ವಾಜಪೇಯಿ ಜನ್ಮದಿನ: ರೈತರು, ಪೌರ ಕಾರ್ಮಿಕರಿಗೆ ಸನ್ಮಾನ


Team Udayavani, Dec 27, 2020, 7:30 PM IST

ವಾಜಪೇಯಿ ಜನ್ಮದಿನ: ರೈತರು, ಪೌರ ಕಾರ್ಮಿಕರಿಗೆ ಸನ್ಮಾನ

ಮೈಸೂರು: ಮಾಜಿ ಪ್ರಧಾನಿ ಅಟಲ್‌ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ನಗರದ ವಿವಿಧೆಡೆಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಾಜಪೇಯಿ ಅವರ ಸಾಧನೆ ಮತ್ತು ಕೊಡುಗೆಯನ್ನು ಸ್ಮರಿಸಿದರು.

ಪಿಂಜರಾ ಪೋಲ್‌ನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಹಸುಗಳನ್ನು ತೊಳೆದು ಗೋಶಾಲೆ ಸ್ವತ್ಛಗೊಳಿಸುವ ಮೂಲಕ ವಾಜಪೇಯಿಅವರ ಜನ್ಮದಿನ ಆಚರಣೆ ಮಾಡಲಾಯಿತು. ಸಂಸದಪ್ರತಾಪ್‌ ಸಿಂಹ, ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌.ಶ್ರೀವತ್ಸ ಹಾಗೂಯುವ ಮೋರ್ಚಾ ಕಾರ್ಯಕರ್ತರು ಗೋಶಾಲೆ ಸ್ವತ್ಛಗೊಳಿಸಿ, ಗೋವುಗಳನ್ನು ತೊಳೆದು ಅವುಗಳಿಗೆ ಪೂಜೆ ಸಲ್ಲಿಸಿದರು.

ಸಾಕಷ್ಟು ಕಾರ್ಯಕ್ರಮ : ಈ ವೇಳೆ ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ತಾನು ಬಾಲ್ಯದಲ್ಲಿ ಹಸುಗಳನ್ನು ತೊಳೆದು, ಹೋಟೆಲ್‌ಗ‌ಳಿಗೆ ಹಾಲು ಹಾಕಿ ನಂತರ ಶಾಲೆಗೆ ಹೋಗುತ್ತಿದ್ದೆ. ಈಗ ಮತ್ತೆಬಾಲ್ಯದ ನೆನಪಾಯಿತು. ಭಾರತದ ಹೆಮ್ಮೆಯ ವ್ಯಕ್ತಿತ್ವ ಅವರು. ಹೈವೇ, ನ್ಯೂಕ್ಲಿಯರ್‌ ಟೆಸ್ಟ್‌, ಸರ್ವಶಿಕ್ಷಣ ಅಭಿಯಾನ, ಮೊಬೈಲ್‌ ಕ್ರಾಂತಿ, ವಸತಿ ಕ್ಷೇತ್ರದ ಅಭಿವೃದ್ಧಿ ಸೇರಿ ಅಭಿವೃದ್ಧಿಗೆ ಪೂರಕವಾದ ಸಾಕಷ್ಟು ಕಾರ್ಯಕ್ರಮಗಳ ಹರಿಕಾರ ಎಂದು ಸ್ಮರಿಸಿದರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಜೆ.ಕಿರಣ್‌ ಗೌಡ, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್‌ ಕುಮಾರ್‌, ಧೀರಜ್‌ ಪ್ರಸಾದ್‌, ಜೈಶಂಕರ್‌ ಮತ್ತಿತರರು ಇದ್ದರು.

ಪ್ರಗತಿಪರ ರೈತರಿಗೆ ಸನ್ಮಾನ: ಬಿಜೆಪಿ ನಗರ ರೈತ ಮೋರ್ಚಾ ವತಿಯಿಂದ ಸಚ್ಚಿನ್‌ ರಾಜೇಂದ್ರ ಭವನದಲ್ಲಿ ವಾಜಪೇಯಿ ಜನ್ಮದಿನಾಚರಣೆ, ಪ್ರಧಾನಿ ಮೋದಿ ರೈತರಿಗೆ ಖಾತೆಗೆ ಹಣ ಹಾಕುತ್ತಿದ್ದ ಹಿನ್ನೆಲೆಯಲ್ಲಿ ದೇವನಗಳ್ಳಿಯ ಶಂಕರೇಗೌಡ (ರೈತ), ಸುರೇಶ್‌ (ಸಮಗ್ರ ಕೃಷಿ ಬೆಳೆಗಾರ), ಪವಿತ್ರ (ರೈತ ಮಹಿಳೆ), ಸೋಮಶೇಖರ್‌ (ಸಮಗ್ರ ಕೃಷಿ ಬೆಳೆಗಾರ), ನವೀನ್‌ (ಅರಣ್ಯ ಆಧಾರಿತ ಬೇಸಾಯಗಾರ) ಅವರನ್ನು ಸನ್ಮಾನಿಸಲಾಯಿತು. ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌, ಸಂಸದ ಪ್ರತಾಪ್‌ ಸಿಂಹ, ದೇವರಾಜ್‌ ಇದ್ದರು.

ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ ಮಾತನಾಡಿ, ಅಟಲ್‌ ಬಿಹಾರಿ ವಾಜಪೇಯಿ ಅಯೋಧ್ಯೆಯಲ್ಲಿ ರಾಮಜನ್ಮ ಭೂಮಿ ನಿರ್ಮಾಣದ ಹೋರಾಟ ಯಶಸ್ವಿಯಾಗಲು ವಿಜಯಸಂಕಲ್ಪ ಯಾತ್ರೆ ರೂಪಿಸಿದವರೇ ಅಟಲ್‌. 1961ರಿಂದ ಬಹುಕಾಲ ಸಾಕಷ್ಟು ರಾಷ್ಟ್ರೀಯ ಸಮಿತಿಗಳ ಸದಸ್ಯರಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆಂದರು.

ಪೌರ ಕಾರ್ಮಿಕರಿಗೆ ಸನ್ಮಾನ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಹಿನ್ನೆಲೆ ಬಿಜೆಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಸುಶಾಸನ ದಿನವನ್ನು ನರಸಿಂಹ ರಾಜ ಕ್ಷೇತ್ರದ ಬಲಮುರಿ ಗಣಪತಿ ದೇವಾಲಯದಲ್ಲಿ ಸ್ವತ್ಛತೆ ಮಾಡುವ ಮೂಲಕ ಆಚರಿಸಲಾಯಿತು. ಮುಂಜಾನೆ 7 ಗಂಟೆಗೆ ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷ ಜೋಗಿಮಂಜು ತಂಡ ಸ್ವತ್ಛತಾ ಸಲಕರಣೆಗಳೊಂದಿಗೆ ರಾಜಕುಮಾರ್‌ ರಸ್ತೆಯ ಬಲಮುರಿ ಗಣಪತಿ ದೇವಾಲಯದ ಸುತ್ತಮುತ್ತ ಸ್ವತ್ಛತೆ ಮಾಡಿ, ಪೌರಕಾರ್ಮಿಕರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪೌರಕಾರ್ಮಿಕರಾದ ಬಾಲಸುಂದರ್‌, ಸರೋ ಜಮ್ಮ, ನಾಗರತ್ನ ಅವರನ್ನು ಸನ್ಮಾನಿಸಿ ಸಾರ್ವಜನಿಕ ರಿಗೆ ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್‌ ವಿತರಿಸ ಲಾಯಿತು. ರಾಜ್ಯ ಪ್ರ. ಕಾರ್ಯದರ್ಶಿ ಸುರೇಶ್‌ ಬಾಬು, ಸದಸ್ಯ ಉಮೇಶ್‌, ಪ್ರಧಾನ ಕಾರ್ಯದರ್ಶಿ ಗೋಪಾಲ್, ಮಣಿರತ್ನಂ, ನಾಗೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.