ವಿವಾದಕ್ಕೆ ಕಾರಣವಾದ ನಟಿ ನಿಧಿ ಸುಬ್ಬಯ್ಯ ಫೋಟೋ ಅಪ್ಲೋಡ್
Team Udayavani, Aug 5, 2018, 6:00 AM IST
ಮೈಸೂರು: ನಟಿ ನಿಧಿಸುಬ್ಬಯ್ಯ ಇತ್ತೀಚೆಗೆ ಮೈಸೂರು ಅರಮನೆಗೆ ಭೇಟಿ ನೀಡಿ ಅರಮನೆಯ ದರ್ಬಾರ್ ಹಾಲ್ನಲ್ಲಿ ತೆಗೆದುಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.
2016ರಲ್ಲಿ ಯುವ ಜೋಡಿಯೊಂದು ಅರಮನೆಯ ದರ್ಬಾರ್ ಹಾಲ್ನಲ್ಲಿ ಪ್ರಿವೆಡ್ಡಿಂಗ್ ಫೋಟೋ ಶೂಟ್ ನಡೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆ ಘಟನೆ ನಂತರ ಅರಮನೆಯ ವೀಕ್ಷಕರಿಗೆ ಹಲವು ನಿರ್ಬಂಧಗಳನ್ನು ಹೇರಿ,ದರ್ಬಾರ್ ಹಾಲ್ ಪ್ರವೇಶಿಸದಂತೆ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. ಜತೆಗೆ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರು ಹೊರ ಆವರಣದಲ್ಲಿ ಫೋಟೋ-ಸೆಲ್ಫಿ ತೆಗೆದುಕೊಳ್ಳಲೂ ಪೊಲೀಸರು ಅಡ್ಡಿಪಡಿಸುತ್ತಾರೆ. ಆದರೂ ನಟಿ ನಿಧಿಸುಬ್ಬಯ್ಯ ಅವರಿಗೆ ನಿಷೇಧಿತ ಪ್ರದೇಶವಾದ ದರ್ಬಾರ್ ಹಾಲ್ನಲ್ಲಿ ಫೋಟೋ ತೆಗೆದುಕೊಳ್ಳಲು ಹೇಗೆ ಅವಕಾಶ ನೀಡಲಾಯಿತೆಂಬ ಪ್ರಶ್ನೆ ಕೇಳಿಬಂದಿದೆ.
ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ, ಮೈಸೂರು ಅರಮನೆ ಮಂಡಳಿ ಅಧ್ಯಕ್ಷರಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ 2003ರ ಜೂನ್ 19ರಂದು ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಪ್ರವಾಸಿಗರು ಅರಮನೆ ಮಂಡಳಿಗೆ 20 ರೂ. ಶುಲ್ಕ ಪಾವತಿಸಿ ಅರಮನೆಯ ಒಳಭಾಗದಲ್ಲಿ ಫ್ಲಾಶ್ ಲೈಟ್ ಬಳಸದೆ ಛಾಯಾಚಿತ್ರ ತೆಗೆಯಲು ಅನುಮತಿ ನೀಡಲಾಗಿದೆ. 2018ರ ಮಾರ್ಚ್ 1ರಂದು ನಡೆದ ಅರಮನೆ ಮಂಡಳಿ ಸಭೆಯಲ್ಲಿ ಮೊಬೈಲ್ ಕ್ಯಾಮೆರಾ ಹಾಗೂ ಡಿಜಿಟಲ್ ಕ್ಯಾಮೆರಾಗಳಲ್ಲಿ ಫ್ಲಾಶ್ಲೈಟ್ ಬಳಸದೆ ಉಚಿತವಾಗಿ ಫೋಟೋ ತೆಗೆಯಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ