ಸರ್ಕಾರಿ ಸೌಲಭ್ಯ ಸದುಪಯೋಗಿಸಿಕೊಳ್ಳಿ: ಮಂಜುನಾಥ್‌


Team Udayavani, Mar 4, 2020, 3:00 AM IST

sarkari

ಹುಣಸೂರು: ತಾಲೂಕಿನ ನಾಲ್ಕು ಸರಕಾರಿ ಪದವಿ ಕಾಲೇಜುಗಳ ಮೊದಲ ವರ್ಷದ 1,470 ವಿದ್ಯಾರ್ಥಿಗಳಿಗೆ ಜ್ಞಾನದೀಪ್ತಿ ಯೋಜನೆಯಡಿ ಶಾಸಕ ಎಚ್‌.ಪಿ.ಮಂಜುನಾಥ್‌ ಸರಕಾರದ ಉಚಿತ ಲ್ಯಾಪ್‌ಟಾಪ್‌ ವಿತರಿಸಿದರು.

ನಗರದ ಸರಕಾರಿ ಮಹಿಳಾ ಕಾಲೇಜು ಹಾಗೂ ಡಿ.ಡಿ.ಅರಸು ಕಾಲೇಜಿನಲ್ಲಿ ನಡೆದ ಪ್ರತ್ಯೇಕ ಸಮಾರಂಭದಲ್ಲಿ ನಗರ ಮತ್ತು ಹನಗೋಡು, ಬಿಳಿಕೆರೆ ಪದವಿಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿ ಮಾತನಾಡಿದ ಅವರು, 2016-17ರಲ್ಲಿ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಲ್ಯಾಪ್‌ಟಾಪ್‌ ವಿತರಣೆ ಯೋಜನೆ ಜಾರಿಗೊಳಿಸಿದ್ದರು, ಆ ನಂತರದಲ್ಲಿ ಯೋಜನೆ ನಿಂತು ಹೋಗಿತ್ತು, ಇದೀಗ ಮತ್ತೆ ಜಾರಿಗೊಳಿಸಿದೆ. ಇದನ್ನು ಸದ್ಬಳಕೆ ಮಾಡಿಕೊಂಡು, ನಿಮ್ಮ ಜ್ಞಾನ ಹೆಚ್ಚಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಪೋಷಕರ ಕಾಳಜಿ ಮುಖ್ಯ: ಕಾಲೇಜು ವತಿಯಿಂದ ಕರೆಯುವ ಪೋಷಕರ ಸಭೆಗೆ ಸಾಕಷ್ಟು ಮಂದಿ ಬರುವುದಿಲ್ಲ, ಆದರೆ ಲ್ಯಾಪ್‌ಟಾಪ್‌ ಪಡೆಯುವ ಸಲುವಾಗಿ ಈಗ ಮಕ್ಕಳ ಜೊತೆ ಎಲ್ಲರೂ ಬಂದಿದ್ದೀರಾ, ನಿಮ್ಮ ಮಕ್ಕಳ ಕಲಿಕೆ ಹಾಗೂ ಪ್ರಗತಿಯ ಬಗ್ಗೆ ಆಗಾಗ್ಗೆ ಕಾಲೇಜಿಗೆ ಭೇಟಿ ನೀಡುತ್ತಿರಬೇಕು, ಇದರಿಂದ ನಿಮ್ಮ ಮಕ್ಕಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಬಹುದಾಗಿದೆ. ವರ್ಷಕ್ಕೆರಡು ಬಾರಿ ನಡೆಯುವ ಪೋಷಕರ ಸಭೆಗೆ ಕಡ್ಡಾಯವಾಗಿ ಭಾಗವಹಿಸಿ ಎಂದು ಮನವಿ ಮಾಡಿದರು.

ಮಹಿಳಾ ಕಾಲೇಜು ಸಮಗ್ರ ಅಭಿವೃದ್ಧಿ: ಕಾಲೇಜಿಗೆ 4.98 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆಯಾಗಿದೆ. ಈ ರಜೆಯಲ್ಲಿ ಕಟ್ಟಡ ಕಾಮಗಾರಿ ನಡೆಯಲಿದೆ. ಅಲ್ಲದೆ ಕಾಲೇಜಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕಟಿಬದ್ಧನಾಗಿದ್ದೇನೆ ಎಂದು ಮಾಹಿತಿ ನೀಡಿದರು.

ಡಿ.ಡಿ.ಅರಸ್‌ ಕಾಲೇಜು ಅಭಿವೃದ್ಧಿಗೆ ಕ್ರಮ: ತಾವು ವ್ಯಾಸಂಗ ಮಾಡಿರುವ ಈ ಕಾಲೇಜಿನ ಅಭಿವೃದ್ಧಿ ನನ್ನ ಕನಸು, 2020-21ನೇ ಸಾಲಿನಲ್ಲಿ ಮಹಿಳಾ ಹಾಸ್ಟೆಲ್‌ ಆರಂಭಿಸಲಾಗುವುದು. ಒಳಾಂಗಣ ಕ್ರೀಡಾಂಗಣ, ಸ್ನೇಹ ಮಂಟಪ ಹಾಗೂ ಆವರಣವನ್ನು ಅಭಿವೃದ್ಧಿಗೊಳಿಸಲಾಗುವುದು. ಕ್ಯಾಂಟೀನ್‌ ವ್ಯವಸ್ಥೆ ಕಲ್ಪಿಸಲಾಗುವುದು ಹಾಗೂ ತಾಲೂಕಿನ ಹನಗೋಡು, ಬಿಳಿಕೆರೆ ಕಾಲೇಜು ಸೇರಿದಂತೆ ನಾಲ್ಕು ಕಾಲೇಜುಗಳನ್ನು ಖಾಸಗಿ ಕಾಲೇಜುಗಳಿಗೆ ಮೀರಿಸುವಂತೆ ಅಭಿವೃದ್ಧಿಗೊಳಿಸುವುದಾಗಿ ಭರವಸೆ ನೀಡಿದರು.

ಸದನದಲ್ಲಿ ಪ್ರಶ್ನಿಸುವೆವು: ಲ್ಯಾಪ್‌ಟಾಪ್‌ ವಿತರಣೆಯಲ್ಲಿ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತಾರತಮ್ಯವಾಗಿರುವುದು ಬೇಸರ ತಂದಿದೆ. ಈ ಬಗ್ಗೆ ಶಾಸಕ ಮಿತ್ರರೊಂದಿಗೆ ಚರ್ಚಿಸಿದ್ದು, ಕನಿಷ್ಠ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾದರೂ ಲ್ಯಾಪ್‌ಟಾಪ್‌ ವಿತರಣೆ ಮಾಡಬೇಕೆಂದು ಸದನದಲ್ಲಿ ಸರಕಾರದ ಮೇಲೆ ಒತ್ತಡ ತರುತ್ತೇವೆಂದು ತಿಳಿಸಿದರು.

ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಅಮರ್‌ನಾಥ್‌ ಮಾತನಾಡಿ, ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಒಂದನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಸರಕಾರ ಅನೇಕ ಪ್ರೋತ್ಸಾಹ ನೀಡುತ್ತಿದೆ. ಇದನ್ನು ಬಳಸಿಕೊಂಡು ಪ್ರಗತಿ ಕಾಣಬೇಕೆಂದು ಹೇಳಿದರು.

ಜಿಪಂ ಉಪಾಧ್ಯಕ್ಷೆ ಗೌರಮ್ಮ, ತಾಪಂ ಅಧ್ಯಕ್ಷೆ ಪದ್ಮಮ್ಮ, ನಗರಸಭಾ ಸದಸ್ಯರಾದ ಶ್ರೀನಾಥ್‌, ಪ್ರಿಯಾಂಕತೋಮಸ್‌, ಗ್ರಾಪಂ ಅಧ್ಯಕ್ಷೆ ಸುಮಿತ್ರ, ಸಿಡಿಸಿ ಉಪಾಧ್ಯಕ್ಷ ಧರ್ಮನಾರಾಯಣ್‌, ಪ್ರಾಚಾರ್ಯರಾದ ಡಾ.ವೆಂಕಟೇಶಯ್ಯ, ಜ್ಞಾನಪ್ರಕಾಶ್‌, ಡಾ.ಹನುಮಂತರಾಯ, ಡಾ.ಲಿಂಗೇಗೌಡ ಇದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.