ಯದ್ವಾತದ್ವ ವಾಹನ ಓಡಿಸಿದರೆ ದಂಡ ಪ್ರಯೋಗ


Team Udayavani, Mar 22, 2021, 1:34 PM IST

ಯದ್ವಾತದ್ವ ವಾಹನ ಓಡಿಸಿದರೆ ದಂಡ ಪ್ರಯೋಗ

ಮೈಸೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರ ಪೊಲೀಸರು ಮೈಸೂರು ನಗರದಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆಯಿಂದ ಅಪಘಾತಪ್ರಕರಣಗಳು ಏರಿಕೆಯಾಗುತ್ತಿದ್ದು, ಇದರಿಂದ ಸಾವು-ನೋವು ಸಹ ಹೆಚ್ಚಾಗಿವೆ. ಜೊತೆಗೆ ಹದಿಹರೆಯದಯುವಕರಿಂದ ಹಿಡಿದು ಮಧ್ಯವಯಸ್ಕರವರೆಗೂ ವಾಹನ ಚಲಾಯಿಸುವಾಗ ಮೊಬೈಲ್‌ ಬಳಕೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರ ಪೊಲೀಸರು ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಕಾರ್ಯಾ ಚರಣೆಯನ್ನು ತೀವ್ರಗೊಳಿಸಿ, ನಿಯಮ ಉಲ್ಲಂಘಿಸುವ ವಾಹನ ಸವಾರರು ಮತ್ತು ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ.

ಒಂದೇ ದಿನ 45 ಡಿಎಲ್‌ ಅಮಾನತು: ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಸುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬಂದ ಹಿನ್ನೆಲೆ ಕಾರ್ಯಾಚರಣೆಗಿಳಿದ ಸಂಚಾರ ಪೊಲೀಸರು ಒಂದೇ ದಿನ 45 ಜನ ಡಿಎಲ್‌ ಅಮಾನತು ಮಾಡಿದ್ದು, ಒಟ್ಟು ಮೂರು ದಿನಗಳ ಅವಧಿಯಲ್ಲಿ 61 ಮಂದಿಯ ಚಾಲನ ಪರವಾನಗಿಯನ್ನು ಅಮಾನತು ಮಾಡಿ, ದಂಡ ವಿಧಿಸಿದ್ದಾರೆ.

ಮೊಬೈಲ್‌ನಲ್ಲಿ ಮಾತನಾಡಿಕೊಂಡು ವಾಹನ ಚಲಾಯಿಸಿದರೆ ಅಪಘಾತಗಳಾಗುತ್ತವೆ. ಈ ತಪ್ಪುಪುನಾವರ್ತನೆ ಆಗುತ್ತಲೇ ಇದೆ. ಹಾಗಾಗಿ ಡಿಲ್‌ ಅಮಾನತುಗೊಳಿಸಿ ಆರ್‌ಟಿಒ ಕಚೇರಿಗೆಕಳುಹಿಸಲಾಗುತ್ತಿದೆ. ಬೆಳಗ್ಗೆ ಮತ್ತು ಸಂಜೆ ಮುಖ್ಯ ರಸ್ತೆ, ಜಂಕ್ಷನ್‌, ಸರ್ಕಲ್‌ಗ‌ಳಲ್ಲಿ ಒಬ್ಬ ಎಎಸ್‌ಐ ಹಾಗೂ ಮೂವರು ಸಂಚಾರ ಪೊಲೀಸರು ಯಾರೆಲ್ಲಾ ನಿಯಮ ಉಲ್ಲಂಘನೆ ಮಾಡುತ್ತಾರೆ ಅವರ ವಿರುದ್ಧ ಸುಪ್ರೀಂ ಕೋರ್ಟ್‌ ಆದೇಶದಂತೆ ಪ್ರಕರಣ ದಾಖಲು ಮಾಡಿಕೊಂಡು ಡಿಎಲ್‌ ಅಮಾನತು ಮಾಡುತ್ತಿದ್ದಾರೆ ಎಂದು ಸಂಚಾರ ವಿಭಾಗದ ಎಸಿಪಿ ಸಂದೇಶ್‌ ಕುಮಾರ್‌ ತಿಳಿಸಿದ್ದಾರೆ.

ಕಳೆದ ಡಿಸೆಂಬರ್‌ನಿಂದ ಫೆಬ್ರವರಿವರೆಗೂ ನಗರದಲ್ಲಿ ಸಾಕಷ್ಟು ಸಂಚಾರ ನಿಯಮ ಉಲ್ಲಂಘನೆಪ್ರಕರಣ ಹೆಚ್ಚಾಗಿದ್ದು, ಅದರಲ್ಲೂ ಓವರ್‌ ಸ್ಪೀಡ್‌ಒಂದರಲ್ಲೇ 3,429 ಪ್ರಕರಣ ದಾಖಲಾಗಿದೆ. ಇನ್ನುನೋ ಎಂಟ್ರಿಯಲ್ಲಿ ವಾಹನ ಚಲಾಯಿಸಿದ ಪರಿಣಾಮ 1973 ಪ್ರಕರಣ ದಾಖಲಾಗಿದೆ. ವಾಹನ ಚಲಾಯಿಸುವಾಗ ಮೊಬೈಲ್‌ ಬಳಸಿದ್ದಕ್ಕೆ 425 ಹಾಗೂ ಟ್ರಾಫಿಕ್‌ ಸಿಗ್ನಲ್‌ ಜಂಪ್‌ ಮಾಡಿದ್ದಕ್ಕಾಗಿ 395 ಪ್ರಕರಣ ದಾಖಲಾಗಿದೆ. ಇದರಲ್ಲಿ ಜಂಪಿಂಗ್‌ ಟ್ರಾಫಿಕ್‌ ಸಿಗ್ನಲ್‌ಹಾಗೂ ಗಾಡಿ ಓಡಿಸುವಾಗ ಮೊಬೈಲ್‌ ಬಳಕೆಎರಡರಿಂದಲೇ ಒಟ್ಟು 143 ಡಿಎಲ್‌ ಅಮಾನತು ಮಾಡಲಾಗಿದೆ.

ನಿಯಮ ಉಲ್ಲಂಸಿದರೆ ಡಿಎಲ್‌ ಅಮಾನತು: ಕಳೆದ ಎರಡು ವರ್ಷದ ಹಿಂದೆ ಸುಪ್ರೀಂ ಕೋರ್ಟ್‌ ಅಪಘಾತ ಪ್ರಮಾಣ ಗಮನಿಸಿ ಕೆಲವೊಂದು ಸಂಚಾರನಿಯಮ ಉಲ್ಲಂಘನೆಯಾದರೆ ಡಿಎಲ್‌ ಅಮಾನತು ಮಾಡುವಂತೆ ಸೂಚಿಸಿದೆ. ಅದರಂತೆ ಟ್ರಾಫಿಕ್‌ ಸಿಗ್ನಲ್‌ ನಲ್ಲಿ ಕೆಂಪು ಬಣ್ಣವಿದ್ದರೂ ವಾಹನ ಚಾಲನೆ ಮಾಡಿದರೆ ನಿಮ್ಮ ಚಾಲನಾ ಪರವಾನಗಿಯನ್ನು ಅಮಾನತು ಮಾಡಲಾಗುತ್ತದೆ. ಹಾಗೆಯೇ ಕುಡಿದು ವಾಹನ ಚಲಾಯಿಸಿದರೆ, ಅತಿ ವೇಗವಾಗಿ ವಾಹನ ಓಡಿಸಿದರೆ, ಗೂಡ್ಸ್‌ ಗಾಡಿಯಲ್ಲಿ ಜನರನ್ನು ತುಂಬಿಕೊಂಡರೆ ಡಿಎಲ್‌ ಅಮಾನತುಗೊಳಿಸಲಾಗುತ್ತದೆ.

ಬುದ್ಧಿ ಮಾತಿಗೂ ಬಗ್ಗದ ಜನ: ಸಂಚಾರ ನಿಯಮ ಉಲ್ಲಂಘನೆ ಆಗದಂತೆ ಟ್ರಾಫಿಕ್‌ ಪೊಲೀಸರು ನಗರದಲ್ಲಿ ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಾಗೂ ತಿಳಿವಳಿಕೆ ಮೂಡಿಸುತ್ತಿದ್ದರೂ ಜನ ಬಗ್ಗುತ್ತಿಲ್ಲ.ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳು ಅರಿವು ಮೂಡಿಸಲಾಗುತ್ತಿದೆ. ಅಲ್ಲದೆ, ಕರಪತ್ರ, ಜಾಗೃತಿಕಾರ್ಯಕ್ರಮ, ಜಾಗೃತಿ ಜಾಥಾ, ಮೈಕ್‌ ಮೂಲಕ ಮಾಹಿತಿ, ಭಿತ್ತಿಪತ್ರ ಅಂಟಿಸುತ್ತಿದ್ದರೂ ಜನ ಮಾತ್ರ ಹೆಚ್ಚು ತಲೆಕಡಿಸಿಕೊಳ್ಳುತ್ತಿಲ್ಲ

ಡಿಎಲ್‌, ವಿಮೆ ಮಾಡಿಸಿ ಮನೆ-ಮಠ ಉಳಿಸಿಕೊಳ್ಳಿ  :   ಸಾಕಷ್ಟು ಜನ ಡಿಎಲ್‌ ಇಲ್ಲದೆ, ವಾಹನಗಳಿಗೆಇನ್ಶೂರೆನ್ಸ್‌ ಮಾಡಿಸಿಕೊಳ್ಳದೆ ವಾಹನ ಚಲಾಯಿಸುವುದು ಹೆಚ್ಚಾಗಿ ಕಂಡುಬರುತ್ತಿದೆ. ಒಂದು ವೇಳೆ ಇಂತಹವರಿಂದ ಅಪಘಾತವಾಗಿ ಸಾವು ನೋವು ಸಂಭವಿಸಿದರೆ ವಾಹನ ಚಾಲಕರುಅಥವಾ ಮಾಲೀಕರು ತಮ್ಮ ಲಕ್ಷಾಂತ ರೂ. ದಂಡ ಪಾವತಿಸುವುದಲ್ಲದೇ ಜೈಲು ಪಾಲಾಗಬೇಕಾಗುತ್ತದೆ. ಆದ್ದರಿಂದ ಕಡ್ಡಾಯವಾಗಿ ಡಿಎಲ್‌,ಇನ್ಶೂರೆನ್ಸ್‌ ಮಾಡಿಸಿಕೊಳ್ಳಿ ಎಂದು ದೇವರಾಜ ಸಂಚಾರ ಠಾಣೆ ಇನ್ಸ್‌ಪೆಕ ರ್‌r ಮುನಿಯಪ್ಪ ಮನವಿ ಮಾಡಿದ್ದಾರೆ.

ಒಂದೊಂದು ಜೀವವೂ ಅಮೂಲ್ಯ. ಒಂದು ಸಣ್ಣ ನಿರ್ಲಕ್ಷ್ಯ, ಅತಿ ವೇಗದೊಡ್ಡ ಅನಾಹುತಕ್ಕೆ ಕಾರಣವಾಗಲಿದೆ.ಇದಕ್ಕೆ ಸಾರ್ವಜನಿಕರು ಅವಕಾಶ ಕೊಡ ಬಾರದು. ಅಪಘಾತ ತಗ್ಗಿಸಲು ಇಲಾಖೆ ವತಿಯಿಂದ ಏನೆಲ್ಲಾ ಕ್ರಮ ಕೈಗೊಂಡರೂ ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಸಂದೇಶ್‌ ಕುಮಾರ್‌, ಎಸಿಪಿ, ಸಂಚಾರ ವಿಭಾಗ

ಕೋವಿಡ್ ಸಂದರ್ಭ ಸಂಚಾರ ಉಲ್ಲಂಘನೆಗೆ ದಂಡ ಹಾಕುವ ಪ್ರಕ್ರಿಯೆಗೆ ಕೈಹಾಕಿರಲಿಲ್ಲ. ಕಳೆದೊಂದು ತಿಂಗಳಿಂದ ಸಂಚಾರ ನಿಯಮ ಸಂಬಂಧಅರಿವು ಕಾರ್ಯಕ್ರಮ ಮೂಡಿಸಿ, ಮತ್ತೆಕಾರ್ಯಾಚರಣೆ ನಡೆಸಲಾಗುತ್ತಿದೆ.ಪೋಷಕರು ಅಪ್ರಾಪ್ತ ಮಕ್ಕಳಿಗೆ ವಾಹನನೀಡದೆ, ಸಂಚಾರ ನಿಯಮಗಳ ಕುರಿತು ತಿಳಿ ಹೇಳಬೇಕು. ಮುನಿಯಪ್ಪ, ಇನ್ಸ್‌ಪೆಕ್ಟರ್‌ ದೇವರಾಜ ಸಂಚಾರ ಠಾಣೆ

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.