ಸಂಚಾರ ನಿರ್ವಹಣೆಗೆ ಕ್ರಮ ಗೊಳ್ಳಬೇಕು


Team Udayavani, Jul 18, 2017, 12:26 PM IST

mys5.jpg

ತಿ.ನರಸೀಪುರ: ಪಟ್ಟಣದಲ್ಲಿ ಸಂಚಾರ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಸಾರ್ವಜನಿಕ ಒತ್ತಾಯ ನಿರಂತರವಾಗಿ ಕೇಳಿ ಬರುತ್ತಿದೆ. ಪ್ರಮುಖವಾಗಿ ಪಟ್ಟಣದ ಕಾಲೇಜು ರಸ್ತೆ, ಲಿಂಕ್‌ ರಸ್ತೆ ಹಾಗೂ ಖಾಸಗಿ ಬಸ್‌ ನಿಲ್ದಾಣ ವೃತ್ತದಲ್ಲಿ ಸಂಚಾರ ಸಮಸ್ಯೆ ಬಿಗಡಾಯಿಸಿದೆ.

ಜೋಡಿ ರಸ್ತೆಯಲ್ಲಿ ಬ್ಯಾಂಕ್‌ಗಳು, ವ್ಯಾಪಾರ ವಹಿವಾಟು ಅಂಗಡಿ ಮುಂಗಟ್ಟುಗಳಿದ್ದು, ಪ್ರತಿನಿತ್ಯ ಬೈಕ್‌ ಸವಾರರು ಜೋಡಿ ರಸ್ತೆಯ ಎರಡು ಬದಿಗಳಲ್ಲಿ ವಾಹನಗಳನ್ನು ನಿಲ್ಲಿಸುವುದು ಅನಿವಾರ್ಯವಾಗಿದೆ. ಬೈಕ್‌ಗಳು ನಿಂತರೆ ಕಿರಿದಾದ ರಸ್ತೆಯಲ್ಲಿ ವಾಹನಗಳ ಸಂಚಾರ ದುಸ್ತರವಾಗುತ್ತಿದೆ. ಬೆಳಗ್ಗೆ ಹಾಗೂ ಸಂಜೆ ಕಾಲೇಜಿಗೆ ಹೋಗುವ ಹಾಗೂ ಬಿಡುವ ಸಮಯದಲ್ಲಿ ವಿದ್ಯಾರ್ಥಿಗಳು ಓಡಾಡಲು ಕಷ್ಟವಾಗುತ್ತದೆ. ಪಾರ್ಕಿಂಗ್‌ ಸಮಸ್ಯೆಯಿಂದಾಗಿ ಸುಗಮ ಸಂಚಾರ ಬಹಳ ಕಷ್ಟ.

ಮತ್ತೂಂದೆಡೆ ಗ್ರಾಮೀಣ ಪ್ರದೇಶಗಳಿಗೆ ತೆರಳುವ ಆಟೋಗಳು ಕೆಲವೊಮ್ಮೆ ರಸ್ತೆಯಲ್ಲಿ ನಿಂತು ಪ್ರಯಾಣಿಕರನ್ನು ಹತ್ತಿಸಿಕೊಳ್ಳಬೇಕಿರುವುದರಿಂದ ಹಾಗೂ ಅಲ್ಲಿಯೂ ಕೂಡ ಎರಡು ಬದಿಗಳಲ್ಲಿ ಬೈಕ್‌ಗಳ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ ಕಾಡುತ್ತಿದೆ. ಖಾಸಗಿ ಬಸ್‌ ನಿಲ್ದಾಣದ ವೃತ್ತವು ನಾಲ್ಕು ದಿಕ್ಕುಗಳು ಹಾಗೂ ಬಸ್‌ ನಿಲ್ದಾಣದಿಂದ ವಾಹನಗಳು ಹೊರ ಬರಲು ದಾರಿ ಇರುವುದರಿಂದ ಐದು ರಸ್ತೆಗಳಿಂದ ಸಂಪರ್ಕ ಕಲ್ಪಿಸುತ್ತಿದೆ.

ಇಲ್ಲಿ ಯಾವುದೇ ಸಿಗ್ನಲ್‌ ಸೌಲಭ್ಯವಿಲ್ಲದಿರುವುದರಿಂದ ವಾಹನಗಳು ಅಡ್ಡಾದಿಡ್ಡಿ ಚಲಿಸುತ್ತಿವೆ. ಬೆಳಗ್ಗೆ ಶಾಲಾ ಕಾಲೇಜಿಗೆ  ಮಕ್ಕಳನ್ನು ಕೂರಿಸಿಕೊಂಡು ಹೋಗುವ ಆಟೋಗಳು, ಬೈಕ್‌ ಸವಾರರು ಅನೇಕ ವೇಳೆ ವಾಹನಗಳ ಅಡ್ಡಾದಿಡ್ಡಿ ಚಾಲನೆಯಿಂದ ತೊಂದರೆ ಅನುಭವಿಸಿದ್ದಾರೆ. ಬಸ್‌ ನಿಲ್ದಾಣದಿಂದ ಸಾರ್ವಜನಿಕ ಆಸ್ಪತ್ರೆಗೆ ಹೋಗುವ ರಸ್ತೆಯಲ್ಲೂ ಕೂಡ ಆಟೋಗಳು, ರಸ್ತೆ ಬದಿ ಗಾಡಿಗಳು ನಿಲ್ಲುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತದೆ.

ಬೆಳೆಯುತ್ತಿರುವ ಜನಸಂಖ್ಯೆ ಹಾಗೂ ವಾಹನಗಳ ದಟ್ಟಣೆಗೆ ಅನುಗುಣವಾಗಿ ಸೂಕ್ತ ಸಂಚಾರ ವ್ಯವಸ್ಥೆ ವಿಶೇಷವಾಗಿ ಪಾರ್ಕಿಂಗ್‌ ಸಮಸ್ಯೆಗೆ ಪರಿಹಾರ ದೊರಕಿಸಬೇಕಿದೆ. ಖಾಸಗಿ ಬಸ್‌ ನಿಲ್ದಾಣ ವೃತ್ತದಲ್ಲಿ ಸಂಚಾರ ಸಿಗ್ನಲ್‌ ಅಳವಡಿಸಿದರೆ ಸ್ವಲ್ಪ ಅಡ್ಡಾದಿಡ್ಡಿ ಚಲನೆಗೆ ಬ್ರೇಕ್‌ ಹಾಕಬಹುದಾಗಿದೆ. ಗ್ರಾಮೀಣ ಪ್ರದೇಶಕ್ಕೆ ತೆರಳುವ ಆಟೋಗಳಿಗೆ ವ್ಯವಸ್ಥಿತ ನಿಲ್ದಾಣ ಹಾಕಬೇಕಿದೆ.

ವಾಹನ ಸಂಚಾರ ಸಮಸ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಲಿಂಕ್‌ ರಸ್ತೆಯ ರಸ್ತೆ ಬದಿ ವ್ಯಾಪಾರಿಗಳು ಸ್ಥಳಾಂತರಿಸಲಾಗಿತ್ತು. ಆಟೋಗಳ ಅಡ್ಡಾದಿಡ್ಡಿ ನಿಲ್ಲುವಿಕೆ ತಡೆಗಟ್ಟಲು ಖಾಸಗಿ ಬಸ್‌ ನಿಲ್ದಾಣ ವೃತ್ತ ಹಾಗೂ ಲಿಂಕ್‌ ರಸ್ತೆಯಲ್ಲಿ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿ ಹಾಗೂ ಓರ್ವ ಪೊಲೀಸರನ್ನು ನಿಯೋಜಿಸಲಾಗಿದೆ. ಸಂಜೆ ವೇಳೆ ಕಾಲೇಜು ಬಿಡುವ ವೇಳೆ ವೃತ್ತದಲ್ಲಿ ಪೊಲೀಸ್‌ ನಿಯೋಜನೆ ಹಾಗೂ ಪಟ್ಟಣದಲ್ಲಿ ಕಾಲೇಜುಗಳ ಪೊಲೀಸ್‌ ವಾಹನ ಸಂಚಾರ ನಡೆಸುವುದರ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡುವ ಪ್ರಯತ್ನ ಮಾಡಿದ್ದೇವೆ.
-ಎನ್‌. ಆನಂದ್‌, ಪಿಎಸೈ 

ಖಾಸಗಿ ಬಸ್‌ ನಿಲ್ದಾಣದ ಬಳಿ ಕಡ್ಡಾಯವಾಗಿ ಸಿಗ್ನಲ್‌ ಅಳವಡಿಸಬೇಕು. ಶಾಲೆಗೆ ಹೋಗುವ ಮಕ್ಕಳನ್ನು ಕೂರಿಸಿಕೊಂಡು ಹಾಗೂ ಆಸ್ಪತ್ರೆಗೆ ಹೋಗುವ ರೋಗಿಗಳಿಗೆ ಅನುಕೂಲ ಕಲ್ಪಿಸಲು ವೃತ್ತದಲ್ಲಿ ಸಿಗ್ನಲ್‌ ಅಳವಡಿಸಿಬೇಕು. ರಸ್ತೆ ಬದಿ ನಿಲ್ಲುವ ವಾಹನಗಳಿಗೆ ಹಾಗೂ ವ್ಯಾಪಾರಿಗಳಿಗೆ ಸೂಕ್ತ ನಿದೇರ್ಶನ ನೀಡಬೇಕು.
-ರಮೇಶ್‌ ಆರ್‌. ಗೌಡ,  ತಿ.ನರಸೀಪುರ ನಿವಾಸಿ

* ಎಸ್‌.ಬಿ.ಪ್ರಕಾಶ್‌

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.