ಹುಣಸೂರು: ತಟ್ಟೆಕೆರೆ ಗ್ರಾ.ಪಂ.ಅಧ್ಯಕ್ಷರಾಗಿ ಎ.ಎಂ.ದೇವರಾಜ್ ಅವಿರೋಧ ಆಯ್ಕೆ
Team Udayavani, May 17, 2022, 7:30 PM IST
ಹುಣಸೂರು: ತಾಲೂಕಿನ ಹನಗೋಡು ಹೋಬಳಿಯ ತಟ್ಟೆಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಂಗಟಹಳ್ಳಿಯ ಸದಸ್ಯ ಎ.ಎಂ.ದೇವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಂತರೀಕ ಒಪ್ಪಂದದಂತೆ ಈ ಹಿಂದಿನ ಅಧ್ಯಕ್ಷ ತಟ್ಟೆಕೆರೆ ಕುಮಾರ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಂಗಟಹಳ್ಳಿಯ ಎ.ಎಂ.ದೇವರಾಜ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ದೇವರಾಜ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಬಿ.ಇ.ಓ.ನಾಗರಾಜ್ ಪ್ರಕಟಿಸಿದರು.
ಗ್ರಾ.ಪಂ.ನಲ್ಲಿ ಒಟ್ಟು 13 ಮಂದಿ ಸದಸ್ಯರಲ್ಲಿ ಉಪಾಧ್ಯಕ್ಷೆಯೊಬ್ಬರು ಮಾತ್ರ ಗೈರಾಗಿದ್ದು, ಇನ್ನುಳಿದ ಎಲ್ಲ ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಿದ್ದರು.
ಅಧ್ಯಕ್ಷರ ಆಯ್ಕೆ ಪ್ರಕಟವಾಗುತ್ತಿದ್ದಂತೆ ಗ್ರಾ.ಪಂ.ಹೊರಗೆ ಅಭಿಮಾನಿಗಳು,ಕಾರ್ಯಕರ್ತರು ಪಟಾಕಿ ಸಿಡಿಸಿ, ಹಿಸಿ ಹಂಚಿ ಸಂಭ್ರಮಿಸಿದರು.
ನಂತರ ನೂತನ ಅಧ್ಯಕ್ಷ ದೇವರಾಜ್ರವರು ಶಾಸಕ ಎಚ್. ಪಿ.ಮಂಜುನಾಥ್ರವರನ್ನು ಭೇಟಿಯಾಗಿ ತಮ್ಮ ಆಯ್ಕೆಗೆ ನೆರವಾಗಿದ್ದಕ್ಕೆ ಅಭಿನಂದಿಸಿದರು.
ಈ ವೇಳೆ ಮಾಜಿಅಧ್ಯಕ್ಷ ಕುಮಾರ್, ಮುಖಂಡರಾದ ಮಾದೇವ ನಾಗರಾಜ್,ವೆಂಕಟೇಶ್, ಮಹದೇವ್ ಸೇರಿದಂತೆ ಗ್ರಾ.ಪಂ.ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!