ಕೆಎಚ್‌ಬಿ ಭೂ ಹಗರಣ ಎಸಿಗೆ ವರ್ಗಾವಣೆ


Team Udayavani, Dec 20, 2017, 12:38 PM IST

m4-khb.jpg

ಮೈಸೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಗೃಹ ಮಂಡಳಿ (ಕೆಎಚ್‌ಬಿ) ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆದಿರುವ ಭೂ ಸ್ವಾಧೀನ ಹಗರಣವನ್ನು ಸರ್ಕಾರ ಇದೀಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಗೆ ವರ್ಗಾಯಿಸಿದೆ.

ನ.7ರಂದು ಎಸಿಬಿಗೆ ವರ್ಗಾಯಿಸಲಾಗಿರುವ ಪ್ರಕರಣದ ತನಿಖೆ ಚುರುಕುಗೊಂಡಿದ್ದು, 46 ಮಂದಿ ವಿರುದ್ಧ ದಾಖಲಿಸಲಾಗಿರುವ ಎಫ್ಐಆರ್‌ ನಲ್ಲಿ ಶಾಸಕ ಜಿ.ಟಿ.ದೇವೇಗೌಡರ ಹೆಸರಿಲ್ಲ. ಆದರೆ, ಅವರ ಪುತ್ರ ಜಿ.ಡಿ.ಹರೀಶ್‌ ಗೌಡ 44ನೇ ಆರೋಪಿಯಾಗಿದ್ದಾರೆ.

ಜಿ.ಟಿ.ದೇವೇಗೌಡ ಅವರು ಕೆಎಚ್‌ಬಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮೈಸೂರು ತಾಲೂಕಿನ ಇಲವಾಲ ಹೋಬಳಿ ಗುಂಗ್ರಾಲ್‌ ಛತ್ರ, ಕಲ್ಲೂರು ನಾಗನಹಳ್ಳಿ, ಯಲಚನಹಳ್ಳಿ ಗ್ರಾಮಗಳಲ್ಲಿ ಬಡಾವಣೆ ನಿರ್ಮಾಣಕ್ಕೆ 2008 ಹಾಗೂ 2009ರಲ್ಲಿ ಭೂ ಸ್ವಾಧೀನಪಡಿಸಿಕೊಂಡಿದ್ದರು.

ಈ ವೇಳೆ ಎಕರೆಗೆ ಕನಿಷ್ಠ 8 ಲಕ್ಷದಿಂದ ಗರಿಷ್ಠ 18 ಲಕ್ಷದವರೆಗೆ ರೈತರಿಗೆ ಹಣ ನೀಡಿ ಮಧ್ಯವರ್ತಿಗಳು ಒಡಂಬಡಿಕೆ ಮಾಡಿಕೊಂಡು, ಬಳಿಕ ಕೆಎಚ್‌ಬಿಗೆ ಪ್ರತಿ ಎಕರೆಗೆ 36.50 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಇದರಲ್ಲಿ ಕೆಎಚ್‌ಬಿ ಅಧ್ಯಕ್ಷರಾಗಿದ್ದ ಜಿ.ಟಿ.ದೇವೇಗೌಡ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಪೈಕಿ 81 ಎಕರೆ ಜಮೀನು ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಸಿದ್ದರಾಮಯ್ಯ ಸರ್ಕಾರ ಲೋಕಾಯುಕ್ತಕ್ಕೆ ಸೂಚಿಸಿತ್ತು.

2015ರಲ್ಲಿ ಅಂದಿನ ಲೋಕಾಯುಕ್ತರು ತನಿಖೆ ನಡೆಸಿ ಭೂ ಖರೀದಿ ವ್ಯವಹಾರದಲ್ಲಿ ಮೇಲ್ನೋಟಕ್ಕೆ ಅವ್ಯವಹಾರ ನಡೆದಿರುವುದು ಕಂಡು ಬಂದಿದೆ ಎಂದು ವರದಿ ನೀಡಿದ್ದರು. ಆದರೆ, ಲೋಕಾಯುಕ್ತರ ವರದಿ ಮೇಲೆ ಸರ್ಕಾರ ಕ್ರಮಕ್ಕೆ ಮುಂದಾಗಲಿಲ್ಲ.

ಸರ್ಕಾರದ ಈ ಧೋರಣೆ ಪ್ರಶ್ನಿಸಿ ರೈತರಾದ ಬಸವರಾಜು, ರವಿ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ನಡುವೆ ರಾಜ್ಯ ಸರ್ಕಾರ ಲೋಕಾಯುಕ್ತಕ್ಕೆ ಪರ್ಯಾಯವಾಗಿ ಭ್ರಷ್ಟಾಚಾರ ನಿಗ್ರಹ ದಳ ರಚಿಸಿತ್ತು. ಆದರೂ ಪ್ರಕರಣದ ತನಿಖೆ ನೆನಗುದಿಗೆ ಬಿದ್ದಿತ್ತು.

ರಾಜಕೀಯ ಆರೋಪ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ನೆನಗುದಿಗೆ ಬಿದ್ದಿದ್ದ ಪ್ರಕರಣವನ್ನು ತನಿಖೆಗೆ ಆದೇಶಿಸುವ ಮೂಲಕ ಸಿಎಂ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾಗಿರುವ ಜಿ.ಟಿ.ದೇವೇಗೌಡರನ್ನು ಹಣಿಯಲು ಹಗರಣ ಬಳಸಿಕೊಳ್ಳಲಾಗುತ್ತಿದೆ. ಎಫ್ಐಆರ್‌ ನಲ್ಲಿ ಜಿ.ಟಿ.ದೇವೇಗೌಡರ ಹೆಸರಿಲ್ಲದಿದ್ದರೂ ಅವರ ವಿರುದ್ಧ ರಾಜಕೀಯ ಹಗೆತನ ಸಾಧಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ನೋಟಿಸ್‌ ಜಾರಿಗೆ ಸಿದ್ಧತೆ: ಸೋಮವಾರ ಲೋಕಾಯುಕ್ತ ಪ್ರಕರಣದ ತನಿಖೆಯನ್ನು ಎಸಿಬಿಗೆ ವರ್ಗಾಯಿಸಿದೆ. ಪ್ರಕರಣ ಎಸಿಬಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಮೈಸೂರಿನ ಎಸಿಬಿ ಎಸ್ಪಿ ಡಾ.ಎಚ್‌.ಟಿ.ಶೇಖರ್‌, ತನಿಖೆಗೆ ಆರಂಭಿಸಲು ಸಿದ್ಧತೆ ನಡೆಸಿದ್ದು, ಕೆಎಚ್‌ಬಿ ಭೂ ಸ್ವಾಧೀನಪಡಿಸಿಕೊಂಡಿರುವ 47 ರೈತರು, ಮಧ್ಯವರ್ತಿಗಳಿಗೆ ನೋಟಿಸ್‌ ಜಾರಿ ಮಾಡಲು ಸಿದ್ಧತೆ ನಡೆಸಿದ್ದಾರೆ. 

ಟಾಪ್ ನ್ಯೂಸ್

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರಮಠದ ಜಗದ್ಗುರು ಶ್ರೀ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.