ತ್ರಿಪುರ ಸುಂದರಿ ವೈಮಾಳಿಗೆ ಉತ್ಸವ ವೈಯ್ಯಾರ


Team Udayavani, Jan 15, 2020, 3:00 AM IST

tripura-sundari

ಮೂಗೂರು: ಮೂಗೂರು ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಕಡೆಯ ದಿನವಾದ ಮಂಗಳವಾರ ವೈಮಾಳಿಗೆ ಉತ್ಸವ ಧಾರ್ಮಿಕ ವಿಧಿವಿಧಾನದೊಂದಿಗೆ ನೆರವೇರಿತು.

ವೈಮಾಳಿಗೆ ಉತ್ಸವದ ಅಂಗವಾಗಿ ಬೆಳಗ್ಗೆ 10 ಗಂಟೆಗೆ ವಿವಿಧ ಹೂಗಳಿಂದ ಸಿಂಗಾರಗೊಂಡಿದ್ದ ಆಳು ನರ್ತಕಿಯರ ಹೂವಿನ ಪಲ್ಲಕ್ಕಿಯಲ್ಲಿ ಅಮ್ಮನವರ ಉತ್ಸವಮೂರ್ತಿಯನ್ನು ಪ್ರತಿಷ್ಠಾಪಿಸಿ, ಮಂಗಳವಾದ್ಯ ಹಾಗೂ ಗೊರವರ ಕುಣಿತದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು.

ದೇವಾಲಯದ ಒಳಾಂಗಣವನ್ನು ಪ್ರವೇಶಿಸಿದ ಅಮ್ಮನವರ ಉತ್ಸವಮೂರ್ತಿಯನ್ನು ಮಧ್ಯಾಹ್ನದ ನಂತರ ಅಲಂಕೃತ ಹೂವಿನ ಆಳು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ, ದೇವಾಲಯದ ಮೇಲ್ಭಾಗದಲ್ಲಿ 5 ಸುತ್ತು ಹಾಗೂ ದೇವಾಲಯ ಪ್ರಾಂಗಣದಲ್ಲಿ 7 ಸುತ್ತು ಪ್ರದಕ್ಷಿಣೆ ಹಾಕಿಸಿ ದೇವಾಲಯದ ದಕ್ಷಿಣ ದ್ವಾರದ ಮೂಲಕ ಒಳ ಪ್ರವೇಶಿಸಲಾಯಿತು.

ಈ ವೇಳೆ ದೇವಾಲಯದಲ್ಲಿ ಹಾಜರಿದ್ದ ಮಹಿಳೆಯರು ತಮ್ಮ ಕುಟುಂಬದ ಶ್ರೇಯಸ್ಸು ಹಾಗೂ ದೀರ್ಘ‌ ಸುಮಂಗಲಿಯಾಗಿರಲೆಂದು ಪ್ರಾರ್ಥಿಸಿ ಅಮ್ಮನವರಿಗೆ ಹಣ್ಣು, ಹೂ, ನಗದನ್ನು ಉತ್ಸವ ಮೂರ್ತಿಗೆ ಅರ್ಪಿಸಿದರು. ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ಅಮ್ಮನವರಿಗೆ ಜೈಕಾರ ಹಾಕಿ ಈಡುಗಾಯಿ ಅರ್ಪಿಸಿದರು. ಈ ದೃಶ್ಯವನ್ನು ನೆರೆದಿದ್ದ ಭಕ್ತರ ಸಮೂಹ ತಮ್ಮ ಮೊಬೈಲ್‌ಗ‌ಳಲ್ಲಿ ಸೆಲ್ಪಿ ತೆಗೆಯಲು ಮುಗಿಬಿದ್ದರು.

ರಾತ್ರಿ 11 ಗಂಟೆ ವೇಳೆಗೆ ದೇವಾಲಯವನ್ನು ಸ್ವಚ್ಛಗೊಳಿಸಿ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಮಾಡುವ ಮೂಲಕ‌ ಈ ಬಾರಿ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿತ್ತು. ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಮಾಜಿ ಸಚಿವರು ಹಾಗೂ ಮೇಲಕೋಟೆ ಕ್ಷೇತ್ರದ ಶಾಸಕರಾದ ಸಿ.ಎಸ್‌.ಪುಟ್ಟರಾಜು ಕುಟುಂಬ ವರ್ಗ ಅಮ್ಮನವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

5 ದಿನಗಳ ಕಾಲ ಜಾತ್ರಾ ಮಹೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದ ಸಚಿವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ಗ್ರಾಮದ ಬಂಡಿ ಬೀದಿ ನಿವಾಸಿ ಸುಕಂದಮ್ಮ ಬಸವಣ್ಣರವರ ಕುಟುಂಬದವರು ಪ್ರತಿ ವರ್ಷದಂತೆ ನರ್ತಕಿ ಪಲ್ಲಕಿ ಉತ್ಸವದ ಉಸ್ತುವಾರಿ ವಹಿಸಿ ನಿರಂತರ ಸೇವಾರ್ಥದಾರರಾಗಿ ನೆರವೇರಿಸಿದರು.

ದೇವಿ ವೀಕ್ಷಣೆಗೆ ನೂಕು ನುಗ್ಗಲು: ಮೂಗೂರು ತ್ರಿಪುರ ಸುಂದರಿ ದೇವಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಮಂಗಳವಾರ ವೈಮಾಳಿಗ ಉತ್ಸವ ಅಂಗವಾಗಿ ಅಮ್ಮನವರ ದರ್ಶನ ಪಡೆಯಲು ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳ ಜನರು ತಂಡೋಪ ತಂಡವಾಗಿ ದೇವಾಲಯದ ಒಳಪ್ರವೇಶಿಸುವಾಗ ನೂಕು ನುಗ್ಗಲು ಉಂಟಾಯಿತು. ಮಹಿಳೆಯರು ಮಕ್ಕಳು ಸೇರಿದಂತೆ ವೃದ್ಧರು ಪ್ರಯಾಸ ಪಡುವಂತಾಯಿತು. ಈ ವೇಳೆ ಪೋಲಿಸರ ಹಿಡಿತಕ್ಕೆ ಸಿಗದೆ ಬಹಳ ಜನಜಂಗುಳಿ ಉಂಟಾಯಿತು. ದೇವಿ ವೀಕ್ಷಣೆಗೆ ಭಾರೀ ಜನಸ್ತೋಮ ನೆರೆದಿತ್ತು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.