ಚುನಾವಣೆಯಲ್ಲಿ ಬೆಂಬಲಿಸಿದ ಜಿಟಿಡಿಗೆ ಗೌರವ ಸಲ್ಲಿಕೆ


Team Udayavani, Dec 12, 2019, 3:00 AM IST

chunavaneyalli

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ ಶಾಸಕ ಎಚ್‌.ಪಿ.ಮಂಜುನಾಥ್‌, ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಧನ್ಯವಾದ ತಿಳಿಸಿ, ಗೌರವ ಸಲ್ಲಿಸಿದರು.

ಬುಧವಾರ ಮೈಸೂರಿನ ವಿಜಯನಗರದಲ್ಲಿರುವ ಜಿ.ಟಿ.ದೇವೇಗೌಡ ಅವರ ಮನೆಗೆ ನೂತನ ಶಾಸಕ ಎಚ್‌.ಪಿ.ಮಂಜುನಾಥ್‌, ಪತ್ನಿ ಸುಪ್ರಿಯಾ ಅವರೊಂದಿಗೆ ಭೇಟಿ ನೀಡಿ, ಜಿಟಿಡಿ ದಂಪತಿಗೆ ಹಾರ ಹಾಕಿ, ಸಿಹಿ, ಫ‌ಲತಾಂಬೂಲ ನೀಡಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ್ದಕ್ಕೆ ಧನ್ಯವಾದ ತಿಳಿಸಿದರು.

ಈ ಹಿಂದೆ ಎರಡು ಬಾರಿ ಹುಣಸೂರು ಕ್ಷೇತ್ರವನ್ನು ಜಿಟಿಡಿ ಪ್ರತಿನಿಧಿಸಿದ್ದರೆ, ಅವರ ಪತ್ನಿ ಲಲಿತಾ ಜಿ.ಟಿ.ದೇವೇಗೌಡ ಅವರು ಜಿಲ್ಲಾ ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಎಂಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿರುವ ಜಿಟಿಡಿ ಪುತ್ರ ಜಿ.ಡಿ.ಹರೀಶ್‌ ಗೌಡ ಅವರನ್ನು ಹುಣಸೂರು ಕ್ಷೇತ್ರದಿಂದ ಕಣಕ್ಕಿಳಿಸಲು ತಯಾರಿ ನಡೆಸಿದ್ದರು.

ಆದರೆ, ಕಾಂಗ್ರೆಸ್‌ ತ್ಯಜಿಸಿ ಬಂದ ಎಚ್‌.ವಿಶ್ವನಾಥ್‌ ಅವರಿಗೆ ಹುಣಸೂರು ಕ್ಷೇತ್ರದಿಂದ ಜೆಡಿಎಸ್‌ ಟಿಕೆಟ್‌ ನೀಡಿದ ಕಾರಣ ಅನಿವಾರ್ಯವಾಗಿ ಅವರಿಗೆ ಬೆಂಬಲ ನೀಡಿದ್ದರು. ಜಿಟಿಡಿ ಕುಟುಂಬ ಇಂದಿಗೂ ಹುಣಸೂರು ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದು, ವಿಶ್ವನಾಥ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹುಣಸೂರು ಉಪ ಚುನಾವಣೆಯಲ್ಲಿ ಎಚ್‌.ಪಿ.ಮಂಜುನಾಥ್‌ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದರು.

ದೋಸ್ತಿ ಸರ್ಕಾರದಲ್ಲಿ ತಾವು ಬಯಸಿದ ಖಾತೆ ನೀಡಲಿಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಬಗ್ಗೆ ಅಸಮಾಧಾನಗೊಂಡಿರುವ ಜಿಟಿಡಿ ತಾಂತ್ರಿಕವಾಗಷ್ಟೇ ಜೆಡಿಎಸ್‌ನಲ್ಲಿದ್ದಾರೆ. ಹೀಗಾಗಿ ಹುಣಸೂರು ಉಪ ಚುನಾವಣೆಯಲ್ಲಿ ಯಾರನ್ನೂ ಬೆಂಬಲಿಸದೆ ತಟಸ್ಥರಾಗಿ ಉಳಿಯುವುದಾಗಿ ಪ್ರಕಟಿಸಿದರು.

ಆದರೆ, ಕಡೆಯ ಎರಡು ದಿನಗಳಲ್ಲಿ ಜಿಟಿಡಿ ಪುತ್ರ ಹರೀಶ್‌ ಗೌಡ ಅವರು ತಮ್ಮ ಬೆಂಬಲಿಗರಿಗೆ ಸೂಚನೆ ನೀಡಿ ಜೆಡಿಎಸ್‌ನ ಸಾಂಪ್ರದಾಯಿಕ ಮತಗಳು ಕಾಂಗ್ರೆಸ್‌ಗೆ ವರ್ಗಾವಣೆಯಾಗುವಂತೆ ನೋಡಿಕೊಂಡಿದ್ದರು. ಇದರಿಂದಾಗಿ ಎಚ್‌.ಪಿ.ಮಂಜುನಾಥ್‌ 39 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಲು ಸಾಧ್ಯವಾಯಿತು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.