ಹಬ್ಬಕ್ಕೆ ನೀರಿಲ್ಲದೆ ಪರಿತಪಿಸಿದ್ದ 16 ಗ್ರಾಮಗಳಿಗೆ ಕಡೆಗೂ ನೀರು ಪೂರೈಕೆ


Team Udayavani, Apr 16, 2021, 4:08 PM IST

udayavani report palashruthi

ನಂಜನಗೂಡು: ಬೃಹತ್‌ ಓವರ್‌ ಹೆಡ್‌ ಟ್ಯಾಂಕ್‌ಗೆ ನೀರು ಪೂರೈಸುವ ಕೊಳವೆ ಒಡೆದು 16ಗ್ರಾಮಗಳಿಗೆ ಎರಡು ನೀರಿನ ಅಭಾವ ಉಂಟಾಗಿದ್ದರಿಂದ ತ್ವರಿತವಾಗಿ ದುರಸ್ತಿ ಕಾರ್ಯಕೈಗೊಂಡು ಕುಡಿಯುವ ನೀರು ಪೂರೈಸಲಾಗಿದೆ.

ಉದಯವಾಣಿಯಲ್ಲಿ ಏ.12ರಂದು “ಕೊಳವೆ ಒಡೆದಿದ್ದಕ್ಕೆ 16 ಗ್ರಾಮಗಳಿಗೆ ಹಬ್ಬಕ್ಕೆ ನೀರಿಲ್ಲ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿ, ಇಲಾಖೆಗಳನಿರ್ಲಕ್ಷ್ಯ ಧೋರಣೆಯನ್ನು ತಿಳಿಸುವುದರೊಂದಿಗೆ ಜನರು ಹಬ್ಬಕ್ಕೆ ನೀರಿಲ್ಲದಿರುವ ಕುರಿತು ಗಮನ ಸೆಳೆಯಲಾಗಿತ್ತು.

ವರದಿ ಪ್ರಕಟಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡ ವಿದ್ಯುತ್‌ ಇಲಾಖೆ ತಾನೇ ಮುಂದೆ ನಿಂತು ಒಡೆದಿದ್ದ ಕೊಳವೆಯನ್ನು ದುರಸ್ತಿಪಡಿಸಿ 16ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ.

ಏನಾಗಿತ್ತು?: ತಾಲೂಕಿನ ಕೌಲಂದೆಹೋಬಳಿಯ ಮಹದೇವನಗರದ ಪರ್ವತಾಂಜನೇಯನ ಗುಡ್ಡದ ಮೇಲೆ ಬೃಹತ್‌ಹೆಡ್‌ ಒವರ್‌ ಟ್ಯಾಂಕ್‌ ನಿರ್ಮಿಸಲಾಗಿದೆ.

5 ಲಕ್ಷಗ್ಯಾಲನ್‌ ನೀರು ಸಾಮರ್ಥ್ಯದ ಟ್ಯಾಂಕ್‌ಗೆ ಪ್ರತಿದಿನ ಕಬಿನಿ ನದಿ ಮೂಲಕ ನೀರು ತುಂಬಿಸಿ,ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ.16 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಅದೂ ಕೂಡ ದಿನಬಿಟ್ಟು ದಿನನೀರು ಸರಬರಾಜು ಮಾಡಲಾಗುತ್ತಿದೆ.

ಗುಡ್ಡದ ಮೇಲಿರುವ ಹಳೆಯ ವಿದ್ಯುತ್‌ಕಂಬಗಳನ್ನು ಬದಲಾಯಿಸಿ ಹೈಟೆಕ್‌ ವ್ಯವಸ್ಥೆಮಾಡಲು ಹೊರಟ ವಿದ್ಯುತ್‌ ಇಲಾಖೆ ಅಧಿಕಾರಿಗಳು ಕಾಮಗಾರಿ ನಡೆಸುವಾಗ ಜೆಸಿಬಿ ಯಂತ್ರಕ್ಕೆ ಸಿಲುಕಿ ಈ ಟ್ಯಾಂಕ್‌ಗೆ ನೀರುಸರಬರಾಜಾಗುವ ಕೊಳವೆ ಒಡೆದುಹೊಗಿತ್ತು. ಹೀಗಾಗಿ ನೀರು ಗುಡ್ಡದಲ್ಲೇ ಸೋರಿಕೆಯಾಗುತ್ತಿರು ವುದರಿಂದ ಗ್ರಾಮಗಳಿಗೆ ನೀರುಪೂರೈಕೆ ಆಗುತ್ತಿಲ್ಲ.

ಕೊಳವೆಗೆ ಹಾನಿಯಾದ ತಕ್ಷಣವೇ ವಿದ್ಯುತ್‌ ಇಲಾಖೆಯ ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿ ಯಾರಿಗೂ ಹೇಳದೆ ಅಲ್ಲಿಂದ ವಾಪಸ್ಸಾಗಿ ಮೌನ ವಹಿಸಿದರು. ಹೀಗಾಗಿಎರಡು ದಿನ ಗ್ರಾಮಸ್ಥರು ನೀರಿಗಾಗಿ ಪರಿತಪಿಸಿದ್ದರು. ಉದಯವಾಣಿಯಲ್ಲಿ ಪ್ರಕಟಗೊಂಡ ಸಮಗ್ರವರದಿಯನ್ನು ನಂಜನಗೂಡು ಗ್ರಾಮೀಣ ನೀರುಸರಬರಾಜು ಅಧಿಕಾರಿ ಚರಿತಾ ಅವರು ಬೆಳಗ್ಗೇಯೇ ವಿದ್ಯುತ್‌ ಇಲಾಖೆ ಹಾಗೂ ಸೆಸ್ಕ್ಗಗಮನಕ್ಕೆ ತಂದಿದ್ದರು.

ಈ ವರದಿಯನ್ನುಸಂಬಂಧಿಸಿದ ಅಧಿಕಾರಿಗಳಿಗೆ ವಾಟ್ಸಾಪ್‌ ಮೂಲಕ ಕಳುಹಿಸಿಕೊಟ್ಟಿದ್ದರು. ಜೊತೆಗೆ ತ್ವರಿತವಾಗಿಕೊಳವೆಯನ್ನು ದುರಸ್ತಿಪಡಿಸದಿದ್ದರೆ ಇಲಾಖೆ ವಿರುದ್ಧ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದರು. ಹೀಗಾಗಿ ಎಚ್ಚೆತ್ತುಕೊಂಡ ವಿದ್ಯುತ್‌ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸಂಜೆಯೇ ಕೊಳವೆ ಒಡೆದಿರುವ ಸ್ಥಳಕ್ಕೆಧಾವಿಸಿ, ದುರಸ್ತಿ ಕಾರ್ಯ ಕೈಗೊಂಡು ಬೃಹತ್‌ ಓವರ್‌ಹೆಡ್‌ ಟ್ಯಾಂಕ್‌ಗೆ ನೀರು ಸಂಪರ್ಕಿಸುವ ವ್ಯವಸ್ಥೆ ಮಾಡಿದರು. ಬಳಿಕ 16 ಗ್ರಾಮಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡಲಾಗಿತ್ತು. ಹಬ್ಬದ ದಿನ ನೀರಿಲ್ಲದೆ ಕಂಗಾಲಾಗಿದ್ದ ಜನರು ನೀರು ಬರುತ್ತಿದ್ದಂತೆ ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.