ಪಾರಂಪರಿಕ ಶೈಲಿಯ ಕೇಂದ್ರ ಗ್ರಂಥಾಲಯ ಉದ್ಘಾಟನೆ

ಪೀಪಲ್ಸ್‌ ಪಾರ್ಕ್‌ನಲ್ಲಿ 5.3 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ

Team Udayavani, Sep 19, 2020, 3:58 PM IST

ಪಾರಂಪರಿಕ ಶೈಲಿಯ ಕೇಂದ್ರ ಗ್ರಂಥಾಲಯ ಉದ್ಘಾಟನೆ

ಮೈಸೂರು: ನಗರದ ಪೀಪಲ್ಸ್‌ ಪಾರ್ಕ್‌ನಲ್ಲಿ 5.3 ಕೋಟಿ ರೂ. ವೆಚ್ಚದಲ್ಲಿ ಪಾರಂಪರಿಕ ಶೈಲಿಯಲ್ಲಿ ನಿರ್ಮಾಣವಾಗಿರುವ ನಗರ ಕೇಂದ್ರ ಗ್ರಂಥಾಲಯ ಕಟ್ಟಡ ಹಾಗೂ ಡಿಜಿಟಲ್‌ ಗ್ರಂಥಾಲಯವನ್ನು ಸಚಿವದ್ವಯರು ಉದ್ಘಾಟಿಸಿದರು.

ಶುಕ್ರವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಟಿ. ಸೋಮಶೇಖರ್‌ ನಗರ ಕೇಂದ್ರ ಗ್ರಂಥಾಲಯ ಕಟ್ಟಡವನ್ನು ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಡಿಜಿಟಲ್‌ ಗ್ರಂಥಾಲಯವನ್ನುಲೋಕಾರ್ಪಣೆಗೊಳಿಸಿದರೆ,ಮಹಾನಗರ ಪಾಲಿಕೆ ಮೇಯರ್‌ ತಸ್ನೀಂ ಪುಸ್ತಕ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಪುಸ್ತಕ ಪ್ರದರ್ಶನ: ಶುಕ್ರವಾರ ಒಂದು ದಿನದಮಟ್ಟಿಗೆ ಹಳೆಯ ಹಾಗೂ ಹೊಸ ಪುಸ್ತಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಮೇಯರ್‌ ತಸ್ನೀಂ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿದರು. ಸಾರ್ವಜನಿಕರಿಗೆ ಒಂದು ದಿನದ ಪ್ರದರ್ಶನಕ್ಕೆ ಮುಕ್ತ ಅವಕಾಶಕಲ್ಪಿಸಲಾಗಿತ್ತು. ಸಾಂಕೇತಿಕವಾಗಿ ಡಿಜಿಟಲ್‌ ಲೈಬ್ರರಿಯನ್ನು ಉದ್ಘಾ ಟಿಸಲಾಗಿದ್ದು, ಸದ್ಯಕ್ಕೆ ಇರುವ ಕೆಲವು ಕಂಪ್ಯೂಟರ್‌ ಗಳಲ್ಲಿ ನಿಯಮಿತ ಪುಸ್ತಕಗಳ ಇ-ಬುಕ್‌ ಕಾಪಿ ಲಭ್ಯ ವಿರಲಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಕಂಪ್ಯೂಟರ್‌ ಹಾಗೂ ಹೆಚ್ಚು ಇ-ಬುಕ್‌ಗಳವ್ಯ ವಸ್ಥೆ ಮಾಡಲಾಗುತ್ತದೆ ಎಂದು ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಬಿ.ಮಂಜುನಾಥ್‌ ತಿಳಿಸಿದ್ದಾರೆ.

ನೂತನ ನಗರಕೇಂದ್ರ ಗ್ರಂಥಾಲಯಕಟ್ಟಡಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದ ವತಿಯಿಂದ ನಗರದ ಪೀಪಲ್ಸ್‌ ಪಾರ್ಕ್‌ ನಲ್ಲಿ 400×340 ಅಡಿ ಅಳತೆಯಲ್ಲಿ,5.3ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿ ಬಿ.ಶರತ್‌, ಸಾರ್ವಜನಿಕ ಗ್ರಂಥಾಲಯಇಲಾಖೆಯ ನಿರ್ದೇಶಕಡಾ.ಸತೀಶ್‌ಕುಮಾರ್‌ ಎಸ್‌.ಹೊಸಮನಿ, ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಬಿ.ಮಂಜು ನಾಥ್‌, ಕೆಆರ್‌ಐಡಿಎಲ್‌ನ ಮುಖ್ಯ ಅಭಿಯಂತರ ಎಂ.ಮಹದೇವಸ್ವಾಮಿ, ನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಡಿಸಿಪಿ ಪ್ರಕಾಶ್‌ ಗೌಡ, ಶಾಸಕರಾದಜಿ.ಟಿ.ದೇವೇಗೌಡ,ಎಲ…. ನಾಗೇಂದ್ರ, ಎಸ್‌.ಎ.ರಾಮದಾಸ್‌, ಹರ್ಷವರ್ಧನ್‌ ಇದ್ದರು.

ನೂತನ ಗ್ರಂಥಾಲಯದ ವಿಶೇಷತೆ : ಗ್ರಂಥಾಲಯದಲ್ಲಿ ಸುಮಾರು 36 ಸಾವಿರ ಪುಸ್ತಕಗಳಿದ್ದು,ದಿನಪತ್ರಿಕೆಹಾಗೂನಿಯತಕಾಲಿಕೆಗಳ ಲಭ್ಯತೆಯೂ ಇದೆ. ಜೊತೆಗೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರಿಗೆ ಪ್ರತ್ಯೇಕ ವಾಚನಾ ಲಯ ವಿಭಾಗಗಳನ್ನುಕಟ್ಟಡ ಒಳಗೊಂಡಿದೆ. ಕಟ್ಟಡದ ನೆಲಮಹಡಿಯಲ್ಲಿ ಪುಸ್ತಕ ವಿತರಣಾ ವಿಭಾಗ, ವಾಚನಾ ವಿಭಾಗ, ಸ್ಪರ್ಧಾತ್ಮಕ ಪರೀûಾ ವಿಭಾಗ, ಇ-ಗ್ರಂಥಾಲಯ, ಬ್ರೈಲ್‌ ಹಾಗೂ ದಿವ್ಯಾಂಗರ ವಿಭಾಗ, ಹಿರಿಯ ನಾಗರಿಕರ ವಿಭಾಗ, ಮಕ್ಕಳ ವಿಭಾಗ, ಮಹಿಳೆಯರ ವಿಭಾಗ, ಶೌಚಾಲಯಗಳು ಇರಲಿವೆ. ಮೊದಲನೆಯ ಮಹಡಿಯಲ್ಲಿ ಗ್ರಂಥಾಲಯ ಅಧಿಕಾರಿಗಳ ಕಾರ್ಯಾಲಯ, ಆಡಳಿತಾತ್ಮಕ ವಿಭಾಗ ಹಾಗೂ ತರಬೇತಿ ಕೊಠಡಿ ಇದೆ. ಅಲ್ಲದೇ ಗ್ರಂಥಾಲಯ ಆವರಣದಲ್ಲಿ ಔಷಧೀಯ ಸಸ್ಯಗಳ ಉದ್ಯಾನವನ, ಲ್ಯಾಂಡ್‌ ಸ್ಕೇಪಿಂಗ್‌, ದ್ವಿಚಕ್ರ ವಾಹನ ನಿಲ್ದಾಣ, ಪಾಥ್‌ ವೇ,ಕಲ್ಲಿನಬೆಂಚ್‌ಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಅದರೊಂದಿಗೆ ಮಳೆ ನೀರು ಕೊಯ್ಲು ಈಗಾಗಲೇ ಅಳವಡಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.