ಇನ್‌-ಲೇ ಕಲೆ ಉಳಿವಿಗೆ ವಿದೇಶಿಗರಿಗೆ ತರಬೇತಿ


Team Udayavani, Oct 30, 2018, 12:11 PM IST

m4.jpg

ಮೈಸೂರು: ನೋಡುಗರ ಕಣ್ಮನ ಸೆಳೆಯುವ ಮರದ ಇನ್‌-ಲೇ ಆರ್ಟ್‌ನಲ್ಲಿ ಅರಳುವ ಕಲಾಕೃತಿಗಳ ಆಕರ್ಷಣೆಗೆ ವಿದೇಶಿಗರು ಮಾರು ಹೋಗುತ್ತಿದ್ದಾರೆ. ಹೀಗೆ ನಮ್ಮ ಕಲೆ, ಸಂಸ್ಕೃತಿಗೆ ಮನಸೋಲುವ ವಿದೇಶಿಗರಿಗೆ ಮರದ ಇನ್‌-ಲೇ ಕಲೆಯ ತರಬೇತಿ ನೀಡುವ ಮೂಲಕ ನಶಿಸುತ್ತಿರುವ ಕಲೆಯ ಉಳಿವಿಗೆ ಕುಶಲಕರ್ಮಿಯೊಬ್ಬರು ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ. 

ಕಲೆ, ಸಂಸ್ಕೃತಿಗೆ ಹೆಸರಾಗಿರುವ ಮೈಸೂರು ನಗರ ಹಲವು ದಶಕದಿಂದ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ನೆಲೆಯಾಗಿದೆ. ಹಲವು ವರ್ಷದಿಂದ ಕುಂದನ ಕಲೆಯನ್ನೇ ವೃತ್ತಿಯಾಗಿಸಿಕೊಂಡಿರುವ ಮೈಸೂರಿನ ಅಶೋಕ್‌ ಕುಮಾರ್‌ ಅವರು ವಿದೇಶಿಗರು, ಆಸಕ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮರದ ಇನ್‌ ಲೇ ಕಲೆಯ ತಿಳಿವಳಿಕೆ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಆ ಮೂಲಕ ಕುಂದನ ಕಲೆಯನ್ನು ಉಳಿಸಿ, ಬೆಳೆಸುವ ಜತೆಗೆ ತಲೆಮಾರುಗಳಿಂದ ಬಂದಿರುವ ಕಲೆಯನ್ನು ವಿಶ್ವದೆಲ್ಲೆಡೆ ಪಸರಿಸುವ ಕೆಲಸ ಮಾಡುತ್ತಿದ್ದಾರೆ. ಅಶೋಕ್‌ ಅವರ ಮರದ ಇನ್‌ ಲೇ ಕಲೆಯ ವೃತ್ತಿಗೆ ಆಕರ್ಷಿತರಾಗಿರುವ ಹಲವು ದೇಶಗಳ ಸರ್ಕಾರಿ ಅಧಿಕಾರಿಗಳು ನಗರಕ್ಕಾಗಮಿಸಿ ಕಲೆಯ ಬಗ್ಗೆ ಮಾಹಿತಿ ಪಡೆಯುತ್ತಾರೆ. 

ಪ್ರಾಥಮಿಕ ತರಬೇತಿ: ಮೈಸೂರಿನ ಮಂಡಿಮೊಹಲ್ಲಾದಲ್ಲಿ “ಅರುಣ್‌ ಫೈನ್‌ ಆರ್ಟ್ಸ್’ ಹೆಸರಿನಲ್ಲಿ ಮಳಿಗೆಯಲ್ಲಿ ಅಶೋಕ್‌ ಕುಮಾರ್‌ ಮರದ ಇನ್‌-ಲೇ ಕಲಾಕೃತಿಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಆದರೆ, ತಮ್ಮ ವೃತ್ತಿಯ ನಡುವೆ ಮರದ ಇನ್‌-ಲೇ ಕಲೆಯನ್ನು ಎಲ್ಲೆಡೆ ಪಸರಿಸುವ ಚಿಂತನೆ ನಡೆಸಿದ ಅಶೋಕ್‌ ಅವರು ಇದಕ್ಕಾಗಿ ಕಳೆದ ಮೂರು ವರ್ಷದಿಂದ ವಿದೇಶಿ ಪ್ರಜೆಗಳು,

ಆಸಕ್ತ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಾ ಬಂದಿದ್ದಾರೆ. ಇದಕ್ಕಾಗಿ ತಮ್ಮದೇ ಮಳಿಗೆಯಲ್ಲಿ ಕೊಠಡಿಯನ್ನು ಸಿದ್ಧªಪಡಿಸಿರುವ ಅಶೋಕ್‌ ಅವರು, ಒಂದು ಬಾರಿಗೆ ಎಂಟು ಮಂದಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಿದ್ದು, ಮರದ ಇನ್‌-ಲೇ ಕಲೆಗೆ ಸಂಬಂಧಿಸಿದ ಪ್ರಾಥಮಿಕ ವಿಷಯಗಳ ತರಬೇತಿ ನೀಡಲಿದ್ದಾರೆ. 

20 ಮಂದಿಗೆ ತರಬೇತಿ: ಆರಂಭದಲ್ಲಿ ಆಸ್ಟ್ರೇಲಿಯಾ ಮೂಲದ ಸ್ಕಿಲ್‌ ಟೂರಿಸಂ ಸಂಸ್ಥೆಯೊಂದಿಗೆ ವಿದೇಶಿ ಪ್ರಜೆಗಳಿಗೆ ಮರದ ಇನ್‌-ಲೇ ಕಲೆಯ ತರಬೇತಿ ನೀಡಲು ಆರಂಭಿಸಿದ್ದರು. ಇದುವರೆಗೂ ಐರ್ಲೆಂಡ್‌, ಅಮೆರಿಕ, ಬ್ರಿಟನ್‌ ಮತ್ತಿತರ ರಾಷ್ಟ್ರಗಳ 20ಕ್ಕೂ ಹೆಚ್ಚು ವಿದೇಶಿಗರಿಗೆ ತರಬೇತಿ ನೀಡಿದ್ದಾರೆ.

ಅದರಲ್ಲೂ ಅಮೆರಿಕ ಮೂಲದ ಪ್ರಜೆಗಳಿಗೆ ಹೆಚ್ಚಾಗಿ ತರಬೇತಿಯನ್ನು ನೀಡಿದ್ದು, ಇದರೊಂದಿಗೆ ಸ್ಥಳೀಯ ಆಸಕ್ತ ವಿದ್ಯಾರ್ಥಿಗಳಿಗೂ ಉಚಿತ ತರಬೇತಿ ನೀಡುತ್ತಿದ್ದಾರೆ. ಅಶೋಕ್‌ ಅವರ ಈ ಕೆಲಸಕ್ಕೆ ಪತ್ನಿ ಹಾಗೂ ತಂದೆ ಶ್ರೀಕಾಂತ್‌ ಕೂಡ ಕೈಜೋಡಿಸಿದ್ದಾರೆ. 

ಪ್ರೋತ್ಸಾಹ ಸಿಗುತ್ತಿಲ್ಲ: ಮರದ ಇನ್‌-ಲೇ ಕಲೆಯ ಪ್ರೋತ್ಸಾಹ ಮತ್ತು ಬೆಳವಣಿಗೆಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಂಬಂಧಪಟ್ಟವರಿಂದ ನಿರೀಕ್ಷಿತ ಪ್ರೋತ್ಸಾಹ ಸಿಗುತ್ತಿಲ್ಲ. ಹೀಗಾಗಿ ಪ್ರತಿ ವರ್ಷ ಮರದ ಇನ್‌-ಲೇ ಕಲೆಯಲ್ಲಿ ತೊಡಗಿದ್ದ ಕಲಾವಿದರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ.

ಇದರಿಂದ ಒಂದು ಕಾಲದಲ್ಲಿ 17 ಸಾವಿರ ಮಂದಿ ಇದ್ದ ಮರದ ಇನ್‌-ಲೇ ಕಲಾವಿದರ ಸಂಖ್ಯೆ ಇಂದು 3 ಸಾವಿರ ಮಂದಿಯಷ್ಟೇ ಇದ್ದಾರೆ. ಹಿಂದೆ ಈ ಕಲೆಯಲ್ಲಿ ತೊಡಗಿದ್ದ ಹಲವರು ಬೇರೆ ಬೇರೆ ವೃತ್ತಿಗಳಲ್ಲಿ ತೊಡಗಿಸಿಕೊಂಡಿದ್ದು, ಮರದ ಇನ್‌-ಲೇ ಕಲಾಕೃತಿಗಳನ್ನು ತಯಾರು ಮಾಡುತ್ತಿದ್ದ ಕಾರ್ಖಾನೆಗಳು ಸಹ ಬಂದ್‌ ಆಗಿವೆ ಎಂದು ಅಶೋಕ್‌ಕುಮಾರ್‌ ಅಸಮಾಧಾನ ವ್ಯಕ್ತಪಡಿಸುತ್ತಾರೆ. 

* ಸಿ. ದಿನೇಶ್‌

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.