ ಕಿರಾತೇಶ್ವರ ಮತ್ತು ನಾಗದೇವರ ದೇವಾಲಯವು ರಾಜ್ಯಾದ್ಯಂತ ಭಕ್ತರನ್ನು ಹೊಂದಿದೆ.
ಪ್ರತಿ ಶನಿವಾರ ವಿಶೇಷ ಪೂಜೆ, ಪ್ರಸಾದ ವಿನಿಯೋಗ, ಪ್ರತಿ ಮಂಗಳವಾರ ಮತ್ತು ಪ್ರತಿ ತಿಂಗಳು ಸಂಕಷ್ಠಿ ಪೂಜೆಯನ್ನು ಮಹಾಗಣಪತಿಗೆ , ಬುಧುವಾರ ಶನೈಶ್ಚರಸ್ವಾಮಿಗೆ, ಶುಕ್ರವಾರ ಮತ್ತು ಮಂಗಳವಾರ ದುರ್ಗಾಪರಮೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ, ಪ್ರಸಾದವಿನಿಯೋಗ ನಡೆಯಲಿದೆ.
ಕಾರ್ಯಕ್ರಮ ವಿವರ: ಶನಿವಾರ ಬೆಳಗ್ಗೆ 7.30 ರಿಂದ ಶನಿ ಶಾಂತಿ ಹೋಮ, ನವಗ್ರಹ ಹೋಮ, ಬೆಳಗ್ಗೆ 9 ಗಂಟೆಯಿಂದ ಕಲ್ಕುಣಿಕೆಯ ಮ್ಯೂಜಿಕ್ ಶ್ರೀನಿವಾಸ್ ತಂಡದಿಂದ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ, ಮಧ್ಯಾಹ್ನ 12ರಿಂದ ಜೀ ಕನ್ನಡ ಸರಿಗಮಪ ಸಾಂಸ್ಕೃತಿಕ ಕಾರ್ಯಕ್ರಮ.
ಮಧ್ಯಾಹ್ನ 12.30ಕ್ಕೆ ಮಹಾ ಮಂಗಳಾರತಿ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ. ನಂತರ ದೇವಾಲಯದ ಆವರಣದಲ್ಲಿ ಧಾರ್ಮಿಕ ಸಭೆ ನಡೆಯಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ