ಬಿಇಒ ಅಮಾನತಿಗೆ ದಸಂಸ ಹಾಗೂ ಪ್ರಗತಿಪರ ಸಂಘಟನೆಗಳ ಆಗ್ರಹ


Team Udayavani, Nov 24, 2021, 4:57 PM IST

Untitled-1

ಪಿರಿಯಾಪಟ್ಟಣ: ಶಿಕ್ಷಣ ಸಂಸ್ಥೆಗೆ ಮೀಸಲಿದ್ದ ಆಸ್ತಿಯನ್ನು  ಬಿಇಒ ವೈ.ಕೆ.ತಿಮ್ಮೇಗೌಡ  ಖಾಸಗಿ ಸಹಕಾರ ಸಂಘಕ್ಕೆ ಅಕ್ರಮವಾಗಿ ಮಾರಾಟ ಮಾಡುವ ಹುನ್ನರಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಸಂಸ ಹಾಗೂ ಪ್ರಗತಿಪರ ಸಂಘಟನೆಯ ಒಕ್ಕೂಟದ ಪದಾಧಿಕಾರಿಗಳು  ಬಿಇಒ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ನಾಯಕರ ಸಂಘದ ಅಧ್ಯಕ್ಷ ಪಿ.ಪಿ.ಪುಟ್ಟಯ್ಯ ಮಾತನಾಡಿ ಪಟ್ಟಣದ ಬಿ.ಎಂ.ರಸ್ತೆಯ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ ಜಾಗವನ್ನು ಬಿಇಒರವರು ಕೆಲವು ಪಟ್ಟಭದ್ರ ಹಿತಾಸಕ್ತಿಗಳೊಡನೆ ಸೇರಿಕೊಂಡು ಖಾಸಗಿ ಸಹಕಾರ ಸಂಘಕ್ಕೆ ಖಾತೆ ಮಾಡಿ ಮಾರಾಟ ಮಾಡುವ ಹುನ್ನಾರ ನಡೆಸಿದ್ದಾರೆ. ಪಟ್ಟಣದ ಸರ್ವೆ ನಂ.107 ರಲ್ಲಿ ವಿದ್ಯಾಸಂಸ್ಥೆಗೆ ಸೇರಿದ 2.17 ಗುಂಟೆ ಜಾಗವಿದೆ. ಇದರಲ್ಲಿ ಶಾಲೆ ಹಾಗೂ ಶಿಕ್ಷಕರ ಸಭಾಂಗಣವಿದೆ ಹೀಗಿದ್ದರೂ ಖಾಸಗಿ ಸಹಕಾರ ಸಂಘಕ್ಕೆ ಅಕ್ರಮವಾಗಿ ಪರಭಾರೆ ನಡೆಸಲು ಹುನ್ನಾರ ನಡೆಸಿ ಸರ್ಕಾರಿ ಜಾಗವನ್ನು ಕಬಳಿಸಲು ಮುಂದಾಗಿದ್ದಾರೆ. ಈ ವಿಷಯವಾಗಿ ಈಗಾಗಲೇ ಜಿಲ್ಲಾಧಿಕಾರಿಗಳು ಬಿಇಒಗೆ ನೋಟೀಷ್ ನೀಡಿದ್ದು,  ಈ ಪ್ರಕರಣವು ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರ ಸಮ್ಮುಖದಲ್ಲಿ ವಿಚಾರಣೆ ಹಂತದಲ್ಲಿದೆ ಹೀಗಿದ್ದರೂ ಬಿಇಒ ತಿಮ್ಮೇಗೌಡರು ಪದೇಪದೇ ಜಾಗವನ್ನು ಖಾಸಗಿಯವರಿಗೆ ಖಾತೆ ಮಾಡಿಕೊಡಲು ಪತ್ರ ವ್ಯವಹಾರ ನಡೆಸುತ್ತಿದ್ದಾರೆ ಸರ್ಕಾರಿ ಜಾಗವನ್ನು ಪರಭಾರೆ ಮಾಡುವ ಅಧಿಕಾರವನ್ನು ಇವರಿಗೆ ಕೊಟ್ಟವರು ಯಾರು ಆಗಾದರೆ ನಮ್ಮಲ್ಲೂ ಹತ್ತಾರರು ಸಹಕಾರ ಸಂಘಗಳಿವೆ ನಮಗೂ ಜಾಗವನ್ನು ಹಸ್ತಾರಂತರ ಮಾಡಲಿ ಎಂದು ದೂರಿದರು.

ದಸಂಸ ಮುಖಂಡ ಈರಾಜ್ ಬಹುಜನ್ ಮಾತನಾಡಿ ಪಟ್ಟಣದಲ್ಲಿ ನಿರ್ಮಿಸಲು ಹೊರಟಿರುವ ಗುರುಭವನ ನಿರ್ಮಾಣ ನಿರ್ವಹಣಾ ಸಮಿತಿಯ ಹೆಸರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಭಾಂಗಣ ಎಂಬುದಾಗಿ ಬೋರ್ಡ್ ಹಾಕುವ ಮೂಲಕ ಶಿಕ್ಷಕರಲ್ಲಿ ವರ್ಗ ಸಂಘರ್ಷವನ್ನು ಉಂಟು ಮಾಡುತ್ತಿದ್ದಾರೆ. ಮಾಹಿತಿ ಹಕ್ಕು ಅಧಿನಿಯಮದಡಿಯಲ್ಲಿ ಈ ವರೆಗಿನ ಲೆಕ್ಕಪತ್ರವನ್ನು ಕೇಳಿದರೆ ಮಾಹಿತಿ ನೀಡಲು ನಿರಾಕರಿಸುತ್ತಿದ್ದಾರೆ. ಅಮಾಯಕ ಶಿಕ್ಷಕರಿಗೆ ವೇತನ ಬಡ್ತಿಯನ್ನು ನೀಡುವುದಾಗಿ ಹೇಳಿ ನಿಯಮ ಬಾಹಿರವಾಗಿ ಬಲವಂತವಾಗಿ ಛಾಪಾ ಕಾಗದವನ್ನು ಪಡೆಯಲು ಸಂಘದ ಕೆಲವು ಪದಾಧಿಕಾರಿಗಳನ್ನು ಮುಂದಿಟ್ಟುಕೊಂಡು ಶಿಕ್ಷಕರಿಂದ ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದಾರೆ. ತಮಗಿರುವ ಪರಮಾಧಿಕಾರ ಬಳಸಿಕೊಂಡು ತಮಗೆ ಬೇಕಾದವರನ್ನು ಹಾಗೂ ಯಾರೂ ಹಣ ನೀಡುತ್ತಾರೋ ಅವರನ್ನು ಆಯಾಕಟ್ಟಿನ ಸ್ಥಳಗಳಿಗೆ ನಿಯೋಜನೆ ಮಾಡುತ್ತಿದ್ದಾರೆ ಎಂದರು.

ಮುಖಂಡ ಕೋಗಿಲವಾಡಿ ರಾಮಚಂದ್ರ ಮಾತನಾಡಿ ಪಿರಿಯಾಪಟ್ಟಣ ತಾಲ್ಲೂಕು ಒರತು ಪಡಿಸಿ ಈಗಾಗಲೇ ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಶಿಕ್ಷಕರ ವೇತನ ಬಡ್ತಿ ಮಾಡಲಾಗಿದೆ ಆದರೆ ಪಿರಿಯಾಪಟ್ಟಣದಲ್ಲಿ ಬಿಇಒ ತಿಮ್ಮೇಗೌಡರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರನ್ನು ಮುಂದೆ ಬಿಟ್ಟುಕೊಂಡು ಶಿಕ್ಷಕರಿಂದ ಬಲವಂತವಾಗಿ ಛಾಪ ಕಾಗದ ಪಡೆದು ಶಿಕ್ಷಕರಿಗೆ ಆಮೀಷ ಒಡ್ಡಿ ಅವರಿಂದ ತರವಲ್ಲದ ರೀತಿಯಲ್ಲಿ ನೋಟರಿ ಮುಕಾಂತರ ಛಾಪ ಕಾಗದಕ್ಕೆ ಶಿಕ್ಷಕರ ಕುಟುಂಬಸ್ಥರೆಲ್ಲರ  ಸಹಿಯನ್ನು ಬಲವಂತವಾಗಿ ಪಡೆಯುತ್ತಿದ್ದಾರೆ. ಆದ್ದರಿಂದ ಕಾನೂನು ಬಾಹಿರವಾಗಿ ಸರ್ಕಾರಿ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿರುವ ಬಿಇಒರನ್ನು ಕೂಡಲೇ ಅಮಾನತು ಪಡಿಸಬೇಕು ಇಲ್ಲದಿದ್ದರೆ ಶಿಕ್ಷಣ ಇಲಾಖೆಯ ಉಪ ನಿರ್ದೆಶಕರ ಕಚೇರಿ ಮತ್ತು  ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಿರಸ್ಥೆದಾರ್ ವಿನಯ್ ಕುಮಾರ್ ರವರಿಗೆ ಮನವಿತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲ ನಂದಿಪುರ ಲೋಕೇಶ್, ಬೀಮ್ ಆರ್ಮಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಕ್ರಮ್ ಪಾಷ, ಪ್ರಗತಿಪರ ಸಂಘಟನೆಯ ಮುಖಂಡರಾದ ವಾಜೀದ್ ಪಾಷಾ, ಎನ್.ಡಿ.ಬಸವರಾಜು, ತಮ್ಮಡಹಳ್ಳಿ ರವಿ, ಕಲ್ಕೆರೆ ಪ್ರಕಾಶ್, ಆಯಿತನಹಳ್ಳಿ ಶ್ರೀನಿವಾಸ್, ಬೂದಿತಿಟ್ಟು ಗಣೇಶ್, ಆಲನಹಳ್ಳಿ ಶ್ರೀನಿವಾಸ್, ಕಂಪಲಾಪುರ ಅನಿಲ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಪಿರಿಯಾಪಟ್ಟಣದ ಬಿಇಒ ಕಚೇರಿ ಮುಂದೆ ಬಿಇಒ ವೈ.ಕೆ.ತಿಮ್ಮೇಗೌಡರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ ದಸಂಸ ಹಾಗೂ ಪ್ರಗತಿಪರ ಸಂಘಟನೆಯ ಒಕ್ಕೂಟದ ಪದಾಧಿಕಾರಿಗಳು  ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.