ಗಣೇಶ ಅಮೀನಗಡ ಕೃತಿಗೆ ತೋಂಟದ ಸಿದ್ಧಲಿಂಗ ಶ್ರೀ ಪ್ರಶಸ್ತಿ
Team Udayavani, Oct 26, 2022, 12:57 PM IST
ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ ‘ಮಾತು ಹಾಡಾಗಲಿ ಹಾಡು ಮಾತಾಗಲಿ’ ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ 2021ನೇ ಸಾಲಿನ ‘ಡಾ.ತೋಂಟದ ಸಿದ್ಧಲಿಂಗ ಶ್ರೀ’ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು ಪುರಸ್ಕಾರ, ಸ್ಮರಣಿಕೆ ಹಾಗೂ ಪ್ರಮಾಣಪತ್ರ ಒಳಗೊಂಡಿರುತ್ತದೆ.
ಪ್ರಶಸ್ತಿ ಪ್ರದಾನ ಅಕ್ಟೋಬರ್ 29ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿಯಲ್ಲಿ ಆಯೋಜಿಸಲಾಗಿದೆ. ಅಂದು ಕಡಣಿಯ ಬೆರಗು ಪ್ರಕಾಶನದ ಪುಸ್ತಕೋತ್ಸವವೂ ಏರ್ಪಡಿಸಲಾಗಿದ್ದು, ಪ್ರಕಾಶನದ 32 ಪುಸ್ತಕಗಳು ಬಿಡುಗಡೆಗೊಳ್ಳಲಿವೆ ಎಂದು ಕನ್ನಡ ಪುಸ್ತಕ ಪರಿಷತ್ತಿನ ಸಂಚಾಲಕ ಶಂಕರ ಬೈಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ