ಮೈಸೂರಿನಲ್ಲಿ ಪ್ರವಾಸೋದ್ಯಮ ಚೇತರಿಕೆ


Team Udayavani, Jun 9, 2023, 3:45 PM IST

ಮೈಸೂರಿನಲ್ಲಿ ಪ್ರವಾಸೋದ್ಯಮ ಚೇತರಿಕೆ

ಮೈಸೂರು: ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿರುವ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ ದೇಶ-ವಿದೇಶಗಳ ಪ್ರವಾಸಿಗರು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ವೀಕ್ಷಿಸಿದ್ದಾರೆ.

ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆ ಯಲ್ಲಿ ಭೇಟಿ ನೀಡಿರುವುದು ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಇಂಬು ನೀಡಿದೆ. ಪ್ರವಾಸೋದ್ಯಮ ಹಾಗೂ ಇದಕ್ಕೆ ಪೂರಕವಾದ ವ್ಯಾಪಾರ, ವಹಿವಾಟುಗಳಲ್ಲೂ ಚೇತರಿಕೆ ಕಂಡು ಬಂದಿದೆ. ಮೈಸೂರು ಅರಮನೆಗೆ ಕಳೆದ ವರ್ಷ 2022ರ ಏಪ್ರಿಲ್‌ನಲ್ಲಿ 2,02,779 ಮಂದಿ, ಮೇ ನಲ್ಲಿ 3,69,070 ಮಂದಿ ಭೇಟಿ ನೀಡಿದ್ದಾರೆ. ಈ ವರ್ಷ 2023ರ ಏಪ್ರಿಲ್‌ನಲ್ಲಿ 3,71,566 ಮಂದಿ, ಮೇ 5,49,452 ಮಂದಿ ಭೇಟಿ ನೀಡಿದ್ದಾರೆ. ಅಂದರೆ, ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಬಿಸಿಯಾಗಿದ್ದ ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿಯೇ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮೈಸೂರು ಅರಮನೆ ವೀಕ್ಷಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ 5,39,448 ಮಂದಿ ಪ್ರವಾಸಿಗರು ಅರಮನೆಗೆ ಭೇಟಿ ನೀಡಿದ್ದಾರೆ. ಇದು ಕಳೆದ ವರ್ಷ ಒಂದು ತಿಂಗಳಿನಲ್ಲಿ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡಿರುವ ದಾಖಲೆಯಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಅತಿ ಕಡಿಮೆ 1,95,921 ಮಂದಿ ಪ್ರವಾಸಿಗರು ಮೈಸೂರು ಅರಮನೆ ವೀಕ್ಷಿಸಿದ್ದಾರೆ.

ಮೃಗಾಲಯಕ್ಕೆ ಮೇ ತಿಂಗಳಿನಲ್ಲಿ 4.55 ಲಕ್ಷ ಮಂದಿ ಭೇಟಿ: ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೂ ಪ್ರವಾಸಿಗರ ಭೇಟಿಯಲ್ಲಿ ಹೆಚ್ಚಳ ಕಂಡು ಬಂದಿದೆ. ಕಳೆದ ವರ್ಷ 2022ರ ಏಪ್ರಿಲ್‌ನಲ್ಲಿ 3 ಲಕ್ಷ ಮಂದಿ, ಮೇ ತಿಂಗಳಿನಲ್ಲಿ 3.25 ಲಕ್ಷ ಮಂದಿ ಭೇಟಿ ನೀಡಿದ್ದಾರೆ. ಈ ವರ್ಷ 2023ರ ಏಪ್ರಿಲ್‌ನಲ್ಲಿ 3,45,000 ಮಂದಿ, ಮೇ 30 ರವರೆಗೆ 4,55,000 ಮಂದಿ ಭೇಟಿ ನೀಡಿರುವುದು ದಾಖಲಾಗಿದೆ. ಮೈಸೂರಿನ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಗಳಾದ ಕೃಷ್ಣರಾಜಸಾಗರ, ಶ್ರೀರಂಗಪಟ್ಟಣ, ನಂಜನಗೂಡು, ತಲಕಾಡು, ಸೋಮನಾಥಪುರಕ್ಕೂ ಹೆಚ್ಚಿನ ಸಂಖ್ಯೆ ಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ.

ಚುನಾವಣೆ ಮುಗಿದ ನಂತರ ಪ್ರವಾಸಿಗರ ಸಂಖ್ಯೆ ಏರಿಕೆ: ರಾಜ್ಯದಲ್ಲಿ ಈ ಬೇಸಿಗೆ ಸಮಯದಲ್ಲಿ ವಿಧಾ ನಸಭೆಗೆ ಚುನಾವಣೆ ನಡೆಯಿತು. ಆದರೂ, ಪ್ರವಾಸಿಗರು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ವೀಕ್ಷಿಸುವುದಕ್ಕೆ ಇದು ಯಾವುದೇ ರೀತಿಯಲ್ಲೂ ಅಡಚಣೆ ಆಗಲಿಲ್ಲ. ಏಕೆಂದರೆ, ಮೈಸೂರು ಹಾಗೂ ಸುತಮುತ್ತಲಿಗ ಪ್ರವಾಸಿ ತಾಣಗಳಿಗೆ ನೆರೆಯ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ರಾಜ್ಯದವರೂ ಹೆಚ್ಚಿನ ಸಂಖ್ಯೆ ಯಲ್ಲಿ ಪ್ರವಾಸಿ ತಾಣಗಳನ್ನು ವೀಕ್ಷಿಸುತ್ತಾರೆ. ಚುನಾವಣೆ ಸಮಯದಲ್ಲಿ ರಾಜ್ಯದ ಪ್ರವಾಸಿಗರ ಸಂಖ್ಯೆಯಲ್ಲಿ ಸ್ವಲ್ಪ ಕಡಿಮೆಯಾಗಿತ್ತು. ಆದರೆ, ಚುನಾವಣೆ ಮುಗಿದ ನಂತರ ರಾಜ್ಯದ ಪ್ರವಾಸಿಗರ ಸಂಖ್ಯೆಯಲ್ಲೂ ಏರಿಕೆ ಕಂಡು ಬಂತು ಎಂದು ಹೋಟೆಲ್‌ ಉದ್ಯಮಿಯೊಬ್ಬರು ವಿವರಿಸಿದರು.

ಪ್ರವಾಸೋದ್ಯಮ ಪ್ರಾಧಿಕಾರ ರಚಿಸಿ : ಈ ಮಧ್ಯೆ ಮೈಸೂರು ಹಾಗೂ ಸುತ್ತಮುತ್ತ ಪ್ರೇಕ್ಷ ಣೀಯ ಸ್ಥಳಗಳಿಗೆ ಪ್ರವಾಸಿಗರನ್ನು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು, ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಪ್ರವಾಸೋ ದ್ಯಮ ಪ್ರಾಧಿಕಾರ ರಚಿಸಬೇಕೆಂಬ ಒತ್ತಾಯ ಮೊದಲಿನಿಂದಲೂ ಇದೆ. ಈ ನಿಟ್ಟಿನಲ್ಲಿ ಸಂಘಸಂಸ್ಥೆಗಳು ರಾಜ್ಯ ಸರ್ಕಾರವನ್ನು ಈಗಾಗಲೇ ಒತ್ತಾಯಿಸಿವೆ.

ಮೈಸೂರಿಗೆ ಪ್ರವಾಸಿಗರು ಈ ಬೇಸಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂದರು. ವಿಧಾನಸಭೆ ಚುನಾವಣೆ ನಂತರ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂತು. ಈಗ ಸೀಸನ್‌ ಮುಗಿಯುತ್ತಿದೆ. ಸಿ.ನಾರಾಯಣಗೌಡ, ಅಧ್ಯಕ್ಷರು, ಮೈಸೂರು ಹೋಟೆಲ್‌ ಮಾಲೀಕರ ಸಂಘ

ಈ ವರ್ಷ ಕೊರೊನಾ ಆತಂಕ ಇರಲಿಲ್ಲ. ಹೀಗಾಗಿ, ಮೈಸೂರಿಗೆ ಕಳೆದ ವರ್ಷಕ್ಕಿಂತ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದರು. ರಾಜ್ಯದ ಪ್ರವಾಸಿಗರು ವಿಧಾನಸಭಾ ಚುನಾವಣೆ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಬಂದರು. ಟಿ.ಎಸ್‌.ಸುಬ್ರಹ್ಮಣ್ಯ, ಉಪ ನಿರ್ದೇಶಕರು, ಅರಮನೆ ಮಂಡಳಿ

ಈ ವರ್ಷದ ಬೇಸಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರು ಹಾಗೂ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಕೋವಿಡ್‌ ಆತಂಕ ಪೂರ್ಣವಾಗಿ ಹೋಗಿರಲಿಲ್ಲ. ಹೀಗಾಗಿ, ಆ ವರ್ಷ ಪ್ರವಾಸಿಗರು ಹೆಚ್ಚಿನ ಸಂಖ್ಯೆ ಯಲ್ಲಿ ಮೈಸೂರಿಗೆ ಭೇಟಿ ನೀಡಿರಲಿಲ್ಲ. ಆದರೆ, ಈ ವರ್ಷ ಕೋವಿಡ್‌ ಆತಂಕ ದೂರ ವಾಗಿತ್ತು. ಏಪ್ರಿಲ್‌, ಮೇ ತಿಂಗಳಿನಲ್ಲಿ ಪ್ರವಾಸೋದ್ಯಮ ಚುರುಕುಗೊಂಡಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪ್ರವಾಸಿಗರ ಸಂಖ್ಯೆಯಲ್ಲಿ ಸುಮಾರು ಶೇ.20ರಷ್ಟು ಹೆಚ್ಚಾಗಿತ್ತು. ಬಿ.ಎಸ್‌.ಪ್ರಶಾಂತ್‌, ಗೌರವ ಅಧ್ಯಕ್ಷರು, ಮೈಸೂರು ಟ್ರಾವೆಲ್ಸ್‌ ಅಸೋಸಿಯೇಷನ್‌ 

-ಕೂಡ್ಲಿ ಗುರುರಾಜ

ಟಾಪ್ ನ್ಯೂಸ್

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore; ಮಗಳನ್ನು ರಕ್ಷಿಸಲು ಹೋದ ತಂದೆ-ತಾಯಿಯೂ ನೀರುಪಾಲು; ಅಜ್ಜಿಯ ತಿಥಿಕಾರ್ಯದ ವೇಳೆ ಘಟನೆ

Mysore; ಮಗಳನ್ನು ರಕ್ಷಿಸಲು ಹೋದ ತಂದೆ-ತಾಯಿಯೂ ನೀರುಪಾಲು; ಅಜ್ಜಿಯ ತಿಥಿಕಾರ್ಯದ ವೇಳೆ ಘಟನೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysuru ರಾಜಕಾರಣ ಧರ್ಮ ಜತೆಯಾದರೆ ಉತ್ತಮ ಆಡಳಿತ: ಶ್ರೀಧರನ್‌ ಪಿಳ್ಳೆ

Mysuru ರಾಜಕಾರಣ ಧರ್ಮ ಜತೆಯಾದರೆ ಉತ್ತಮ ಆಡಳಿತ: ಶ್ರೀಧರನ್‌ ಪಿಳ್ಳೆ

1-dasdasdasdsad

Mysuru ;ನಾಳೆ ಎಲ್ಲಾ ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ

police crime

Hunsur: ಶುಕ್ರವಾರ ಬಹುತೇಕ ಬಂದ್; ಶಾಲಾ ಕಾಲೇಜುಗಳಿಗೆ ರಜೆ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.