ನ.1ರಿಂದ ಯೂನಿವರ್ಸಲ್‌ ಹೆಲ್ತ್‌ ಸ್ಕೀಂ


Team Udayavani, Oct 25, 2017, 1:22 PM IST

m3-ramesh.jpg

ಮೈಸೂರು: ನ.1ರಂದು ಜಾರಿಗೆ ತರಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೂನಿವರ್ಸಲ್‌ ಹೆಲ್ತ್‌ ಕವರೇಜ್‌ ಸ್ಕೀಂ ಯಶಸ್ಸಿಗೆ ಶ್ರಮಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್‌.ರಮೇಶ್‌ಕುಮಾರ್‌ ತಿಳಿಸಿದರು. ಮಂಗಳವಾರ ಮೈಸೂರು ಜಿಪಂ ಸಭಾಂಗಣದಲ್ಲಿ ಮೈಸೂರು ವಿಭಾಗಮಟ್ಟದ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಯಶಸ್ವಿನಿ, ವಾಜಪೇಯಿ ಆರೋಗ್ಯ ಶ್ರೀ ಸೇರಿದಂತೆ ಬೇರೆ ಬೇರೆ ಆರೋಗ್ಯ ಯೋಜನೆಗಳನ್ನೆಲ್ಲಾ ಒಂದು ಘಟಕದಡಿ ತಂದು ಯೂನಿವರ್ಸಲ್‌ ಹೆಲ್ತ್‌ ಕವರೇಜ್‌ ಸ್ಕೀಂ ರೂಪಿಸಲಾಗಿದೆ. ಈ ಯೋಜನೆ ಜಾರಿಯಿಂದ ರಾಜ್ಯದ 1.40 ಕೋಟಿ ಕುಟುಂಬಗಳಲ್ಲಿನ ಪ್ರತಿಯೊಬ್ಬರೂ ರಾಜ್ಯಸರ್ಕಾರದ ಆರೋಗ್ಯ ರಕ್ಷಣೆ ವ್ಯಾಪ್ತಿಗೆ ಬರುತ್ತಾರೆಂದರು. 

ವೈದ್ಯರು ಮತ್ತು ಸಿಬ್ಬಂದಿ ಈ ವರ್ತನೆಯಿಂದ ಬಡ-ಮಧ್ಯಮ ವರ್ಗದ ರೋಗಿಗಳು ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ದರ ತೆರಲಾಗದೆ ಒದ್ದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ದೃಷ್ಟಿಯಿಂದ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

ಈ ಯೋಜನೆ ಜಾರಿ ನಂತರ ಯಾವುದೇ ರೋಗಿಗಳು ಆಧಾರ್‌ ಕಾರ್ಡ್‌ನೊಂದಿಗೆ ಮೊದಲು ಸರ್ಕಾರಿ ಆಸ್ಪತ್ರೆಗೆ ಹೋಗಬೇಕು. ಅಲ್ಲಿ ಚಿಕಿತ್ಸೆ ದೊರೆಯದಿದ್ದಾಗ ಖಾಸಗಿ ಆಸ್ಪತ್ರೆಗೆ ಹೋಗಬಹುದಾಗಿದೆ. ಇಡೀ ದೇಶದಲ್ಲಿ ಇಂತಹ ಪರಿಣಾಮಕಾರಿ ಯೋಜನೆ ರೂಪಿಸಿರುವ ಮೊದಲ ರಾಜ್ಯ ಕರ್ನಾಟಕ. ಈ ಯೋಜನೆ ಯಶಸ್ವಿಯಾದರೆ, ಇಡೀ ದೇಶ ನಮ್ಮನ್ನು ಅನುಸರಿಸಲಿದೆ ಎಂದು ಹೇಳಿದರು.

ವಿಧೇಯಕ ಮಂಡನೆ: ಖಾಸಗಿ ಆಸ್ಪತ್ರೆಗಳಲ್ಲಿನ ದುಬಾರಿ ದರಗಳಿಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಕಾಯ್ದೆಗೆ ತಿದ್ದುಪಡಿ ತರುವ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದರು.

ನ್ಯಾಯ ಸಮ್ಮತ ದರ ನಿಗದಿ: ಖಾಸಗಿ ಆಸ್ಪತ್ರೆಗಳು ಮನಸೋ ಇಚ್ಚೇ ಹಣ ಪಡೆಯುತ್ತಿವೆ. ಇದನ್ನು ನಿಯಂತ್ರಿಸಲು ಜಂಟಿ ಸಲಹಾ ಸಮಿತಿ ಅನುಮೋದನೆ ಮೇರೆಗೆ ಆರೋಗ್ಯ ಕ್ಷೇತ್ರದಲ್ಲಿನ ಸರ್ಕಾರಿ-ಖಾಸಗಿ ತಜÒರ ಜತೆ ಚರ್ಚಿಸಿ ನ್ಯಾಯ ಸಮ್ಮತ ದರ ನಿಗದಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಯಾವ್ಯಾವ ಸೇವೆಗೆ ಯಾವ ದರ ಎಂಬುದರ ದರಪಟ್ಟಿ ಪ್ರದರ್ಶನ ಮಾಡುವಂತೆ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಸರ್ಕಾರದ ಈ ನಡೆ ವೈದ್ಯ ವೃತ್ತಿ ವಿರುದ್ಧವಲ್ಲ, ವೈದ್ಯಕೀಯ ಸಂಸ್ಥೆಗಳ ವ್ಯಾಪಾರಿ ಮನೋಭಾವದ ವಿರುದ್ಧ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಪ್ರಗತಿ ಪರಿಶೀಲನೆ: ಮೈಸೂರು ವಿಭಾಗ ವ್ಯಾಪ್ತಿಯ ಮೈಸೂರು, ಚಾಮರಾಜ ನಗರ, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಆಡಳಿತಾಧಿಕಾರಿಗಳಿಂದ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿನ ಕುಂದು ಕೊರತೆಗಳು,

ವೈದ್ಯರು ಮತ್ತು ಇತರೆ ಸಿಬ್ಬಂದಿ ಕೊರತೆ, ಆಸ್ಪತ್ರೆಗಳಲ್ಲಿನ ಹೆರಿಗೆ ಪ್ರಮಾಣ, ಸಾಂಕ್ರಮಿಕ ರೋಗ ತಡೆಗಟ್ಟುವಿಕೆ, ಜನರಿಕ್‌ ಔಷಧ ಮಳಿಗೆ, ಜಿಲ್ಲಾ ಡ್ರಗ್‌ ಹೌಸ್‌ಗಳಿಂದ ಔಷಧಗಳ ಎತ್ತುವಳಿ ಮೊದಲಾದ ವಿಷಯಗಳ ಬಗ್ಗೆ ಮಾಹಿತಿ ಪಡೆದು, ಕುಂದುಕೊರತೆ ಸರಿಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಯ್‌ಸೇs…, ಆರೋಗ್ಯ ಇಲಾಖೆ ಆಯುಕ್ತ ಮನೋಜ್‌ಕುಮಾರ್‌ ಮೀನಾ, ಇಲಾಖೆ ನಿರ್ದೇಶಕರಾದ ಡಾ.ರತನ್‌ ಕೇಲ್ಕರ್‌, ಡಾ.ಪಿ.ಸಿ.ನಟರಾಜ್‌, ಜಿಲ್ಲಾಧಿಕಾರಿ ರಂದೀಪ್‌, ಜಿಪಂ ಸಿಇಒ ಪಿ.ಶಿವಶಂಕರ್‌ ಇದ್ದರು.
 
ಹೊರ ಗುತ್ತಿಗೆ ಎಂಬುದು ಗುಲಾಮಗಿರಿ ಪರಿಷ್ಕೃತ ಆವೃತ್ತಿ. ಡಿ ಗ್ರೂಪ್‌ ಸಿಬ್ಬಂದಿ ಹೊರಗುತ್ತಿಗೆ ದಂಧೆಯಾಗಿ ಪರಿಣಮಿಸಿದೆ. ಗುತ್ತಿಗೆ ಪಡೆದ ಏಜೆನ್ಸಿಯವರು ಎಲ್ಲಾ ಹಣವನ್ನೂ ಇಟ್ಟುಕೊಂಡು ದುಡಿಯುವ ಸಿಬ್ಬಂದಿಗೆ ಕಡಿಮೆ ಹಣ ಕೊಡುತ್ತಾರೆ. ಹೀಗಾಗಿ ಆಸ್ಪತ್ರೆಗಳಲ್ಲಿ ಹೊರ ಗುತ್ತಿಗೆ ಕೊಡದೆ, ಕಾಯಂ ಮಾಡಿಕೊಳ್ಳುವುದಿಲ್ಲ ಎಂಬ ಷರತ್ತಿನ ಮೇಲೆ ಗುತ್ತಿಗೆ ಸಿಬ್ಬಂದಿಯನ್ನು ನೇಮಿಸಿಕೊಳ್ಳಿ.
-ಕೆ.ಆರ್‌.ರಮೇಶ್‌ಕುಮಾರ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.