ಜನರ ಮನಸ್ಥಿತಿ ಬದಲಾಯಿಸುವ ಪ್ರಯತ್ನ: ಉಪೇಂದ್ರ


Team Udayavani, Apr 3, 2019, 3:00 AM IST

janara

ಮೈಸೂರು: ಚುನಾವಣೆ ಎಂದರೆ ಗೆಲುವು-ಸೋಲು ಮುಖ್ಯವಲ್ಲ. ಗೆಲುವು -ಸೋಲೇ ಮುಖ್ಯ ಎಂಬ ಜನರ ಮನಸ್ಥಿತಿ ಬದಲಾಯಿಸುವುದು ನಮ್ಮ ಪ್ರಯತ್ನ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ತಿಳಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಆಶಾರಾಣಿ ಪರ ಪ್ರಚಾರಕ್ಕಾಗಿ ಮಂಗಳವಾರ ಮೈಸೂರಿಗೆ ಆಗಮಿಸಿದ್ದ ಅವರು ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜಕೀಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾವಣೆ ಮಾಡುವ ದೃಷ್ಟಿಯಿಂದ ಉತ್ತಮ ಪ್ರಜಾಕೀಯ ಪಾರ್ಟಿ ಸ್ಥಾಪಿಸಲಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳಲ್ಲೂ ಪ್ರಜಾಕೀಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.

ರಾಜ್ಯದ 28 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, 2ನೇ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಏ.6 ಅಥವಾ 7ರಂದು ಬಿಡುಗಡೆ ಮಾಡುವುದಾಗಿ ಹೇಳಿದರು.

ವೃತ್ತಿಪರತೆ: ಇವತ್ತು ಪ್ರಜಾಪ್ರಭುತ್ವವೆಂದರೆ ಹಣಬಲ, ಜಾತಿ ಬಲ ಇರುವವರಿಗೆ ಒಂದು ದಿನ ಮತ ಹಾಕಿ 5 ವರ್ಷ ಅವರನ್ನು ಮಹಾರಾಜರಂತೆ ಮೆರೆಸುವುದಾಗಿದೆ. ಈ ವ್ಯವಸ್ಥೆ ಬದಲಾಗಬೇಖು ಶಿಸ್ತು ಬದ್ಧವಾಗಿ ವ್ಯಾಪಾರೀಕರಣದಿಂದ ರಾಜಕಾರಣವನ್ನು ತೆಗೆದು ವೃತ್ತಿಪರತೆಗೆ ತರಲು ಈ ಪ್ರಯತ್ನ ಮಾಡಲಾಗುತ್ತಿದೆ.

ಜಾತಿ, ಹಣಕ್ಕೆ ಬದಲಾಗಿ ವಿಚಾರಗಳಿಗೆ ಜನ ಮತ ನೀಡುವಂತಾಗಬೇಕು. 500 ಮತ ಬರಲಿ, ಸಾವಿರ ಮತ ಬರಲಿ ನಮ್ಮ ಪ್ರಯತ್ನವನ್ನು ಬಿಡುವುದಿಲ್ಲ. ಹಣವಿಲ್ಲದೆ, ಅಬ್ಬರದ ಪ್ರಚಾರವಿಲ್ಲದೆಯೂ ಜನರನ್ನು ತಲುಪಬಹುದು,

ರ್ಯಾಲಿ, ಸಮಾವೇಶಗಳಿಂದಲ್ಲ ವಿಚಾರಗಳಿಂದ ಜನರನ್ನು ತಲುಪಬೇಕು. ಬಾಯಿಂದ ಬಾಯಿಗೆ ಸತ್ಯ ತಲುಪಿಸುವ ಪ್ರಜಾಕೀಯ ಮಾಡುತ್ತಿದ್ದೇವೆ. ಚುನಾವಣೆಗೆ ಫ‌ಂಡ್‌ ಬರದೆ ರಾಜಕೀಯ ಪಕ್ಷಗಳವರು ಹೊರಗೇ ಬರುವುದಿಲ್ಲ.

ಮಧ್ಯವರ್ತಿಗಳಿಲ್ಲದ ಪ್ರಜಾಕೀಯ: ಜಾತಿ ಉಳಿದಿರುವುದೇ ರಾಜಕಾರಣದಿಂದ, ಒಡೆದಾಳುವುದೇ ರಾಜಕೀಯ- ಒಂದುಗೂಡಿಸುವುದೇ ಪ್ರಜಾಕೀಯ. ಮಧ್ಯವರ್ತಿಗಳಿಲ್ಲದ ಪ್ರಜಾಕೀಯ ನಮ್ಮದು. ನಾನೊಬ್ಬ ಬದಲಾದರೆ ಏನು ಪ್ರಯೋಜನ ಎಂಬ ಆದರೆ ಯನ್ನು ಮನಸ್ಸಿನಿಂದ ತೆಗೆದುಹಾಕಿ ನಾನೊಬ್ಬ ಬದಲಾದರೆ ನಿಧಾನಕ್ಕೆ ಸಮಾಜವು ಬದಲಾಗುತ್ತದೆ.

ನಮ್ಮ ಈ ಪ್ರಯತ್ನದಲ್ಲಿ 500 ಮತ ಬಂದರೆ 500 ಜನ ಗೆದ್ದ ಹಾಗೆ, 5 ಲಕ್ಷ ಮತ ಬಂದರೆ 5 ಲಕ್ಷ ಜನರು ಗೆದ್ದ ಹಾಗೆ ಎಂದರು. ರಾಜಕೀಯದಿಂದ ಶೇ.20ರಷ್ಟು ಜನರಿಗೆ ಅನುಕೂಲ ಆಗುತ್ತಿದ್ದು, ಇನ್ನುಳಿದ ಶೇ.80ರಷ್ಟು ಜನರಿಗೆ ತೊಂದರೆ ಆಗುತ್ತಿದೆ. ಇದು ಬದಲಾಗಿ ಶೇ.80ರಷ್ಟು ಜನರಿಗೆ ಅನುಕೂಲವಾದರೆ, ಇನ್ನುಳಿದ ಶೇ.20ರಷ್ಟು ಜನರಿಗೆ ತಾನೇ ತಾನಾಗಿ ಅನುಕೂಲವಾಗಲಿದೆ ಎಂದು ಹೇಳಿದರು.

ರಾಜಕೀಯ ಪಕ್ಷಗಳು ಚುನಾವಣೆಗೆ ಮುನ್ನ ಹೊರಡಿಸುವ ಪ್ರಣಾಳಿಕೆಗಳಿಗೆ ಬೆಲೆ ಇಲ್ಲದಂತಾಗಿದೆ. ಕಾನೂನಿಗೆ ತಿದ್ದುಪಡಿ ತಂದು ಪ್ರಣಾಳಿಕೆ ಪದ್ಧತಿ ಬದಲಾಗಬೇಕು ಎಂದರು. ಮೈಸೂರು-ಕೊಡಗು ಕ್ಷೇತ್ರದ ಪಕ್ಷದ ಅಭ್ಯರ್ಥಿ ವಿ.ಆಶಾರಾಣಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಸುಮಲತಾ, ಪ್ರಕಾಶ್‌ರಾಜ್‌ ಅವರಾಗೇ ನಮ್ಮ ವಿಚಾರ ಒಪ್ಪಿ ಬರಬೇಕು. ನಾವು ಅವರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯುವುದು ರಾಜಕೀಯವಾಗುತ್ತದೆ. ಹೀಗಾಗಿ ಸಹಜವಾಗಿ ಪ್ರಜಾಕೀಯದಲ್ಲಿ ನಂಬಿಕೆ ಇರುವವರು ಬರಬೇಕು.
-ಉಪೇಂದ್ರ, ನಟ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.