ಸಾಕಾನೆಗೆ, ಆಹಾರ ತಿನಿಸಲು ಪ್ರವಾಸಿಗರಿಗೆ ಅವಕಾಶ ಬೇಡ

ಈ ಹಿಂದೆ ಇದೇ ಶಿಬಿರದಲ್ಲಿ ದುರ್ಗಾ ಪರಮೇಶ್ವರಿ ಎಂಬ ಹೆಣ್ಣಾನೆಯೂ ಇತ್ತು.

Team Udayavani, Sep 16, 2022, 5:54 PM IST

ಸಾಕಾನೆಗೆ, ಆಹಾರ ತಿನಿಸಲು ಪ್ರವಾಸಿಗರಿಗೆ ಅವಕಾಶ ಬೇಡ

ಯಳಂದೂರು: ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದ ಕೆ.ಗುಡಿ ವಲಯನ ಶಿಬಿರದಲ್ಲಿನ ಆನೆಗೆ ಪ್ರವಾಸಿಗರು ಆಹಾರ ನೀಡಿ, ಫೋಟೋ ಕ್ಲಿಕ್ಕಿಸಿಕೊಳ್ಳುವುದರಿಂದ ಪ್ರಾಣಿಗೆ ಕಿರಿಕಿರಿ ಆಗುವ ಜೊತೆಗೆ ರೊಚ್ಚಿಗೇಳುವ ಸಾಧ್ಯತೆ ಇದೆ. ಶಿಬಿರದಲ್ಲಿ ಗಜೇಂದ್ರ ಎಂಬ 67 ಪ್ರಾಯದ ಗಂಡಾನೆ ಇದ್ದು, ಹಲವು ವರ್ಷಗಳಿಂದ ಸಾಕಲಾಗುತ್ತಿದೆ. ದಸರಾದಲ್ಲೂ ಭಾಗವಹಿಸಿದೆ.

ಇದನ್ನು ನೋಡಿಕೊಳ್ಳುವ ಮಾವುತರು ಇದಕ್ಕೆ ನಿತ್ಯ ಆಹಾರ ನೀಡುತ್ತಾರೆ. ಇಲ್ಲಿಗೆ ಬರುವ ಪ್ರವಾಸಿಗರ ಕೈಯಲ್ಲಿ ಆಹಾರ ನೀಡಿ ಆನೆಗೆ ತಿನ್ನಿಸಲು ಅವಕಾಶ ನೀಡುತ್ತಾರೆ. ಆದರೆ, ಇದು ಮಾವುತರಿಗೆ ಮಾತ್ರ ಒಗ್ಗಿದ್ದು, ಬೇರೆಯವರು ಇದಕ್ಕೆ ಆಹಾರ ನೀಡಿದರೆ ಆಕ್ರೋಶಗೊಳ್ಳುವ ಸಾಧ್ಯತೆ ಇರುತ್ತದೆ. ಇದು ಮುಂದೆ ದೊಡ್ಡ ಅಪಾಯ ತಂದೊಡ್ಡುವ ಸಾಧ್ಯತೆ ಇರುತ್ತದೆ.

ಹಿಂದೆಯೇ ನಡೆದಿದ್ದ ಅವಘಡಗಳು: 2015ರಲ್ಲಿ ಇದೇ ಗಜೇಂದ್ರ ಆನೆ ಮದವೇರಿ ಇಲ್ಲಿ ದಾಂಧಲೆ ನಡೆಸಿದ್ದಲ್ಲದೆ, ಮತ್ತೂಂದು ಆನೆ ಕೊಂದು ಹಾಕಿತ್ತು. ಅಲ್ಲದೆ, 2017 ರಲ್ಲೂ ಇದು ತನ್ನ ಕಾಲಿಗೆ ಹಾಕಿದ್ದ ಸರಪಳಿ ಕಿತ್ತೂಗೆಯಲು ಹೋಗಿ ಗಾಯ ಮಾಡಿಕೊಂಡಿದ್ದ ಕೋಪಿಷ್ಠ ಸ್ವಭಾವದ್ದಾಗಿದೆ. ಈ ಹಿಂದೆ ಇದೇ ಶಿಬಿರದಲ್ಲಿ ದುರ್ಗಾ ಪರಮೇಶ್ವರಿ ಎಂಬ ಹೆಣ್ಣಾನೆಯೂ ಇತ್ತು. ಇದನ್ನು ಎಚ್‌. ಡಿ ಕೋಟೆ ತಾಲೂಕಿನಲ್ಲಿರುವ ಸಾಕಾನೆ ಶಿಬಿರಕ್ಕೆ ಸಾಗಿಸಲಾಗಿದೆ. ಇದೊಂದು ಆನೆ ಮಾತ್ರ ಇಲ್ಲಿದೆ.

ಯಾವ ಸಂದರ್ಭದಲ್ಲಾದರೂ ಇದು ಮದವೇರಿ ಕೆರಳುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಇಲ್ಲಿನ ಸಿಬ್ಬಂದಿ ಆನೆಗೆ ನೀಡುವ ಆಹಾರದ ಉಂಡೆಗಳನ್ನು ಪ್ರವಾಸಿಗರ ಕೈಗೆ ನೀಡಿ ತಿನ್ನಿಸಲು ಹೇಳುತ್ತಾರೆ. ಈ ವೇಳೆ ಅನಾಹುತ ಸಂಭವಿಸುವ ಸಾಧ್ಯತೆ ಇರುತ್ತದೆ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂಬುದು ರಘು ಸೇರಿ ಅನೇಕ ಪ್ರವಾಸಿಗರು, ಪ್ರಾಣಿಪ್ರಿಯರ ಆಗ್ರಹವಾಗಿದೆ. ಕೆ.ಗುಡಿ ವಲಯ ಆರ್‌ಎಫ್ಒ ವಿನೋದ್‌ಗೌಡ ಮಾತನಾಡಿ, ಇಲ್ಲಿನ ಸಾಕಾನೆ ಗಜೇಂದ್ರನಿಗೆ ಪ್ರವಾಸಿಗರು ಆಹಾರ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಈ ಬಗ್ಗೆ ವಿಚಾರಿಸಿ, ಕ್ರಮ ವಹಿಸ ಲಾಗುವುದು ಎಂದು ವಿವರಿಸಿದರು.

● ಫೈರೋಜ್‌ ಖಾನ್‌

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.