ಅಸಾಂವಿಧಾನಿಕ ಒತ್ತಡಗಳು ಸರ್ಕಾರವನ್ನು ನಿಯಂತ್ರಣ ಮಾಡುತ್ತಿವೆ: ವಿಶ್ವನಾಥ್ ಆರೋಪ
Team Udayavani, Feb 13, 2023, 11:55 AM IST
ಮೈಸೂರು: ಅಸಾಂವಿಧಾನಿಕ ಒತ್ತಡಗಳು ಸರ್ಕಾರವನ್ನು ನಿಯಂತ್ರಣ ಮಾಡುತ್ತಿವೆ. ರಾಷ್ಟ್ರಭಕ್ತನಂತೆ ಉದ್ದುದ್ದ ಬರೆಯುವ ಚಕ್ರವರ್ತಿ ಸೂಲಿಬೆಲೆ, ಪಠ್ಯಪುಸ್ತಕ ಕುಲಗೆಡಿಸಿದ ಚಕ್ರತೀರ್ಥ, ಶತಾವದಾನಿ ಗಣೇಶ್, ಪ್ರಮೋದ್ ಮುತಾಲಿಕ್ ಮುಂತಾದವರು ಸರ್ಕಾರವನ್ನು ನಿಯಂತ್ರಿಸುತ್ತಿದ್ದಾರೆ. ಸಂವಿಧಾನವನ್ನು ಗೇಲಿ ಮಾಡಿದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ವಿಧಾನ ಪರಿಷತ್ತು ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಕಿರುನಾಟಕ ಪ್ರದರ್ಶನ ಮಾಡಲಾಗಿದೆ. ಅದರಲ್ಲಿ ಜಾತೀಯತೆ, ಅಸ್ಪೃಶ್ಯತೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ವ್ಯವಸ್ಥೆ ಬಗ್ಗೆ ಏನೋ ಹೇಳಲು ಹೋಗಿ ತಿರುಚಿದ್ದಾರೆ. ಅದರ ವಿಡಿಯೋ ನೋಡಿದ್ದೇನೆ. ದಲಿತ ಹುಡುಗ ಮೇಲ್ವರ್ಗದ ಹುಡುಗಿಯನ್ನು ಮುಟ್ಟುವಾಗ ಟಚ್ ಮಿ ನಾಟ್ ಅಂತ ಹಾಡು ಹಾಕಿದ್ದಾರೆ. ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಬಿಯರ್ ಅಂಬೇಡ್ಕರ್ ಎಂದು ಸಂಭೋದಿಸಲಾಗಿದೆ. ಪ್ರೇಕ್ಷಕರ ಸಾಲಿನಲ್ಲಿದ್ದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಕೇಕೆ ಹಾಕಿ ನಕ್ಕಿದ್ದಾರೆ. ಇದು ರಾಷ್ಟ್ರೀಯ ಅವಮಾನ. ಖಾಸಗಿ ವಿಶ್ವವಿದ್ಯಾಲಯಗಳಿಗೆ ಲಂಗು ಲಗಾಮಿಲ್ಲ. ಕೋಟ್ಯಂತರ ರೂ. ತೆಗೆದುಕೊಂಡು ವಿವಿಗಳಿಗೆ ಅನುಮೋದನೆ ಕೊಟ್ಟರು. ಸಾಮಾಜಿಕ ಜಾಲತಾಣಗಳಲ್ಲಿ ನಾಟಕಕ್ಕೆ ವಿರೋಧ ವ್ಯಕ್ತವಾಗಿದೆ. ಸರ್ಕಾರ ಜೈನ್ ವಿಶ್ವವಿದ್ಯಾಲಯದ ಮಾನ್ಯತೆ ರದ್ದುಪಡಿಸಬೇಕಿತ್ತು. ಸರ್ಕಾರ ಯಾರದ್ದೋ ಒತ್ತಡಕ್ಕೆ ಮಣಿದು ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಂಡಿದೆ. ಉನ್ನತ ಶಿಕ್ಷಣ ಸಚಿವರು, ಸಮಾಜ ಕಲ್ಯಾಣ ಸಚಿವರು, ರಾಜ್ಯಪಾಲರು ದನಿ ಎತ್ತಿಲ್ಲ ಎಂದರು.
ಕಾಲೇಜು ಆಡಳಿತ ಮಂಡಳಿ ಕನಿಷ್ಠ ಕ್ಷಮೆ ಕೇಳಿಲ್ಲ. ಸಂಸದರು, ಶಾಸಕರು ಸೊಲ್ಲೆತ್ತಿಲ್ಲ. ವಿರೋಧ ಪಕ್ಷಗಳೂ ಖಂಡಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ವಿಶ್ವನಾಥ್, ಗೃಹ ಮಂತ್ರಿಗಳು ಭಾರತ ಮಾತೆಯ ದೇವಾಲಯ ಉದ್ಘಾಟಿಸಿದ್ದಾರೆ. ಭಾರತ ಮಾತೆ ಭಾರತೀಯರ ಹೃದಯ ಮಂದಿರಗಳಲ್ಲಿ ರಾರಾಜಿಸುತ್ತಿದ್ದಾಳೆ. ಭಾರತ ಮಾತೆ ಪೂಜಿಸುವುದನ್ನು ನಿಮ್ಮಿಂದ ಕಲಿಯಬೇಕಿಲ್ಲ. ನಿಮ್ಮನ್ನು ನೋಡಿ ದೇವರುಗಳೇ ಹೆದರಿಕೊಂಡು ಓಡಿಹೋಗುತ್ತಾರೆ. ಎಲ್ಲ ಕಡೆ ಭಾರತ ಮಾತೆ ದೇವಾಲಯ ಕಟ್ಟುತ್ತಾರಂತೆ. ಸಂವಿಧಾನಕ್ಕೆ ಅಪಮಾನ ಮಾಡಿ ಭಾರತ ಮಾತೆ ಪೂಜೆ ಮಾಡುವುದನ್ನು ಹೇಳಿಕೊಡುತ್ತಿದ್ದೀರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ