ಅಡ್ಡಾದಿಡ್ಡಿ ವಾಹನ ನಿಲುಗಡೆಗೆ ಟ್ರಾಫಿಕ್‌ ಜಾಮ್‌

ಪೊಲೀಸರ ನಿರ್ಲಕ್ಷ್ಯದಿಂದ ಸಂಚಾರ ದಟ್ಟಣೆ • ವಾಹನ ಸವಾರರು, ಪಾದಚಾರಿಗಳ ಪರದಾಟ • ಸಾರ್ವಜನಿಕರ ಆಕ್ರೋಶ

Team Udayavani, Jul 12, 2019, 12:13 PM IST

mysuru-tdy-1..

ಕೆ.ಆರ್‌.ನಗರದಲ್ಲಿ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಪರದಾಡುತ್ತಿರುವುದು.

ಕೆ.ಆರ್‌.ನಗರ: ಪೊಲೀಸರ ನಿರ್ಲಕ್ಷ್ಯದಿಂದ ಪಟ್ಟಣದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನಗಳು ಮತ್ತು ಸಾರ್ವಜನಿಕರು ಓಡಾಡಲು ಹರಸಾಹಸ ಪಡುವಂತಾಗಿದೆ. ನಗರದ ವಾಣಿ ವಿಲಾಸ ರಸ್ತೆ, ಚಂದ್ರಮೌಳೇಶ್ವರ ರಸ್ತೆ, ಬಜಾರ್‌ ರಸ್ತೆ ಹಾಗೂ 7ನೇ ರಸ್ತೆಗಳಲ್ಲಿ ಬೈಕ್‌ ಮಾಲೀಕರು ರಸ್ತೆಯ ಎರಡೂ ಬದಿಗಳಲ್ಲಿ ನಿಲುಗಡೆ ಮಾಡುತ್ತಿದ್ದು, ಇದರಿಂದ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದೆ.

ರಸ್ತೆ 2 ಬದಿಯೂ ನಿಲುಗಡೆ: ಚಂದ್ರಮೌಳೇಶ್ವರ ರಸ್ತೆಯಲ್ಲಿರುವ ನವನಗರ ಅರ್ಬನ್‌ ಬ್ಯಾಂಕ್‌ ಮತ್ತು ಹೋಟೆಲ್ಗಳಿಗೆ ಬರುವಂತಹ ಗ್ರಾಹಕರು ರಸ್ತೆಯ ಎರಡೂ ಬದಿಗಳಲ್ಲಿ ತಮ್ಮ ವಾಹನಗಳನ್ನು ಪಾರ್ಕಿಂಗ್‌ ಮಾಡುತ್ತಿದ್ದಾರೆ. ಇದರ ಜೊತೆಗೆ ಮೈಸೂರಿಗೆ ತೆರಳುವಂತಹ ಕೆಲವು ನೌಕರರು ತಮ್ಮ ಬೈಕ್‌ಗಳನ್ನು ಇದೇ ರಸ್ತೆಯಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೂ ಪಾರ್ಕಿಂಗ್‌ ಮಾಡುತ್ತಿದ್ದು, ಇದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.

ರಸ್ತೆಯಲ್ಲೇ ಮರಳು, ಜಲ್ಲಿ: ಅಲ್ಲದೇ ಪುರಸಭೆ ಮಾಜಿ ಸದಸ್ಯ ಎನ್‌.ಶಿವಕುಮಾರ್‌ ಸೇರಿದಂತೆ ಹಲವು ಮಂದಿ ತಮ್ಮ ಕಟ್ಟಡದ ನಿರ್ಮಾಣ ಮತ್ತು ದುರಸ್ತಿಗಾಗಿ ರಸ್ತೆಯಲ್ಲಿಯೇ ಹಲವು ದಿನಗಳಿಂದ ಮರಳು ಮತ್ತು ಜಲ್ಲಿಯನ್ನು ಸುರಿದು ರಾಶಿ ಹಾಕಿರುವುದರಿಂದ ಸಾರ್ವಜನಿಕರು ಮತ್ತು ವಾಹನಗಳ ಓಡಾಡಲು ಹರಸಾಹಸ ಪಡಬೇಕಾಗಿದೆ.

ಪಾರ್ಕಿಂಗ್‌ ಇಲ್ಲ: 7ನೇ ರಸ್ತೆಯಲ್ಲಿ ಕರ್ನಾಟಕ ಬ್ಯಾಂಕ್‌, ಎರಡು ಕಲ್ಯಾಣ ಮಂಟಪಗಳು, ಆಸ್ಪತ್ರೆ ಸೇರಿದಂತೆ ಟೀ ಹೋಟೆಲ್ಗಳು ಇರುವುದರಿಂದ ಸಾರ್ವಜನಿಕರ ದಟ್ಟಣೆ ಹೆಚ್ಚಾಗಿದೆ. ವಾಹನಗಳನ್ನು ಎಲ್ಲೆಂದರಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಜೊತೆಗೆ ಕಲ್ಯಾಣ ಮಂಟಪಗಳ ಮಾಲೀಕರು ವಾಹನಗಳ ನಿಲುಗಡೆಗೆ ಪಾರ್ಕಿಂಗ್‌ ವ್ಯವಸ್ಥೆ ಮಾಡದೇ ಇರುವುದರಿಂದ ಟ್ರಾಫಿಕ್‌ ಸಮಸ್ಯೆ ಉಂಟಾಗಿದ್ದು, ಪೊಲೀಸರು ಇತ್ತ ಗಮನಹರಿಸುತ್ತಿಲ್ಲ ಎಂಬುದು ಸಾರ್ವಜನಿಕರು ದೂರುತ್ತಿದ್ದಾರೆ.

ತಳ್ಳುವ ಗಾಡಿಗಳು: ಬಜಾರ್‌ ರಸ್ತೆಯ ಎರಡೂ ಬದಿಗಳಲ್ಲಿ ವಾಣಿಜ್ಯ ಮಳಿಗೆಗಳಿದ್ದು, ರಸ್ತೆ ಬದಿಯಲ್ಲಿ ತರಕಾರಿ ಅಂಗಡಿಗಳು ಮತ್ತು ಹಣ್ಣು ಮತ್ತಿತರ ಸರಕು ಸಾಮಗ್ರಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ತಳ್ಳುವ ಗಾಡಿಗಳನ್ನು ನಿಲ್ಲಿಸುವುದರಿಂದ ರಸ್ತೆಯು 40 ಅಡಿಗೂ ಹೆಚ್ಚು ಅಗಲವಾಗಿದ್ದರೂ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದೆ. ಹಬ್ಬ ಹರಿದಿನಗಳಲ್ಲಂತೂ ಸಾರ್ವಜನಿಕರು ಮತ್ತು ವಾಹನಗಳು ಓಡಾಡಲು ಸಾಧ್ಯವೇ ಇಲ್ಲ. ಈ ಮೊದಲು ಇದ್ದಂತಹ ಪೊಲೀಸರು ಸುಗಮ ಸಂಚಾರಕ್ಕಾಗಿ ಹಲವು ಕಾನೂನನ್ನು ಜಾರಿಗೆ ತಂದಿದ್ದರು. ಇಂದು ಅವುಗಳು ಸರಿಯಾದ ರೀತಿಯಲ್ಲಿ ಪಾಲನೆಯಾಗುತ್ತಿಲ್ಲ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ. ಡಿ.ಚೆನ್ನಣ್ಣನವರ್‌ ಅವಧಿಯಲ್ಲಿ ಸುಗಮ ಸಂಚಾರಕ್ಕೆ ಹಲವು ರೀತಿಯ ನಿಯಮಗಳನ್ನು ರೂಪಿಸುವುದರ ಜತೆಗೆ ಪಟ್ಟಣದಲ್ಲಿ 2 ಪೊಲೀಸ್‌ ಚೌಕಿ ನಿರ್ಮಿಸ ಲಾಗಿತ್ತು. ಆದರೆ ಸರಿಯಾಗಿ ಪಾಲನೆಯಾಗು ತ್ತಿಲ್ಲ. ಸಿಸಿ ಕ್ಯಾಮರಾ ಅಳವಡಿಸುವುದರ ಜತೆಗೆ ಹೈವೇ ಪೆಟ್ರೋಲ್ ವಾಹನವನ್ನು ಪೊಲೀಸ್‌ ಇಲಾಖೆಗೆ ನೀಡಿ ಟ್ರಾಫಿಕ್‌ ಸಮಸ್ಯೆ ಇಲ್ಲದಂತೆ ಮಾಡುತ್ತೇವೆ ಎಂದು ನೀಡಿದ ಭರವಸೆ ಹಾಗೆಯೇ ಉಳಿದಿದೆ.

ಕ್ರಮ ಕೈಗೊಳ್ಳಿ: ಪೊಲೀಸ್‌ ಇಲಾಖೆಯವರು ಬಸ್‌ ನಿಲ್ದಾಣ, ಗರುಡಗಂಭದ ವೃತ್ತ, ಪುರಸಭೆ ವೃತ್ತ ಮತ್ತು ಪೊಲೀಸ್‌ ಠಾಣೆಯ ಎದುರು ವಾಹನಗಳನ್ನು ಅಡ್ಡ ಹಾಕಿ ದೂರು ದಾಖಲು ಮಾಡುವುದರ ಜತೆಗೆ ಮರಳು ಸಾಗಣೆದಾರರನ್ನು ಹಿಡಿದು ದೂರು ದಾಖಲಿಸುವುದರಲ್ಲಿ ನಿರತರಾಗಿದ್ದು, ಟ್ರಾಫಿಕ್‌ ಸಮಸ್ಯೆ ಬಗೆಹರಿಸಲು ಗಮನಹರಿಸುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಟ್ಟುನಿಟ್ಟನ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ವಾಹನ ಸವಾರರು ಹಾಗೂ ಪಾದಚಾರಿಗಳು ಆಗ್ರಹಿಸಿದ್ದಾರೆ.

ಪೊಲೀಸ್‌ ವಸತಿ ಗೃಹ ಬಳಿ ಮರಳು ಶೇಖರಣೆ:

ಅಕ್ರಮವಾಗಿ ಮರಳು ಸಾಗಣೆ ಮಾಡಿದವರಿಂದ ವಶಪಡಿಸಿಕೊಂಡ ಮರಳನ್ನು ನಿಯಮಾನುಸಾರ ಸರ್ಕಾರ ಲೋಕೋಪಯೋಗಿ ಇಲಾಖೆಯ ವತಿಯಿಂದ ತೆರೆದಿರುವ ಯಾರ್ಡ್‌ಗೆ ಹಸ್ತಾಂತರಿಸಬೇಕು. ಆದರೆ, ಈ ಮರಳನ್ನು ಪೊಲೀಸ್‌ ವಸತಿ ಗೃಹದಲ್ಲಿ ಸಂಗ್ರಹಣೆ ಮಾಡಿರುವುದು ಹಲವು ರೀತಿಯ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಪೊಲೀಸ್‌ ಇಲಾಖೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ನಾಗರಿಕರ ಆಗ್ರಹವಾಗಿದೆ.
● ಗೇರದಡ ನಾಗಣ್ಣ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.