ಸಿದ್ದರಾಮಯ್ಯ ಭರ್ಜರಿ ರೋಡ್‌ ಶೋನಿಂದ ಸಂಚಾರ ಅಸ್ತವ್ಯಸ್ತ


Team Udayavani, Oct 20, 2019, 3:00 AM IST

sidda-bharj

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ತವರು ಮೈಸೂರು ನಗರಕ್ಕೆ ಆಗಮಿಸಿ ಸಿದ್ದರಾಮಯ್ಯ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ತೆರೆದ ವಾಹನದಲ್ಲಿ ಅವರನ್ನು ಮೆರವಣಿಗೆಯಲ್ಲಿ ಕಾಂಗ್ರೆಸ್‌ ಕಚೇರಿ ಆವರಣಕ್ಕೆ ಅವರನ್ನು ಕರೆ ತಂದ ಪರಿಣಾಮ ಸಾರ್ವಜನಿಕರು, ವಾಹನ ಸವಾರರು ಪರದಾಡಬೇಕಾಯಿತು.

ತುರ್ತು ಕೆಲಸದ ನಿಮಿತ್ತ ಬಸ್‌, ರೈಲು ಮೂಲಕ ತೆರಳಬೇಕಿದ್ದ ಸಾರ್ವಜನಿಕರು, ಆಸ್ಪತ್ರೆಗೆ ತೆರಳಬೇಕಿದ್ದ ರೋಗಿಗಳು ಬರೋಬ್ಬರಿ ಎರಡು ಗಂಟೆಗಳ ಉಂಟಾದ ಸಂಚಾರ ದಟ್ಟಣೆಯಿಂದ ಪರಿತಪಿಸಿದರು. ಕೆ.ಆರ್‌.ಆಸ್ಪತ್ರೆ ಎದುರೇ ಮೆರವಣಿಗೆ ಸಾಗಿದ್ದರಿಂದ ಆ್ಯಂಬುಲೆನ್ಸ್‌ಗಳು ಸಹ ಮೆರವಣಿಗೆಯಲ್ಲಿದ್ದ ವಾಹನಗಳಿಂದ ಮುಂದೆ ಸಾಗಲು ಸಾಧ್ಯವಾಗದೇ ಕೆಲವೆಡೆ ನಿಲ್ಲುವಂತಾಯಿತು.

ಕೆಲವೆಡೆ ಪೊಲೀಸರು ಆ್ಯಂಬುಲೆನ್ಸ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟರೂ ಮಿತಿ ಮೀರಿದ ವಾಹನಗಳಿಂದ ಆ್ಯಂಬುಲೆನ್ಸ್‌ಗಳು 5ರಿಂದ 10 ನಿಮಿಷಗಳ ಕಾಲ ರಸ್ತೆಯಲ್ಲೇ ನಿಲ್ಲುವಂತಾಗಿದ್ದರಿಂದ ರೋಗಿಗಳು ಪರದಾಡಿದರು. ನಗರದ ಹೃದಯ ಭಾಗವಾಗಿರುವ ಸಯ್ನಾಜಿ ರಾವ್‌ ರಸ್ತೆ ಮತ್ತು ಇರ್ವೀನ್‌ ರಸ್ತೆಯಲ್ಲಿ ಮೆರವಣಿಗೆ ಸಾಗಿದ್ದರಿಂದ ಸುಮಾರು 2 ಗಂಟೆಗಳ ಕಾಲ ಈ ಭಾಗದ ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.

ಹಳೇ ಆರ್‌ಎಂಸಿ ವೃತ್ತದಿಂದ ಅಭಿನಂದನಾ ಸಮಾರಂಭ ಏರ್ಪಡಿಸಿದ್ದ ರೈಲು ನಿಲ್ದಾಣ ಸಮೀಪದ ಕಾಂಗ್ರೆಸ್‌ ಕಚೇರಿ ಆವರಣಕ್ಕೆ ಮೆರವಣಿಗೆಯಲ್ಲಿ ಕರೆತರಲಾಯಿತು. ಬೆಳಗ್ಗೆ 11.30ಕ್ಕೆ ಸ್ವಾಗತ ಕಾರ್ಯಕ್ರಮ ನಿಗದಿಯಾಗಿದ್ದರೂ ಪೊಲೀಸರು ಮುಂಚಿತವಾಗಿಯೇ ಈ ಮಾರ್ಗದ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತಡೆಯೊಡ್ಡಿದ್ದರು. ಇದರಿಂದ ದಾಸಪ್ಪ ವೃತ್ತ, ರೈಲ್ವೆ ನಿಲ್ದಾಣ, ಆಯುರ್ವೇದಿಕ್‌ ವೃತ್ತ, ಆರ್‌ಎಂಸಿ ವೃತ್ತ ಮತ್ತು ನೆಹರು ವೃತ್ತಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರ ಪರದಾಡುವಂತಾಯಿತು.

ರೈಲ್ವೆ ನಿಲ್ದಾಣದ ಬಳಿಯ ಪ್ರಿಪೆಯ್ಡ ಆಟೋ ನಿಲ್ದಾಣವನ್ನು ಕೂಡ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಥಳಾಂತರಿಸಲಾಗಿತ್ತು. ಆರ್‌ಎಂಸಿ ವೃತ್ತದ ಬಳಿ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು, ಮೆರವಣಿಗೆ ಯುದ್ದಕ್ಕೂ ಪಟಾಕಿ ಸಿಡಿಸುವಲ್ಲಿ ನಿರತರಾಗಿದ್ದರು.

ಆರ್‌ಎಂಸಿ ವೃತ್ತದಿಂದ ಸಯ್ನಾಜಿ ರಾವ್‌ ರಸ್ತೆ ಮೂಲಕ ಮೆರವಣಿಗೆ ಹೊರಟಾಗ ಹೆಜ್ಜೆ ಹೆಜ್ಜೆಗೂ ಪಟಾಕಿ ಸಿಡಿಸಿದ್ದರಿಂದ ಕೆ.ಆರ್‌.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆಗಳ ಬಳಿ ವಾಯುಮಾಲಿನ್ಯದಿಂದ ವಯೋವೃದ್ಧರು, ರೋಗಿಗಳು, ಗರ್ಭಿಣಿ, ಬಾಣಂತಿಯರು ತೊಂದರೆ ಅನುಭವಿಸಬೇಕಾಯಿತು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.