ವಾಲ್ಮೀಕಿ ಪ್ರಪಂಚದ ಮೊದಲ ಸ್ತ್ರೀವಾದಿ


Team Udayavani, Oct 21, 2019, 3:00 AM IST

valmiki-pra

ಹುಣಸೂರು: ಜಗತ್ತಿನ ಮಹಾಕಾವ್ಯಗಳಲ್ಲಿ ವಾಲ್ಮೀಕಿ ವಿರಚಿತ ರಾಮಾಯಣ, ವ್ಯಾಸರ ಮಹಾಭಾರತ ಕಾವ್ಯಕಲ್ಪಿತ ಕಥನ, ಭಾವಗೀತೆ ಎನ್ನಬಹುದು. ಇಂತಹ ಮಹನೀಯರ ಬದುಕು, ಬವಣೆ ಬಗ್ಗೆ ಅರಿತು ದೇಶದ ಆಸ್ತಿಯಾಗಬೇಕು ಎಂದು ಮೈಸೂರು ವಿವಿ ಸಹಾಯಕ ಪ್ರಾಧ್ಯಾಪಕಿ ಡಾ.ಎಚ್‌.ಪಿ.ಜ್ಯೋತಿ ಆಶಿಸಿದರು. ತಾಲೂಕು ನಾಯಕರ ಸಂಘ ರಾಷ್ಟ್ರೀಯಹಬ್ಬಗಳ ಆಚರಣಾಸಮಿತಿಯ ಸಹಯೋಗದಲ್ಲಿ ನಗರದ ಮುನೇಶ್ವರ ಕಾವಲ್‌ ಮೈದಾನದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಸಮುದಾಯದವರು ಒಗ್ಗಟ್ಟಾಗಬೇಕಿದೆ: ದೇಶದ ಸಂಸ್ಕೃತಿ, ಕುಟುಂಬ ಎಂಬುದು ರಾಮಾಯಣದ ಪರಿಕಲ್ಪನೆಯಾಗಿದೆ. ಮಹರ್ಷಿ ವಾಲ್ಮೀಕಿಯವರ ಆದರ್ಶವನ್ನು ಗಾಂಧೀಜಿ ಸಹ ಅನುಸರಿಸಿದ್ದರು. ಜತೆಗೆ ಪ್ರಪಂಚದ ಪ್ರಥಮ ಸ್ತ್ರೀವಾದಿಯಾಗಿದ್ದವರು, ಇಂತಹ ಮಹರ್ಷಿ ಶೋಷಿತ ಜನಾಂಗದಲ್ಲಿ ಹುಟ್ಟಿರುವ ಕಣ್ಮಣಿ. ನಾಯಕ ಸಮುದಾಯದಲ್ಲಿ ಒಗ್ಗಟ್ಟಿಲ್ಲದಿರುವುದು ಕಾಣುತ್ತಿದ್ದೇವೆ. ಎಲ್ಲರೂ ಭವಿಷ್ಯಕ್ಕಾಗಿ ಒಗ್ಗಟ್ಟಾಗಬೇಕಿದೆ, ಮುಖ್ಯವಾಗಿ ಶಿಕ್ಷಣಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಅನರ್ಹ ಶಾಸಕ ಎಚ್‌.ವಿಶ್ವನಾಥ್‌ ಮಾತನಾಡಿ, ಕುವೆಂಪುರವರು ತಮ್ಮ ರಾಮಾಯಣ ದರ್ಶನದಲ್ಲಿ ವಾಲ್ಮೀಕಿಯವರ ರಾಮಾಯಣವನ್ನು ವಿಭಿನ್ನ ಶೈಲಿಯಲ್ಲಿ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ನಾಯಕ ಸಮುದಾಯದ ಯುವಕರು ವಾಲ್ಮೀಕಿಯವರ ಆದರ್ಶದ ಬಗ್ಗೆ ಅರಿಯಲು ರಾಮಾಯಣ ದರ್ಶನ ಓದಬೇಕು. ರಾಜನಹಳ್ಳಿ ಮಠಾಧಿಪತಿಗಳು, ದಿ.ಚಿಕ್ಕಮಾದು ಸೇರಿದಂತೆ ಸಮುದಾಯದ ಅನೇಕರು ಎಸ್‌.ಟಿ.ಪಂಗಡಕ್ಕೆ ಸೇರಿಸಲು ಶ್ರಮಿಸಿದ್ದಾರೆ. ಮುಂದೆ ನಾಯಕರ ಉಪ ಪಂಗಡ ಸೇರಿಸಲು ಕ್ರಮ ವಹಿಸಬೇಕಿದೆ ಎಂದರು.

ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ: ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ತಾಲೂಕು ನಾಯಕರ ಸಂಘದ ಅಧ್ಯಕ್ಷ ಅನಿಲ್‌ ಚಿಕ್ಕಮಾದು ಮಾತನಾಡಿ, ವಾಲ್ಮೀಕಿ ಬದುಕು, ಬರಹ ನಮ್ಮ ಜನಾಂಗದ ಅಸ್ಮಿತೆ, ಅದನ್ನು ಅನುಸರಿಸುವ ಮೂಲಕ ಪ್ರಾಜ್ಞರಾಗೋಣ, ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಒಗ್ಗಟ್ಟಾಗಿ ಸಾಗೋಣವೆಂದು ಮನವಿ ಮಾಡಿದರು.

ಜನಾಂಗದ ಮುಖಂಡ ಅಪ್ಪಣ್ಣ ಮಾತನಾಡಿ, ಜನಾಂಗದ ಬಗ್ಗೆ ಅಪಾರ ಕಾಳಜಿಹೊಂದಿದ್ದ ಮಾಜಿ ಶಾಸಕ ಚಿಕ್ಕಮಾದು ಹೋರಾಟ ಸಮುದಾಯದ ಯುವಕರಿಗೆ ಸ್ಫೂರ್ತಿಯಾಗಬೇಕು. ಸಮಾಜದ ಮುಖಂಡರು ಯಾವುದೇ ಪಕ್ಷದಲ್ಲಿ ಗುರ್ತಿಸಿಕೊಂಡಿರಿ ಆದರೆ ಸಮಾಜದ ವಿಷಯದಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಮುಂದಿನ ದಿನಗಳಲ್ಲಿ ಶಾಸಕ ಅನಿಲ್‌ ಚಿಕ್ಕಮಾದು ಸಮ್ಮುಖದಲ್ಲೇ ಸಭೆ ಆಯೋಜಿಸಿ ಗೊಂದಲಗಳನ್ನು ಪರಿಹರಿಸಿಕೊಳ್ಳುವಂತೆ ಸಲಹೆ ನೀಡಿದರು.

ಮುಖಂಡ ಅಣ್ಣಯ್ಯನಾಯಕ, ಜಿಪಂ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್‌, ಸದಸ್ಯ ಕಟ್ಟನಾಯಕ, ಶಿಕ್ಷಕ ಸೋಮಶೇಖರ್‌ ಮಾತನಾಡಿದರು. ತಹಶೀಲ್ದಾರ್‌ ಬಸವರಾಜ್‌, ಇಒ ಗಿರೀಶ್‌, ನಾಯಕ ಸಂಘದ ಮಾಜಿ ಅಧ್ಯಕ್ಷ ತಿಮ್ಮನಾಯಕ, ಶಿವಣ್ಣ, ಪ್ರಧಾನ ಕಾರ್ಯದರ್ಶಿ ರವಿ, ಮುಖಂಡ ಕೆಂಪನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸಾಕಷ್ಟು ಸಂಖ್ಯೆಯಲ್ಲಿ ಸಮುದಾಯದ ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.